Webdunia - Bharat's app for daily news and videos

Install App

ಕರ್ನಾಟಕ ಬಜೆಟ್ ನಲ್ಲಿ ಘೋಷಿಸಿದ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಬಿಸಿ ಇದೀಗ ರಾಹುಲ್ ಗಾಂಧಿಗೆ!

Webdunia
ಶುಕ್ರವಾರ, 6 ಜುಲೈ 2018 (09:20 IST)
ನವದೆಹಲಿ: ನಿನ್ನೆ ಸಿಎಂ ಕುಮಾರಸ್ವಾಮಿ ಮಂಡಿಸಿದ ರಾಜ್ಯ ಬಜೆಟ್ ನಲ್ಲಿ ಘೋಷಿಸಿದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಬಿಸಿ ಇದೀಗ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಗೆ ತಲೆಗೇರಿದೆ.

ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್ ದರ ಏರಿಕೆ ಮಾಡುತ್ತಿದೆ ಎಂದು ಆರೋಪಿಸಿ ಆಗಾಗ ರಾಹುಲ್ ಗಾಂಧಿ ಪ್ರಧಾನಿ ಮೋದಿಗೆ ಟಾಂಗ್ ಕೊಡುತ್ತಲೇ ಇರುತ್ತಾರೆ. ಆದರೆ ಇದೀಗ ಅವರ ಅಸ್ತ್ರ ಅವರ ಕಾಲ ಬುಡಕ್ಕೇ ಬಂದಂತಾಗಿದೆ.

ಕರ್ನಾಟಕದ ಕಾಂಗ್ರೆಸ್-ಜೆಡಿಎಸ್ ನೇತೃತ್ವದ ಸಮ್ಮಿಶ್ರ ಸರ್ಕಾರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮಾಡಿರುವುದನ್ನು ಉಲ್ಲೇಖಿಸಿ ಪ್ರತಿಪಕ್ಷ ಬಿಜೆಪಿ ಇದೀಗ ರಾಹುಲ್ ಗಾಂಧಿಯವರನ್ನು ಲೇವಡಿ ಮಾಡಿದೆ.

ಬಿಜೆಪಿ ನಾಯಕರು ತಮ್ಮ ಸಾಮಾಜಿಕ ಜಾಲತಾಣ ಪುಟಗಳಲ್ಲಿ ಕರ್ನಾಟಕದಲ್ಲಿ ಸಿಎಂ ಘೋಷಿಸಿದ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ದರವನ್ನು ಪ್ರಕಟಿಸಿ ಈಗೇನಂತೀರಿ ರಾಹುಲ್ ಎಂದು ಪ್ರಶ್ನಿಸುತ್ತಿದ್ದಾರೆ. ಈಗ ರಾಹುಲ್ ಗಾಂಧಿ ಮಾತನ್ನು ಕರ್ನಾಟಕ ಸರ್ಕಾರ ಕೂಡಾ ಕಿವಿ ಮೇಲೆ ಹಾಕಿಕೊಳ್ಳುತ್ತಿಲ್ಲ. ಅಂದರೆ ತಲೆಬುಡವಿಲ್ಲದೇ ಮಾತನಾಡುವವರ ಮಾತನ್ನು ಯಾರೂ ಕೇಳಿಸಿಕೊಳ್ಳಲ್ಲ ಎಂದಾಯಿತು ಎಂದು ಕರ್ನಾಟಕ ಬಿಜೆಪಿ ತನ್ನ ಟ್ವಿಟರ್ ಪೇಜ್ ನಲ್ಲಿ ಲೇವಡಿ ಮಾಡಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments