Webdunia - Bharat's app for daily news and videos

Install App

ಬೆಂಗಳೂರಿನ ಅವ್ಯವಸ್ಥೆ ವಿರುದ್ಧ ಮೇ 28 ಕ್ಕೆ ಬಿಜೆಪಿ ಪ್ರತಿಭಟನೆ

Krishnaveni K
ಶುಕ್ರವಾರ, 24 ಮೇ 2024 (14:50 IST)
ಬೆಂಗಳೂರು: ಬೆಂಗಳೂರಿನ ಅವ್ಯವಸ್ಥೆಗಳ ವಿರುದ್ಧ ಇದೇ 28ರಂದು ಬಿಜೆಪಿ ವತಿಯಿಂದ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಪ್ರಕಟಿಸಿದರು.
 
ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ತಮ್ಮ ನೇತೃತ್ವದಲ್ಲಿ ಇಂದು ಬೆಂಗಳೂರಿನ ಸಮಸ್ಯೆಗಳ ಕುರಿತು ಚರ್ಚೆಗಾಗಿ ನಡೆಸಿದ ಸಭೆಯ ಬಳಿಕ ಅವರು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದರು. ಬೆಂಗಳೂರು ನಗರದ ಸಮಸ್ಯೆಗಳಿಗೆ ಪರಿಹಾರ ದೊರಕಿಸಿಕೊಡುವ ನಿಟ್ಟಿನಲ್ಲಿ ಪ್ರತಿ ವಾರ್ಡಿನಲ್ಲಿ ಬಿಜೆಪಿ ವತಿಯಿಂದ ಹೋರಾಟವನ್ನು ಕೈಗೆತ್ತಿಕೊಳ್ಳುವುದಾಗಿ ತಿಳಿಸಿದರು.

ಬೆಂಗಳೂರು ಮಹಾನಗರದ ಜನತೆಗೆ ನ್ಯಾಯ ದೊರಕಿಸಿಕೊಡುವ ನಿಟ್ಟಿನಲ್ಲಿ ಬಿಜೆಪಿ ಹೋರಾಟ ನಿರಂತರವಾಗಿ ಇರಲಿದೆ. ಕೇವಲ ನಾಮಕಾವಾಸ್ತೆ ಹೋರಾಟ ಇದಲ್ಲ ಎಂದು ಸ್ಪಷ್ಟಪಡಿಸಿದರು. ಸಮಸ್ಯೆಗೆ ಪರಿಹಾರ, ಹೋರಾಟಕ್ಕೆ ಜಯ ಸಿಗಬೇಕಿದೆ. ಆ ನಿಟ್ಟಿನಲ್ಲಿ ಹೋರಾಟ ನಡೆಯಲಿದೆ ಎಂದು ವಿವರಿಸಿದರು.

ಇಂದು ನಗರದ ಎಲ್ಲ ಶಾಸಕರು, ಮಾಜಿ ಶಾಸಕರು, ಮಾಜಿ ಕಾರ್ಪೊರೇಟರ್‍ಗಳ ಸಭೆಯನ್ನು ನಡೆಸಲಾಗಿದೆ. ಬೆಂಗಳೂರು ನಗರದಲ್ಲಿ ಇವತ್ತು ಆಗುತ್ತಿರುವ ಅವ್ಯವಸ್ಥೆಗಳನ್ನು ಚರ್ಚಿಸಿದ್ದೇವೆ. ಕೇವಲ ಎರಡು ದಿನ ಮಳೆ ಬಂದಾಗ ಬೆಂಗಳೂರಿನ ರಸ್ತೆಗಳು ವಾಹನ ಓಡಾಡದಂತೆ ಬ್ಲಾಕ್ ಆಗಿದ್ದವು. ಬೆಂಗಳೂರು ನಗರದಲ್ಲಿ ಅತಿ ಹೆಚ್ಚು ತೆರಿಗೆ ಪಾವತಿಸುವ ಜನರಿದ್ದಾರೆ. ರಾಜ್ಯದಲ್ಲಿ ಹೊಸ ಸರಕಾರ ಬಂದ ಬಳಿಕ ಒಂದು ವರ್ಷದಲ್ಲಿ ಬೆಂಗಳೂರು ನಗರದ ಅಭಿವೃದ್ಧಿಗೆ ಒಂದು ರೂಪಾಯಿಯನ್ನೂ ಕೊಟ್ಟಿಲ್ಲ ಎಂದು ಟೀಕಿಸಿದರು.

