Daily Horoscope

ಶಾಸಕ ಆರ್ ವಿ ದೇಶಪಾಂಡೆ ಹೇಳಿಕೆ ವಿರುದ್ಧ ನಾಳೆ ಬಿಜೆಪಿ ಪ್ರತಿಭಟನೆ

Krishnaveni K
ಬುಧವಾರ, 3 ಸೆಪ್ಟಂಬರ್ 2025 (14:12 IST)
ಬೆಂಗಳೂರು: ಕಾಂಗ್ರೆಸ್ ಶಾಸಕ ಆರ್.ವಿ. ದೇಶಪಾಂಡೆ ಅವರ ಕೀಳು ಅಭಿರುಚಿಯ ಹೇಳಿಕೆಯನ್ನು ಖಂಡಿಸಿ  ಬಿಜೆಪಿ ರಾಜ್ಯ ಮಹಿಳಾ ಮೋರ್ಚಾ ವತಿಯಿಂದ ನಾಳೆ ಸೆ.4 ರಂದು ಉತ್ತರ ಕನ್ನಡ ಜಿಲ್ಲೆಯಲ್ಲಿ ಪ್ರತಿಭಟನೆ ಮಾಡಲಿದ್ದೇವೆ ಎಂದು ಬಿಜೆಪಿ ರಾಜ್ಯ ಮಹಿಳಾ ಮೋರ್ಚಾ ಅಧ್ಯಕ್ಷೆ ಕು. ಸಿ. ಮಂಜುಳಾ ಅವರು ತಿಳಿಸಿದ್ದಾರೆ.

ದೇಶಪಾಂಡೆ ಅವರು, ಮಹಿಳಾ ಪತ್ರಕರ್ತೆ ರಾಧಾ ಹಿರೇಗೌಡರ್ ಅವರು ಹೇಳಿದ ಪ್ರಶ್ನೆಗೆ ಅವಮಾನಿಸಿರುವುದು ಖಂಡನೀಯ, ಕೂಡಲೇ ಅವರು ಕ್ಷಮೆ ಯಾಚಿಸಬೇಕು ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ಆಗ್ರಹಿಸಿದ್ದಾರೆ.

ಮಹಿಳಾ ಪತ್ರಕರ್ತೆ ರಾಧಾ ಹಿರೇಗೌಡರ್ ಅವರು ಉತ್ತರ ಕನ್ನಡ ಜಿಲ್ಲೆಯಲ್ಲಿ ಸುಸರ್ಜಿತ ಹೆರಿಗೆ ಆಸ್ಪತ್ರೆಯನ್ನು ಯಾವಾಗ ನಿರ್ಮಿಸುತ್ತೀರಿ ಎಂದು ಆರ್.ವಿ. ದೇಶಪಾಂಡೆ ಅವರನ್ನು ಪ್ರಶ್ನಿಸಿದ್ದರು. ಆಗ,  ತುಂಬಾ ಹಗುರವಾಗಿ ಮತ್ತು ಅವಮಾನದ ರೀತಿಯಲ್ಲಿ “ನಿನ್ನ ಹೆರಿಗೆ ಆದ ಮೇಲೆ ಮಾಡಿಸುತ್ತೀನಿ” ಎಂದು ಹೇಳುವಷ್ಟು ಒಂದು ಕೀಳು ಅಭಿರುಚಿಯನ್ನು ವ್ಯಕ್ತಪಡಿಸಿರುವುದು ಅತ್ಯಂತ ಖಂಡನೀಯ ಎಂದು ಅವರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments