Daily Horoscope

ಗೃಹ ಸಚಿವರನ್ನು ಟಾರ್ಗೆಟ್ ಮಾಡಿದ ಬಿಜೆಪಿ?

Webdunia
ಸೋಮವಾರ, 6 ಮೇ 2019 (13:51 IST)
ಗೃಹ ಸಚಿವರ ನಡೆ ಖಂಡಿಸಿ ಹಾಗೂ ಬಿಜೆಪಿ ಕಾರ್ಯಕರ್ತರ ಬಂಧನ ಖಂಡಿಸಿ ಬಿಜೆಪಿ ತನ್ನ ಪ್ರತಿಭಟನೆಯನ್ನು ತೀವ್ರಗೊಳಿಸಿದೆ.

ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ ಮೈಸೂರು ಬ್ಯಾಂಕ್ ವೃತ್ತದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಪ್ರತಿಭಟನಾಕಾರರಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರು ಇಲ್ಲಿದ್ದಾರೆ. ಪ್ರತಿಭಟನಾನಿರತರನ್ನು ಕೆ ಎಸ್ ಆರ್ ಪಿ ಪೊಲೀಸರು ಸುತ್ತುವರಿದಿದ್ದಾರೆ.

ಮಾಜಿ ಎಂಎಲ್ ಸಿ ಅಶ್ವತ್ ನಾರಾಯಣ ಮಾತನಾಡಿ, ಈ ಹಿಂದೆ ತುರ್ತು ಪರಿಸ್ಥಿತಿ ಹೇರಿದ ಕಾರಣಕ್ಕೆ ಮಾಜಿ ಪ್ರಧಾನಿ ಇಂದಿರಾಗಾಂಧಿಗೆ ಏನಾಯ್ತು ಎಂದು ಗೊತ್ತಿದೆಯಲ್ವಾ? ಈಗ ಎಂ.ಬಿ.ಪಾಟೀಲರೂ ಹಾಗೇ ಗೃಹ ಇಲಾಖೆ ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ. ಐ ಎಸ್ ಐ ಎಸ್ ಉಗ್ರರು ಬೆಂಗಳೂರಿಗೆ ಬಂದಿರುವ ಮಾಹಿತಿ ಇದೆ. ಮೊದಲು ಅವರ ಬಗ್ಗೆ ಗಮನ ಕೊಡುವುದು ಬಿಟ್ಟು, ಬಿಜೆಪಿ ಕಾರ್ಯಕರ್ತರ ಕಡೆಗೆ ತಿರುಗಿದ್ದಾರೆ. ನೀವೂ ಏನು ಗೃಹ ಸಚಿವರಾಗಿ ಶಾಶ್ವತವಾಗಿ ಇರೋದಿಲ್ಲ.

ನೀವೂ ಮಾಜಿ ಆಗುತ್ತೀರಿ. ಆಗ ನಿಮ್ಮ ಪರಿಸ್ಥಿತಿ ಏನಾಗುತ್ತದೆ ಯೋಚಿಸಿ. ನಿಮ್ಮ ಧೋರಣೆ ಮುಂದುವರಿದರೆ ನಿಮ್ಮ ಮನೆಗೆ ಮುತ್ತಿಗೆ ಹಾಕಬೇಕಾಗುತ್ತದೆ. ನೀವು ಯಾವ ಕಾರ್ಯಕ್ರಮಕ್ಜೆ ಹೋದರೂ ನಾವು ಕಪ್ಪುಬಾವುಟ ಪ್ರದರ್ಶಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments