Webdunia - Bharat's app for daily news and videos

Install App

ಹಳೆ ಮೈಸೂರು ಭಾಗದಲ್ಲಿ ಬಿಜೆಪಿ ಬಲ ಹೆಚ್ಚಳ: ಅರುಣ್ ಸಿಂಗ್

Webdunia
ಮಂಗಳವಾರ, 31 ಆಗಸ್ಟ್ 2021 (16:17 IST)
ಬೆಂಗಳೂರು: ಹಳೆ ಮೈಸೂರು ಭಾಗದಲ್ಲಿ ಬಿಜೆಪಿ ಹೆಚ್ಚು ಸದೃಢವಾಗುತ್ತಿದೆ. ಪಂಚಾಯತ್ ಚುನಾವಣೆಯಲ್ಲಿ ಹಾಸನ, ಮಂಡ್ಯ ಮತ್ತಿತರ ಕಡೆಗಳಲ್ಲಿ ಪಕ್ಷಕ್ಕೆ ಹೆಚ್ಚು ಲಾಭವಾಗಿದೆ. ಆರರಿಂದ 10 ಪಟ್ಟು ಹೆಚ್ಚು
ಸೀಟುಗಳು ಲಭಿಸಿವೆ ಎಂದು ಎಂದು ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳು ಮತ್ತು ಕರ್ನಾಟಕದ ಉಸ್ತುವಾರಿಗಳೂ ಆದ ಅರುಣ್ ಸಿಂಗ್ ತಿಳಿಸಿದರು.
ಮೈಸೂರಿನಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಪಕ್ಷ ಎಲ್ಲೆಡೆ ಬೆಳೆಯುತ್ತಿದೆ. ಕರ್ನಾಟಕದ 2023ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಬಹುಮತ ಗಳಿಸಿ ಮತ್ತೆ ಅಧಿಕಾರಕ್ಕೆ ಬರುವಂತೆ ಗರಿಷ್ಠ ಪ್ರಯತ್ನ ಮುಂದುವರಿಯಲಿದೆ. ಮೈಸೂರಿನ ಸಂಸದರು ಮತ್ತು ಶಾಸಕರು ಉತ್ತಮವಾಗಿ ಕೆಲಸ ಮಾಡಿದ್ದು, ಅಭಿವೃದ್ಧಿ ಕಾಮಗಾರಿಗಳು ನಡೆದಿವೆ ಎಂದು ಮೆಚ್ಚುಗೆ ಸೂಚಿಸಿದರು.
ಮೈಸೂರು- ಬೆಂಗಳೂರು ನಡುವಿನ ಹೆದ್ದಾರಿಯನ್ನು ದಶಪಥ ರಸ್ತೆಯನ್ನಾಗಿ ಪರಿವರ್ತಿಸಲಾಗುತ್ತಿದೆ. ಶೀಘ್ರವೇ ಕಾಮಗಾರಿ ಪೂರ್ಣವಾಗಲಿದ್ದು, ಕೇವಲ 90 ನಿಮಿಷದಲ್ಲಿ ಬೆಂಗಳೂರು ತಲುಪಲು ಇದು ಪೂರಕ ಎಂದು ವಿವರಿಸಿದರು.
ಶ್ರೀ ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ಸರಕಾರ ಅತ್ಯುತ್ತಮವಾಗಿ ಕೆಲಸ ಮಾಡುತ್ತಿದೆ. ಎಲ್ಲ ಸಚಿವರು ರಾಜ್ಯದ ಹಿತದೃಷ್ಟಿಯಿಂದ ಕೆಲಸ ಮಾಡುತ್ತಿದ್ದಾರೆ. ಯುವಕರು, ಬಡವರು, ರೈತರು ಮತ್ತು ಮಹಿಳೆಯರು ಸೇರಿ ಸಮಾಜದ ಎಲ್ಲರ ಒಳಿತಿಗಾಗಿ ಸರಕಾರ ಕೆಲಸ ಮಾಡಲಿದೆ ಎಂದು ವಿವರಿಸಿದರು.
ಕೇಂದ್ರದ ಶ್ರೀ ನರೇಂದ್ರ ಮೋದಿ ಅವರ ಸರಕಾರದ ಯೋಜನೆಗಳ ಲಾಭ ಎಲ್ಲರಿಗೂ ಸಿಗಬೇಕಿದೆ. ರಾಜ್ಯದಲ್ಲೂ ಉತ್ತಮ ಯೋಜನೆಗಳಿದ್ದು, ಅದರ ಪ್ರಯೋಜನ ಸಮರ್ಪಕವಾಗಿ ಫಲಾನುಭವಿಗೆ ಸಿಗಬೇಕೆಂಬ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸಲಾಗುತ್ತಿದೆ ಎಂದರು.
ಮೈಸೂರು ಸಂಸದರಾದ ಪ್ರತಾಪ್ ಸಿಂಹ, ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಸಿದ್ದರಾಜು, ಮೈಸೂರು ಜಿಲ್ಲಾಧ್ಯಕ್ಷರಾದ ಶ್ರೀವತ್ಸ, ಮೈಸೂರು ಗ್ರಾಮಾಂತರ ಜಿಲ್ಲಾಧ್ಯಕ್ಷರಾದ ಮಂಗಳ ಸೋಮಶೇಖರ್, ಪಕ್ಷದ ಪದಾಧಿಕಾರಿಗಳು, ಮುಖಂಡರು ಇದ್ದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ನಾಟಕ ಹವಾಮಾನ ವರದಿ: ದಕ್ಷಿಣ ಒಳನಾಡಿನ ಜಿಲ್ಲೆಗಳಿಗೆ ಭಾರಿ ಮಳೆ ಎಚ್ಚರಿಕೆ, IMD ನೀಡಿದ ಹೊಸ ಸಿಹಿ ಸುದ್ದಿ

ಉಮರ್ ಖಾಲಿದ್ ದೇಶಭಕ್ತ, ಗಾಡ್ಸೆ ದೇಶದ ಮೊದಲ ಭಯೋತ್ಪಾದಕ: ಬಿಕೆ ಹರಿಪ್ರಸಾದ್

ದೇಶಕ್ಕಿಂತ, ಪಕ್ಷವೇ ಮುಖ್ಯವಾಯ್ತಾ, ಬ್ರಿಕ್ಸ್ ಔತಣಕೂಟಕ್ಕೆ ಕರೆದರೂ ಹೋಗದ ಕಾಂಗ್ರೆಸ್ ಸಿಎಂಗಳ ವಿರುದ್ಧ ಆಕ್ರೋಶ

ವಂದೇ ಮಾತರಂ ಪೂರ್ತಿ ಹಾಡು ಹಾಕಿಲ್ಲ ಎಂದು ವೇದಿಕೆಯಿಂದಲೇ ಹೊರನಡೆದ ಬಿಜೆಪಿ ಶಾಸಕ ಚನ್ನಬಸಪ್ಪ Video

ಜೈಲಲ್ಲಿ ಪ್ರಜ್ವಲ್ ರೇವಣ್ಣಗೆ ಅಶ್ಲೀಲ ವಿಡಿಯೋ ಕೊಟ್ಟಿದ್ದು ಯಾರು, 400 ಹೆಣ್ಮಕ್ಳಿಗೆ ನ್ಯಾಯ ಕೊಟ್ರಾ: ಕುಮಾರಸ್ವಾಮಿ

ಮುಂದಿನ ಸುದ್ದಿ
Show comments