Select Your Language

Notifications

webdunia
webdunia
webdunia
webdunia

ಬಿಎಸ್ ಪಿ ಶಾಸಕನಿಗೆ ಮಂತ್ರಿಗಿರಿ ಕೊಡ್ತಾರಾ ಯಡಿಯೂರಪ್ಪ?

ಬಿಎಸ್ ಪಿ ಶಾಸಕನಿಗೆ ಮಂತ್ರಿಗಿರಿ ಕೊಡ್ತಾರಾ ಯಡಿಯೂರಪ್ಪ?
ಬೆಂಗಳೂರು , ಗುರುವಾರ, 1 ಆಗಸ್ಟ್ 2019 (16:26 IST)
ಮೈತ್ರಿ ಸರಕಾರದ ವಿಶ್ವಾಸ ಮತ ಯಾಚನೆ ಹಾಗೂ ಬಿಜೆಪಿ ಬಹುಮತ ಸಾಬೀತುಪಡಿಸೋವಾಗಲೂ ಸದನಕ್ಕೆ ಹಾಜರಾಗದ ಬಿಎಸ್ಪಿ ಶಾಸಕ ಎನ್.ಮಹೇಶ್ ಇದೀಗ ಬಿ.ಎಸ್.ಯಡಿಯೂರಪ್ಪರನ್ನು ಭೇಟಿ ಮಾಡಿ ಕುತೂಹಲ ಮೂಡಿಸಿದ್ದಾರೆ.

ಮಾಜಿ ಸಚಿವ ಎನ್. ಮಹೇಶ್ ಅವರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪರನ್ನು ಭೇಟಿಮಾಡಿದ್ದಾರೆ. ಆ ಮೂಲಕ ಅವರು ಬಿಜೆಪಿಗೆ ಸೇರ್ಪಡೆಗೊಳ್ಳುತ್ತಾರೆ ಅನ್ನೋದಕ್ಕೆ ಪುಷ್ಠಿ ಒದಗಿಸಿದ್ದಾರೆ.  

webdunia
ಬಿಜೆಪಿ ಪ್ರಮುಖ ನಾಯಕರು ಹಾಗೂ ಹಿರಿಯ ಶಾಸಕರೊಂದಿಗೆ ಸಿಎಂರನ್ನು ಭೇಟಿ ಮಾಡಿದ್ದಾರೆ ಎನ್.ಮಹೇಶ್. ಭೇಟಿ ಬಳಿಕ ಯಾವುದೇ ಹೇಳಿಕೆ ನೀಡಿಲ್ಲ.  

ಬಿಎಸ್ಪಿ ಮುಖ್ಯಸ್ಥರಾದ ಮಾಯಾವತಿ ಅವರು ಎನ್.ಮಹೇಶ್ ರನ್ನು ಪಕ್ಷದಿಂದ ಉಚ್ಛಾಟನೆ ಮಾಡಿದ್ದಾರೆ. ಆದರೆ ಅವರಿಗೆ ಬಿಜೆಪಿ ಸರಕಾರದ ಮಂತ್ರಿ ಮಂಡಲದಲ್ಲಿ ಮಂತ್ರಿ ಸ್ಥಾನ ನೀಡಲಾಗುತ್ತದೆ ಎಂಬ ಮಾತುಗಳು ಕೇಳಿಬರುತ್ತಿವೆ.



Share this Story:

Follow Webdunia kannada

ಮುಂದಿನ ಸುದ್ದಿ

ಅಧಿಕಾರಿಗಳಿಗೆ ಸಿಎಂ ಯಡಿಯೂರಪ್ಪ ಕ್ಲಾಸ್