ಎಷ್ಟೇ ಮಳೆ ಬಂದರೂ ಎದುರಿಸಲು ಸನ್ನದ್ಧರಾಗಿದ್ದೇವೆ ಎಂದು ಆಯುಕ್ತರು ಹೇಳುತ್ತಾರೆ. ತಯಾರಿದ್ದೇವೆ ಎಂದು ಅವರು ಭಾಷಣ ಮಾಡಿದರೂ ಅವ್ಯವಸ್ಥೆಗಳು ಹಾಗೇ ಉಳಿದಿವೆ ಎಂದು ಆಕ್ಷೇಪ ವ್ಯಕ್ತಪಡಿಸಿದರು. ಈ ರಾಜ್ಯ ಸರಕಾರವು ಆಸ್ತಿ ತೆರಿಗೆ, ಮೋಟಾರು ವಾಹನ ತೆರಿಗೆ ಸೇರಿ ಎಲ್ಲ ತೆರಿಗೆಗಳನ್ನು ಹೆಚ್ಚಿಸಿದೆ. ಆದರೆ, ಬೆಂಗಳೂರಿನ ಜನತೆಗೆ ಯಾವುದೇ ಪ್ರಯೋಜನ ಆಗುತ್ತಿಲ್ಲ ಎಂದು ತಿಳಿಸಿದರು.

ರಸ್ತೆಗಳು ಗುಂಡಿಗಳಿಂದ ತುಂಬಿ ಹೋಗಿವೆ. ಕಸ ವಿಲೇವಾರಿಯೂ ಸರಿಯಾಗಿ ಆಗುತ್ತಿಲ್ಲ. ಬೆಂಗಳೂರಿಗೆ ಅತಿ ಹೆಚ್ಚು ಸಚಿವರಿದ್ದರೂ ಈ ನಗರದ ಅಭಿವೃದ್ಧಿ ಕುರಿತು ಯಾರು ಕೂಡ ಚಿಂತನೆ ಮಾಡದೆ ಇರುವುದು ನಿಜವಾಗಿ ಒಂದು ದುರಂತ ಎಂದು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅತ್ಯಾಚಾರ ಪ್ರಕರಣದಲ್ಲಿ ಬಿಜೆಡಿ ಕಾರ್ಪೊರೇಟರ್ ಬಂಧನ, ಪಕ್ಷದಿಂದ ಅಮಾನತು

ತಮಿಳುನಾಡಿನ ಚೋಳರ ದೇವಸ್ಥಾನಕ್ಕೆ ಪ್ರಧಾನಿ ಮೋದಿ ಭೇಟಿ: 140 ಕೋಟಿ ಭಾರತೀಯರ ಕಲ್ಯಾಣಕ್ಕೆ ಪ್ರಾರ್ಥನೆ

ಹರಿದ್ವಾರ ಕಾಲ್ತುಳಿತ, ಇದು ಅಪಘಾತವಲ್ಲ, ಆಡಳಿತ ವ್ಯವಸ್ಥೆಯ ವೈಫಲ್ಯ: ಕೇಜ್ರಿವಾಲ್

ರಾಜ್ಯದಲ್ಲಿ ರಸಗೊಬ್ಬರದ ಕಾಳದಂಧೆ: ಸರ್ಕಾರದ ವಿರುದ್ಧ ಜು.28ರಂದು ಪ್ರತಿಭಟನೆ, ವಿಜಯೇಂದ್ರ

ಎಚ್ಚರಿಕೆ ಬಳಿಕವು ನಿಷೇಧಿತ ಬಣ್ಣ ಬಳಕೆ: 6 ಎಂಫೈರ್ ಹೊಟೇಲ್ ವಿರುದ್ಧ ಕ್ರಮಕ್ಕೆ ಚಿಂತನೆ

ಮುಂದಿನ ಸುದ್ದಿ
Show comments