ಡಿ. ಕೆ. ಸುರೇಶ್ ಮನೆಗೆ ಬಿಜೆಪಿ ಮುತ್ತಿಗೆ

Webdunia
ಮಂಗಳವಾರ, 4 ಜನವರಿ 2022 (15:14 IST)
ಬೆಂಗಳೂರು ಮಹಾನಗರದ ಕೇಂದ್ರ, ಉತ್ತರ ಮತ್ತು ದಕ್ಷಿಣ ಜಿಲ್ಲೆಗಳ ಬಿಜೆಪಿ ಯುವ ಮೋರ್ಚಾ ವತಿಯಿಂದ ಇಂದು ವೈಯಾಲಿ ಕಾವಲ್‍ನಲ್ಲಿ ಕಾಂಗ್ರೆಸ್ ಸಂಸದ ಡಿ.ಕೆ.ಸುರೇಶ್ ಅವರ ಮನೆಗೆ ಮುತ್ತಿಗೆ ಹಾಕಲಾಯಿತು.
 
ಸಂಸದ ಡಿ.ಕೆ.ಸುರೇಶ್ ಮತ್ತು ವಿಧಾನ ಪರಿಷತ್ ಸದಸ್ಯರು, ಸಚಿವ ಡಾ.ಅಶ್ವತ್ಥನಾರಾಯಣ ಅವರ ಮೇಲೆ ಹಲ್ಲೆಗೆ ಯತ್ನಿಸಿ, ಮೈಕ್ ಕಸಿದು, ತಳ್ಳಾಟ ನಡೆಸಿ ಅಮಾನವೀಯವಾಗಿ ವರ್ತಿಸಿದ್ದಾರೆ.
ಯುವ ಮೋರ್ಚಾ ವಿಭಾಗ ಸಂಘಟನಾ ಕಾರ್ಯದರ್ಶಿಗಳಾದ ದಶರಥ್, ಯುವ ಮೋರ್ಚಾ ರಾಜ್ಯ ಕೋಶಾಧ್ಯಕ್ಷರಾದ ಅನಿಲ್ ಶೆಟ್ಟಿ, ರಾಜ್ಯ ಕಾರ್ಯಾಲಯ ಕಾರ್ಯದರ್ಶಿಗಳಾದ ಎಸ್.ವಿ. ವಿನೋದ್‍ಕುಮಾರ್, ಯುವ ಮೋರ್ಚಾ ಅಧ್ಯಕ್ಷರಾದ ಪ್ರಶಾಂತ್ ಗೌಡ, (ಬೆಂಗಳೂರು ಉತ್ತರ ಜಿಲ್ಲೆ) ಅಭಿಲಾಷ್ ರೆಡ್ಡಿ (ಬೆಂಗಳೂರು ಕೇಂದ್ರ ಜಿಲ್ಲೆ) ಮತ್ತು ಪುನೀತ್ ರೆಡ್ಡಿ (ಬೆಂಗಳೂರು ದಕ್ಷಿಣ ಜಿಲ್ಲೆ) ಅವರ ನೇತೃತ್ವದಲ್ಲಿ ಈ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.
 
ಕಾಂಗ್ರೆಸ್ಸಿಗರ ಗೂಂಡಾ ವರ್ತನೆಯು ಖಂಡನೀಯ. ಇದರ ವಿರುದ್ಧ ಮುಂದಿನ ದಿನಗಳಲ್ಲಿ ರಾಮನಗರ ಚಲೋ ಹಮ್ಮಿಕೊಳ್ಳುವುದಾಗಿ ಪ್ರಶಾಂತ್ ಗೌಡ ತಿಳಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶಾಲಾ, ಕಾಲೇಜುಗಳಲ್ಲಿ ಹಿಜಾಬ್ ಧರಿಸಲು ಅನುಮತಿ: ಸರ್ಕಾರದ ವಿರುದ್ಧ ಸಿಡಿದೆದ್ದ ಹಿಂದೂಗಳು

Karnataka Weather: ಈ ಜಿಲ್ಲೆಗಳ ಹವಾಮಾನ ಬದಲಾವಣೆ ಇಂದು ತಪ್ಪದೇ ಗಮನಿಸಿ

ನಾಳೆ ಗೊತ್ತಾಗಲಿದೆ ಕೇರಳ ಸಿಎಂ ಪಟ್ಟ ಯಾರಿಗೆಂದು

NEET-UG 2026 ಪೇಪರ್ ಲೀಕ್ ಪ್ರಕರಣ: 5 ಮಂದಿ ಅರೆಸ್ಟ್‌, ಅನೇಕ ಸ್ಥಳಗಳ ಮೇಲೆ ದಾಳಿ

ಇಂಧನ ವೆಚ್ಚದಲ್ಲಿ ಹೆಚ್ಚಳ: ಏರ್ ಇಂಡಿಯಾ ಅಂತಾರಾಷ್ಟ್ರೀಯ ವಿಮಾನ ಹಾರಾಟ ಸ್ಥಗಿತ

ಮುಂದಿನ ಸುದ್ದಿ
Show comments