ಗುಜರಾತ್, ಉತ್ತರ ಪ್ರದೇಶದಲ್ಲಿ ಬಿಜೆಪಿ ಗೆಲ್ಲಿಸಿದ ಭೂಪೇಂದ್ರ ಟಾರ್ಗೆಟ್ ಕರ್ನಾಟಕ!

Webdunia
ಭಾನುವಾರ, 17 ಡಿಸೆಂಬರ್ 2017 (11:24 IST)
ಬೆಂಗಳೂರು: ಗುಜರಾತ್ ಚುನಾವಣೆಯಲ್ಲಿ ಬಿಜೆಪಿ ಗೆಲ್ಲಲಿದೆ ಎಂಬ ಚುನಾವಣೋತ್ತರ ಸಮೀಕ್ಷೆಗಳಿಂದ ಉತ್ಸಾಹಗೊಂಡಿರುವ ಬಿಜೆಪಿ ರಾಷ್ಟ್ರೀಯ ನಾಯಕರ ಮುಂದಿನ ಟಾರ್ಗೆಟ್ ಕರ್ನಾಟಕವಾಗಿರಲಿದೆ.
 

ಗುಜರಾತ್ ಬಳಿಕ ಬಿಜೆಪಿಗೆ ದೊಡ್ಡ ಟಾರ್ಗೆಟ್ ಇರುವುದು ಕರ್ನಾಟಕ ವಿಧಾನಸಭೆ ಚುನಾವಣೆ. ಇದಕ್ಕಾಗಿ ತಯಾರಿ ನಡೆಸಲು ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ಗುಜರಾತ್, ಉತ್ತರ ಪ್ರದೇಶದಲ್ಲಿ ರಣ ತಂತ್ರ ರೂಪಿಸಿ ಯಶಸ್ಸು ಕಂಡ ಭೂಪೇಂದ್ರ ಯಾದವ್,  ಅರುಣ್ ಸಿಂಗ್ ಮುಂತಾದವರು ಕರ್ನಾಟಕಕ್ಕೆ ಭೇಟಿ ನೀಡಲಿದ್ದಾರೆ.

ಇಲ್ಲಿನ ನಾಯಕರೊಂದಿಗೆ ಚರ್ಚಿಸಿ ಚುನಾವಣೆ ಸಿದ್ಧತೆ ನಡೆಸಲಿದ್ದಾರೆ. ಜನವರಿ 5 ರಂದು ಅಮಿತ್ ಶಾ ಬೆಂಗಳೂರಿಗೆ ಭೇಟಿ ನೀಡಲಿದ್ದಾರೆ ಎನ್ನಲಾಗಿದೆ. ಅದಾದ ಬಳಿಕ ರಾಜ್ಯಕ್ಕೆ ಘಟಾನುಘಟಿ ನಾಯಕರು ಬಂದು ಹೋಗಲಿದ್ದಾರೆ. ಈ ಮೂಲಕ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಅಧಿಕಾರಕ್ಕೆ ಬರಲು ರಾಷ್ಟ್ರೀಯ ನಾಯಕರೇ ಟೊಂಕ ಕಟ್ಟಿ ನಿಲ್ಲಲಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬರ ಪರಿಸ್ಥಿತಿಯಿಂದ ಕುಡಿಯುವ ನೀರಿಗೆ ತೊಂದರೆ ಆಗಬಾರದೆಂದು ಡಿಕೆ ಶಿವಕುಮಾರ್ ಮಹತ್ವದ ಘೋಷಣೆ

ಬಂಟ್ವಾಳದ ಲಾವಣ್ಯ ಹತ್ಯೆ ಪ್ರಕರಣ: ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆ ನೀಡಿದವರಿಗೆ ಬಿಗ್ ಶಾಕ್

ಅಯೋಧ್ಯೆ ರಾಮಮಂದಿರದ ದೇಣಿಗೆ 'ಕಳ್ಳತನ': ಪ್ರಧಾನಿ ಮೋದಿಗೆ ಪತ್ರ ಬರೆದ ರಾಹುಲ್‌, ಖರ್ಗೆ

ದೀರ್ಘಕಾಲದ ಸಂಗಾತಿ ಕಳೆದುಕೊಂಡ ದೇವೇಗೌಡರ ಕಣ್ಣೀರು ಒರೆಸಿ ಸಂತೈಸಿದ ಮಾಜಿ ಸಿಎಂ ಸಿದ್ದರಾಮಯ್ಯ

ರಾಮಮಂದಿರ ದೇಣಿಗೆ ವಿವಾದ, ಪ್ರಧಾನ ಮಂತ್ರಿಯವರೇ, ಮೌನ ಮುರಿಯಿರಿ: ಜೈರಾಮ್ ರಮೇಶ್

ಮುಂದಿನ ಸುದ್ದಿ
Show comments