Webdunia - Bharat's app for daily news and videos

Install App

ಇಂದಿನಿಂದ ಬಿಜೆಪಿ ವಕ್ಫ್ ಹೋರಾಟ ಶುರು: ನಮ್ಮ ಭೂಮಿ ನಮ್ಮ ಹಕ್ಕು ಹೋರಾಟಕ್ಕೆ ಒಗ್ಗಟ್ಟೇ ಇಲ್ಲ

Krishnaveni K
ಗುರುವಾರ, 21 ನವೆಂಬರ್ 2024 (08:39 IST)
ಬೆಂಗಳೂರು: ರಾಜ್ಯಾದ್ಯಂತ ವಕ್ಫ್ ಮಂಡಳಿ ನೋಟಿಸ್ ನೀಡುತ್ತಿರುವುದನ್ನು ವಿರೋಧಿಸಿ ಇಂದಿನಿಂದ ರಾಜ್ಯ ಬಿಜೆಪಿ ಘಟಕ ನಮ್ಮ ಭೂಮಿ ನಮ್ಮ ಹಕ್ಕು ಪ್ರತಿಭಟನೆ ನಡೆಸಲು ಮುಂದಾಗಿದೆ. ಆದರೆ ಈ ಹೋರಾಟಕ್ಕೆ ಒಗ್ಗಟ್ಟೇ ಇಲ್ಲವಾಗಿದೆ.

ರಾಜ್ಯ ಬಿಜೆಪಿ ಘಟಕ ಈಗ ಎರಡು ಮನೆಯಾಗಿದೆ. ಅದರಲ್ಲೂ ವಕ್ಫ್ ಹೋರಾಟ ವಿಚಾರವಾಗಿ ಎರಡು ಬಣಗಳಾಗಿ ಮಾರ್ಪಟ್ಟಿದೆ. ಒಂದಕ್ಕೆ ಬಿವೈ ವಿಜಯೇಂದ್ರ ನೇತೃತ್ವವಾಗಿದ್ದರೆ ಇನ್ನೊಂದಕ್ಕೆ ಬಸನಗೌಡ ಪಾಟೀಲ್ ಯತ್ನಾಳ್ ನಾಯಕರಾಗಿದ್ದಾರೆ. ಮೇಲ್ನೋಟಕ್ಕೆ ನಾವು ಒಗ್ಗಟ್ಟಾಗಿ ಹೋರಾಡಲಿದ್ದೇವೆ ಎಂದು ಬಿಜೆಪಿ ನಾಯಕರು ಹೇಳಿಕೊಳ್ಳುತ್ತಿದ್ದರೂ ಮತ್ತೆ ಬಹಿರಂಗ ಕೆಸರೆರಚಾಟಗಳ ಮೂಲಕ ತಮ್ಮ ಭಿನ್ನಾಭಿಪ್ರಾಯಗಳನ್ನು ಹೊರಹಾಕುತ್ತಿದ್ದಾರೆ.

ಕರ್ನಾಟಕದ ಬಡ, ರೈತರ, ಮಠ-ಮಂದಿರಗಳ ಅಕ್ರಮವಾಗಿ ವಕ್ಫ್ ಬೋರ್ಡ್ ಹೆಸರಿನಲ್ಲಿ ಕಬಳಿಕೆ ಮಾಡಲು ಷಡ್ಯಂತ್ರ ರೂಪಿಸಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ನಮ್ಮ ಭೂಮಿ ನಮ್ಮ ಹಕ್ಕು ಆಂದೋಲನವನ್ನು ಹಮ್ಮಿಕೊಂಡಿದ್ದೇವೆ ಎಂದು ರಾಜ್ಯ ಬಿಜೆಪಿ ಘಟಕ ಘೋಷಿಸಿದೆ.

ಈಗಾಗಲೇ ವಕ್ಫ್ ವಿಚಾರವನ್ನು ಬಿಜೆಪಿ ಸರ್ಕಾರದ ವಿರುದ್ಧ ಅಸ್ತ್ರವಾಗಿ ಬಳಕೆ ಮಾಡಿದೆ. ಮುಂದಿನ ಸಂಸತ್ ಅಧಿವೇಶನದಲ್ಲಿ  ವಕ್ಫ್ ತಿದ್ದುಪಡಿ ಖಾಯಿದೆ ಮಂಡಿಸಲು ಮೋದಿ ಸರ್ಕಾರ ಹೆಜ್ಜೆಯಿಟ್ಟಿದ್ದು, ಅದಕ್ಕೆ ಮೊದಲು ವಕ್ಫ್ ಕುರಿತ ವಾಸ್ತವ ಸ್ಥಿತಿ ಅರಿತು ದೊಡ್ಡ ಮಟ್ಟದಲ್ಲಿ ಜನ ಬೆಂಬಲ ಪಡೆಯಲು ಬಿಜೆಪಿ ಈ ಆಂದೋಲನಕ್ಕೆ ಕೈ ಹಾಕಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಾನು ಮುಷ್ತಾಕ್ ಅವರಿಂದ ದಸರಾ ಉದ್ಘಾಟನೆ: ಪ್ರತಾಪಸಿಂಹ ಬೆನ್ನಲ್ಲೇ ಯತ್ನಾಳ್‌ ಆಕ್ಷೇಪ

ಆಗ ಬಾಯಿಮುಚ್ಚಿಕೊಂಡಿದ್ದವರು ಈಗ ಲಾಭಕ್ಕೆ ಕಾಯುತ್ತಿದ್ದಾರೆ: ಚಲುವರಾಯಸ್ವಾಮಿ ಆಕ್ರೋಶ

ಬುರುಡೆ ಪ್ರಕರಣದಲ್ಲಿ ಸಾಮಾನ್ಯಜ್ಞಾನ ಬಳಸಿದ್ದರೆ ಇಷ್ಟೊಂದು ರಾದ್ಧಾಂತ ಆಗುತ್ತಿರಲಿಲ್ಲ: ರಾಜಣ್ಣ

ಕೋಟ್ಯಂತರ ರೂಪಾಯಿ ಅಕ್ರಮ ಹಣ ವರ್ಗಾವಣೆ ಪ್ರಕರಣ: ಇಡಿ ಕಸ್ಟಡಿಗೆ ಕಾಂಗ್ರೆಸ್​ ಶಾಸಕ ಕೆ.ಸಿ. ವೀರೇಂದ್ರ

ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಹೇಗೆ ಸೂಕ್ತ ವ್ಯಕ್ತಿ ಆಗುತ್ತಾರೆ: ಪ್ರತಾಪಸಿಂಹ ಪ್ರಶ್ನೆ

ಮುಂದಿನ ಸುದ್ದಿ
Show comments