ಸಿಎಂ ಎಚ್ ಡಿಕೆ ನಾಪತ್ತೆ: ಬಿಜೆಪಿ ಹೀಗಂತ ಲೇವಡಿ ಮಾಡಿದ್ದೇಕೆ ಗೊತ್ತಾ?

Webdunia
ಶನಿವಾರ, 10 ನವೆಂಬರ್ 2018 (10:01 IST)
ಬೆಂಗಳೂರು: ವ್ಯಾಪಕ ವಿರೋಧದ ನಡುವೆಯೇ ರಾಜ್ಯದ ಸಮ್ಮಿಶ್ರ ಸರ್ಕಾರದ ವತಿಯಿಂದ ಆಚರಿಸಲಾಗುತ್ತಿರುವ ಟಿಪ್ಪು ಜಯಂತಿ ಬಗ್ಗೆ ಬಿಜೆಪಿ ವ್ಯಂಗ್ಯ ಮಾಡಿದೆ.

ಟಿಪ್ಪು ಜಯಂತಿ ಸರ್ಕಾರದ ಆಚರಣೆ ಮಾಡಲಾಗುತ್ತಿದೆಯಾದರೂ, ಸ್ವತಃ ಸಿಎಂ ಕುಮಾರಸ್ವಾಮಿ ವಿಶ್ರಾಂತಿ ನೆಪದಲ್ಲಿ ಕಾರ್ಯಕ್ರಮಕ್ಕೆ ಗೈರು ಹಾಜರಾಗಿರುವುದಕ್ಕೆ ಬಿಜೆಪಿ ಲೇವಡಿ ಮಾಡಿದೆ.

‘ಸಿಎಂ ಕುಮಾರಸ್ವಾಮಿ ನಾಪತ್ತೆ! ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರ ಟಿಪ್ಪು ಜಯಂತಿ ಆಚರಿಸುತ್ತಿರುವಾಗ ಸ್ವತಃ ಸಿಎಂ ನಾಪತ್ತೆ. ಸ್ವತಃ ಸಿಎಂ ಸಾಹೇಬರೇ ಕಾರ್ಯಕ್ರಮಕ್ಕೆ ಹಾಜರಾಗದೇ ತಪ್ಪಿಸಿಕೊಳ್ಳುತ್ತಿರುವಾಗ, ಇಂತಹ ಕಾರ್ಯಕ್ರಮ ಆಯೋಜಿಸುತ್ತಿರುವುದಕ್ಕೆ ಅರ್ಥವೇನು? ವೋಟ್ ಬ್ಯಾಂಕ್ ಗಾಗಿ ಒಬ್ಬ ಸಾಮೂಹಿಕ ಕೊಲೆಗಾರನನ್ನು ವೈಭವೀಕರಿಸುತ್ತಿರುವ ಸರ್ಕಾರದ ಮನಸ್ಥಿತಿ ಎನ್ನುವುದು ಇದರಿಂದಲೇ ಗೊತ್ತಾಗುತ್ತದೆ’ ಎಂದು ರಾಜ್ಯ ಬಿಜೆಪಿ ಘಟಕ ಟ್ವೀಟ್ ಮಾಡಿ ವ್ಯಂಗ್ಯ ಮಾಡಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರತಿಭಟಿಸುತ್ತಿರುವ ವಿದ್ಯಾರ್ಥಿಗಳ ಬಗ್ಗೆ‌ ಕ್ರಿಕೆಟ್ ದೇವರು ಸಚಿನ್ ಮಹತ್ವದ ಪೋಸ್ಟ್‌

ಧರ್ಮೇಂದ್ರ ಪ್ರಧಾನ್‌ರನ್ನು ಕೆಳಗಿಳಿಸದಿದ್ದರೆ, ಮುಂದೆ ಪ್ರಧಾನಿ ರಾಜೀನಾಮೆಯೆ ನಮ್ಮ ಡಿಮ್ಯಾಂಡ್ ಆಗಿರುತ್ತೆ: ಅಭಿಜೀತ್

ಮದುವೆಯಾದವರು ಹನಿಮೂನ್‍ಗೆ ಒಂದು ಬಾರಿ ವಿದೇಶಕ್ಕೆ ತೆರಳಿದರೆ ರಾಹುಲ್ ಗಾಂಧಿ ಪದೇಪದೇ ಹೊರದೇಶಕ್ಕೆ ಹೋಗುತ್ತಾರೆ

ಕೊತ್ವಾಲ್ ರಾಮಚಂದ್ರ ಅವರ ಶಿಷ್ಯ ಏಡ್ಸ್ ಇಂಜೆಕ್ಷನ್ ತಲಗುಲಿಸಿದ ಮೇಲೆ ಅಶೋಕ್ ಗೆ ಬುದ್ಧಿ ಭ್ರಮಣೆಯಾಗಿದೆ: ಬಿಕೆ ಹರಿಪ್ರಸಾದ್

ರಾತ್ರಿ ಪೂರ್ತಿ ಅನಿಲ ಸೋರಿಕೆ, ಬೆಳಗೆದ್ದು ಲೈಟ್ ಆನ್ ಮಾಡುತ್ತಿದ್ದ ಹಾಗೇ ಆವರಿಸಿದ ಬೆಂಕಿ, ಮುಂದೆ ಆಗಿದ್ದು ಭಾರೀ ಅವಘಡ

ಮುಂದಿನ ಸುದ್ದಿ
Show comments