Select Your Language

Notifications

webdunia
webdunia
webdunia
webdunia

ನಾಳೆ ಚಿಕ್ಕಮಗಳೂರಿಗೆ ಬಿಜೆಪಿ ಪರಿವರ್ತನಾ ಯಾತ್ರೆ- ಸಿ.ಟಿ.ರವಿ

ನಾಳೆ ಚಿಕ್ಕಮಗಳೂರಿಗೆ ಬಿಜೆಪಿ ಪರಿವರ್ತನಾ ಯಾತ್ರೆ- ಸಿ.ಟಿ.ರವಿ
ಚಿಕ್ಕಮಗಳೂರು , ಶುಕ್ರವಾರ, 29 ಡಿಸೆಂಬರ್ 2017 (11:57 IST)

ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರ ನೇತೃತ್ವದ ನವ ಕರ್ನಾಟಕ ಪರಿವರ್ತನಾ ಯಾತ್ರೆ ಡಿಸೆಂಬರ್ 30ರಂದು ನಗರಕ್ಕೆ ಆಗಮಿಸಲಿದೆ ಎಂದು ಶಾಸಕ ಸಿ.ಟಿ.ರವಿ ತಿಳಿಸಿದ್ದಾರೆ.

ಪರಿವರ್ತನಾ ಯಾತ್ರೆ ನಾಳೆ ಮಧ್ಯಾಹ್ನ 2.30ಕ್ಕೆ ನಗರ ಪ್ರವೇಶಿಸಲಿದ್ದು, ಬೋಳ ರಾಮೇಶ್ವರ ದೇವಸ್ಥಾನದಿಂದ ಡಿಎಸಿಜಿ ಪಾಲಿಟೆಕ್ನಿಕ್ ಆವರಣದಲ್ಲಿ ವೇದಿಕೆಯವರೆಗೆ ಬೈಕ್ ಜಾಥಾ ನಡೆಸಲಾಗುವುದು ಎಂದಿದ್ದಾರೆ.

ಯಡಿಯೂರಪ್ಪ ಪ್ರಮುಖ ಭಾಷಣ ಮಾಡಲಿದ್ದಾರೆ. ಕೇಂದ್ರ ಸಚಿವರಾದ ಡಿ.ವಿ.ಸದಾನಂದಗೌಡ, ಅನಂತ್ಕುಮಾರ್, ಅನಂತ್ಕುಮಾರ್ ಹೆಗಡೆ ಸೇರಿದಂತೆ ಹಲವರು ಭಾಗವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.


Share this Story:

Follow Webdunia kannada

ಮುಂದಿನ ಸುದ್ದಿ

ಮಹಾನ್ ರಾಷ್ಟ್ರಕವಿ ಕುವೆಂಪುರವರಿಗೆ ಗೂಗಲ್ ಗೌರವ