Select Your Language

Notifications

webdunia
webdunia
webdunia
webdunia

ರಾಹುಲ್ ಗಾಂಧಿ ಬರುವಾಗ ಜಿಲ್ಲೆ ಜಿಲ್ಲೆಯಲ್ಲೂ ಬಂದ್!

ರಾಹುಲ್ ಗಾಂಧಿ ಬರುವಾಗ ಜಿಲ್ಲೆ ಜಿಲ್ಲೆಯಲ್ಲೂ ಬಂದ್!
ಬೆಂಗಳೂರು , ಗುರುವಾರ, 25 ಜನವರಿ 2018 (09:01 IST)
ಬೆಂಗಳೂರು: ಪ್ರಧಾನಿ ಮೋದಿ ಬೆಂಗಳೂರಿಗೆ ಬರುವ ಸಮಯದಲ್ಲೇ ಬಂದ್ ಗೆ ಕರೆ ಕೊಟ್ಟಿರುವುದರ ಹಿಂದೆ ಕಾಂಗ್ರೆಸ್ ಕುತಂತ್ರವಿದೆ ಎಂದು ಆರೋಪಿಸಿರುವ ಬಿಜೆಪಿ ರಾಹುಲ್ ಗಾಂಧಿ ರಾಜ್ಯಕ್ಕೆ ಭೇಟಿ ನೀಡುವಾಗ ಜಿಲ್ಲೆ ಜಿಲ್ಲೆಯಲ್ಲೂ ಬಂದ್ ನಡೆಸುವುದಾಗಿ ಕಿಡಿ ಕಾರಿದೆ.
 

ರಾಹುಲ್ ರಾಜ್ಯ ಪ್ರವಾಸ ಮಾಡುವಾಗ ಯಾವ ಜಿಲ್ಲೆಗೆ ಭೇಟಿ ನೀಡುತ್ತಾರೋ ಆ ಸಂದರ್ಭದಲ್ಲಿ ಬಿಜೆಪಿ ಆ ಜಿಲ್ಲೆಯಲ್ಲಿ ಬಂದ್ ಘೋಷಣೆ ಮಾಡಿ ಪ್ರತಿಭಟನೆ ನಡೆಸಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಘೋಷಿಸಿದ್ದಾರೆ.

ಇದರೊಂದಿಗೆ ಇದೀಗ ಕರ್ನಾಟಕ ಬಂದ್ ವಿಷಯ ರಾಜಕೀಯ ದಾಳವಾಗಿದೆ. ನಿಜವಾದ ಸಮಸ್ಯೆ ಮಹದಾಯಿ ವಿವಾದಕ್ಕೆ ಪರಿಹಾರ ಒದಗಿಸುವುದು ಬಿಟ್ಟು ರಾಜಕೀಯ ವಿಷಯಕ್ಕೆ ವೇದಿಕೆಯಾಗುತ್ತಿರುವುದು ವಿಪರ್ಯಾಸ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಸಂಸದ ಪ್ರತಾಪ್ ಸಿಂಹ ಬಸ್ ನಿಲ್ದಾಣದಲ್ಲಿ ಅಧಿಕಾರಿಗಳ ಮೇಲೆ ಆಕ್ರೋಶ ವ್ಯಕ್ತಪಡಿಸಿದ್ದು ಯಾಕೆ…?