Webdunia - Bharat's app for daily news and videos

Install App

ಕುಮಾರಸ್ವಾಮಿಯವರೇ ಇದೇನು ಕಿಚನ್ ಕ್ಯಾಬಿನೆಟಾ? ಬಿಜೆಪಿ ಲೇವಡಿ

Webdunia
ಶುಕ್ರವಾರ, 16 ನವೆಂಬರ್ 2018 (09:21 IST)
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆ ವಿಚಾರವನ್ನು ಬಿಜೆಪಿ ಮತ್ತೆ ಕೆದಕಿದ್ದು, ಇದರ ಬಗ್ಗೆ ಸೊಲ್ಲೆತ್ತದ ಸಿಎಂ ಕುಮಾರಸ್ವಾಮಿಗೆ ಟಾಂಗ್ ಕೊಟ್ಟಿದೆ.

ಅಧಿಕಾರಕ್ಕೆ ಬಂದು ಐದು ತಿಂಗಳಾಯಿತು. ರಾಜ್ಯದಲ್ಲಿ ಒಂದು ಕುಟುಂಬ ಆಡಳಿತ ಮಾಡುತ್ತಿದೆ. ರಾಜ್ಯದಲ್ಲಿ ಸರ್ಕಾರವೇ ಇದ್ದ ಹಾಗೆ ಕಾಣುತ್ತಿಲ್ಲ ಎಂದು ಬಿಜೆಪಿ ಟ್ವಿಟರ್ ನಲ್ಲಿ ಟಾಂಗ್ ಕೊಟ್ಟಿದೆ.

ಅಲ್ಲದೆ, ರಾಜ್ಯ ಉಪಚುನಾವಣೆಗಳೆಲ್ಲಾ ಮುಗಿದವು. ನೀವೂ ಸಾಕಷ್ಟು ವಿಶ್ರಾಂತಿ ಪಡೆದಿದ್ದೀರಿ ಅಂದುಕೊಳ್ಳುತ್ತೇವೆ. ಇನ್ನಾದರೂ ನಿಮಗೆ ಸಚಿವ ಸಂಪುಟ ವಿಸ್ತರಣೆ ಮಾಡಲು ಏನೂ ತೊಂದರೆಯಿಲ್ಲ ಎಂದುಕೊಳ್ಳುತ್ತೇವೆ. ಇಲ್ಲದಿದ್ದರೆ ಇದು ಕಿಚನ್ ಕ್ಯಾಬಿನೆಟ್ ಥರಾ ಕಾಣಿಸುತ್ತೆ ಎಂದು ಬಿಜೆಪಿ ವ್ಯಂಗ್ಯ ಮಾಡಿದೆ. ಆಷಾಢ ಮುಗಿದ ಮೇಲೆ ಸಚಿವ ಸಂಪುಟ ವಿಸ್ತರಣೆಯಾಗುತ್ತದೆ ಎಂದಿದ್ದರೂ ಬಳಿಕ ಉಪ ಚುನಾವಣೆ ಹಿನ್ನಲೆಯಲ್ಲಿ ಮುಂದೂಡಲಾಗಿತ್ತು. ಹೀಗಾಗಿ ಈ ವಿಚಾರವನ್ನು ಸಿಎಂಗೆ ಬಿಜೆಪಿ ನೆನಪಿಸಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments