Webdunia - Bharat's app for daily news and videos

Install App

ಕೈ ನಾಯಕರಿಗೆ 10 ಪ್ರಶ್ನೆ ಎಸೆದ ಬಿಜೆಪಿ

Webdunia
ಶನಿವಾರ, 23 ಮಾರ್ಚ್ 2019 (14:53 IST)
ಬಿ.ಎಸ್.ಯಡಿಯೂರಪ್ಪ ಡೈರಿ ಬಿಡುಗಡೆ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕರಿಗೆ ಮಾಜಿ ಸಚಿವ ಸಿ.ಟಿ.ರವಿ ಹತ್ತು ಪ್ರಶ್ನೆಗಳನ್ನು ಕೇಳಿದ್ದು, ಅವು ಈಗ ವೈರಲ್ ಆಗಿವೆ.
ಡೈರಿ ನಿಮಗೆ ಸಿಕ್ಕಿದ್ದು ಯಾವಾಗ..?
ಯಾರು ಈ ಡೈರಿಯನ್ನು ತಂದುಕೊಟ್ಟರು?
ಡೈರಿಯನ್ನು ಎಲ್ಲಿ ಕೊಟ್ಟರು..?
ಒರಿಜಿನಲ್ ಡೈರಿ ಎಲ್ಲಿ?
ಯಾಕೆ ಇದುವರೆಗೂ ಈ ಡೈರಿ ಆಧರಿಸಿ ಲೋಕಾಯುಕ್ತ ಅಥವಾ ಎಸಿಬಿಗೆ ದೂರು ಕೊಡಲಿಲ್ಲ?
2013 ಮೇ ತಿಂಗಳಿನಿಂದ ನಿಮ್ಮದೇ ಪಕ್ಷದ ಆಡಳಿತ ಇದ್ದರೂ ಯಾವುದೇ ತನಿಖೆ ನಡೆಸದೇ ಇರಲು ಕಾರಣವೇನು?
ಯಡಿಯೂರಪ್ಪನವರದ್ದೆಂದು ಹೇಳಲಾದ ಡೈರಿಯು ಡಿ.ಕೆ.ಶಿವಕುಮಾರ್ ಮನೆಯಲ್ಲಿ ಪತ್ತೆಯಾಗಿದ್ದು ಹೇಗೆ? ಇದಕ್ಕೆ ಡಿ.ಕೆ.ಶಿವಕುಮಾರ್ ಉತ್ತರಿಸಬೇಕಾಗಿದೆ.
ಈ ಹಿಂದೆ ಪ್ರಕರಣವೊಂದರ ಬಗ್ಗೆ ಎಸಿಬಿಗೆ ದೂರು ನೀಡಿದ್ದ ಕಾಂಗ್ರೆಸ್ ಈಗ ಏಕೆ ದೂರು ನೀಡದಿರಲು ಕಾರಣವೇನು?
ಎಂಎಲ್ ಸಿ ಗೋವಿಂದರಾಜು‌ ಮನೆಯಲ್ಲಿ ಐಟಿ ಅಧಿಕಾರಿಗಳು ವಶಪಡಿಸಿಕೊಂಡ ಡೈರಿಯಲ್ಲಿ ಕಾಂಗ್ರೆಸ್ ನಾಯಕರಿಗೆ ಹಣ ಸಂದಾಯವಾಗುತ್ತು ಎಂದು ನಮೂದಾಗಿತ್ತು. ಆಗ ಯಡಿಯೂರಪ್ಪ ಡೈರಿ ಕಾಂಗ್ರೆಸ್ ಪ್ರಾಯೋಜಕತ್ವದಲ್ಲಿ ಸೃಷ್ಟಿಯಾಗಿದ್ದು ನಿಜವಲ್ಲವೇ?
ಡೈರಿ ಪ್ರಕರಣ ಜನ‌ಲೋಕಪಾಲ್ ತನಿಖೆಗೆ ಸೂಕ್ತವಾದುದು ಎಂದು ಕಾಂಗ್ರೆಸ್ ಹೇಳುತ್ತಿದೆ. ಆರೋಪ ಮಾಡಿದವರು ದೂರು ನೀಡಬೇಕೆ ಅಥವಾ ದೂರಿಗೆ ಒಳಗಾದವರೇ?


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments