Webdunia - Bharat's app for daily news and videos

Install App

ರಾಜ್ಯದಲ್ಲಿ ಬಿ.ಜೆ.ಪಿಯ ಸುನಾಮಿ ಎದ್ದಿದೆ:- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Webdunia
ಮಂಗಳವಾರ, 26 ಅಕ್ಟೋಬರ್ 2021 (20:38 IST)
ಅಕ್ಟೋಬರ್ 26: ರಾಜ್ಯದಲ್ಲಿ ಬಿ.ಜೆ.ಪಿ ಸುನಾಮಿ ಎದ್ದಿದೆ. ಇದರ ಪರಿಣಾಮವಾಗಿ ಹಾನಗಲ್ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಜಯಭೇರಿ ಬಾರಿಸಲಿದೆ  ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
 
ಅವರು ಇಂದು ಹಾನಗಲ್ ನಲ್ಲಿ ಭಜಂತ್ರಿ ಸಮುದಾಯದ ಮುಖಂಡರು ಹಾಗೂ ಜನರನ್ನು ಉದ್ದೇಶಿಸಿ ಮಾಡಿದ ಚುನಾವಣಾ ಪ್ರಚಾರ ಭಾಷಣದ ಸಂದರ್ಭದಲ್ಲಿ ಈ ವಿಶ್ವಾಸ ವ್ಯಕ್ತಪಡಿಸಿದರು.‌
 
ಪ್ರತಿ ಊರಿನಲ್ಲಿ ಬಿಜೆಪಿಗೆ ಬೆಂಬಲ ವ್ಯಕ್ತವಾಗಿದೆ. ಕಾಂಗ್ರೆಸ್ ಎಲ್ಲಾ ರಾಜ್ಯಗಳಲ್ಲಿಯೂ ನೆಲಕಚ್ಚಿದ್ದು, ಹಾನಗಲ್‌ನಲ್ಲಿಯೂ ಅವರನ್ನು ಮನೆಗೆ ಕಳಿಸಿದರೆ, ಅವರು ಖಾಯಂ ಆಗಿ ಮನೆಯಲ್ಲಿ ಇರುತ್ತಾರೆ ಎಂದರು. ಸುಳ್ಳು ಹೇಳುವವರಿಗೆ ಮನ್ನಣೆ ಕೊಡಬೇಡಿ ಎಂದು ಕರೆ ನೀಡಿದ ಮುಖ್ಯಮಂತ್ರಿಗಳು, ಎಲ್ಲಾ ಸಮುದಾಯಗಳ ಸಂರಕ್ಷಣೆಗೆ ನಮ್ಮ ಸರ್ಕಾರ ಬದ್ಧವಾಗಿದೆ ಎಂದರು.
 
ಇಷ್ಟು ದಿನಗಳು, ಕಾಂಗ್ರೆಸ್ ಜನರನ್ನು ಮತ ಬ್ಯಾಂಕ್ ಎಂದು ತಿಳಿದುಕೊಂಡಿದ್ದರು. ಅಧಿಕಾರ ಪಡೆದವರು ಜನರನ್ನು ಮರೆತು ಅಧಿಕಾರದಲ್ಲಿ ಮೆರೆಯುತ್ತಿದ್ದರು. ಈಗ ನೀವು ಜಾಗೃತರಾಗಿರುವುದರಿಂದ ನಿಮ್ಮನ್ನು ವಂಚಿಸಲು ಯಾರಿಗೂ ಸಾಧ್ಯವಿಲ್ಲ ಎಂದರು.  
 
ಕಾಂಗ್ರಸ್ ಪಕ್ಷ ಹತಾಶಗೊಂಡಿದೆ. ಚುನಾವಣೆ ಸಂದರ್ಭದಲ್ಲಿ ಮನಸ್ಸಿಗೆ ಬಂದಂತೆ ಮಾತನಾಡುತ್ತಿದ್ದಾರೆ. ದಾರಿ ತಪ್ಪಿಸುವ, ಸಮಾಜಗಳಿಗೆ ಅನ್ಯಾಯ ಮಾಡುವ ಕೆಲಸವನ್ನು ಮಾಡಿದ್ದಾರೆ. ಇಂದಿಗೂ ಅಲ್ಲಲ್ಲಿ ಅಸಮಾನತೆಯ ಕೂಗು ಕೇಳಿ ಬರುತ್ತಿದ್ದು, ಕಾಂಗ್ರೆಸ್ ಮೊದಲಿನಿಂದಲೂ ಸಮಾನತೆ ತರುವ ಕೆಲಸ ಮಾಡಿದ್ದರೆ, ಈ ಕೂಗು ಇರುತ್ತಿರಲಿಲ್ಲ. ಹಾಗಾಗಿ ತಾವೆಲ್ಲರೂ ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠವನ್ನು ಕಲಿಸಬೇಕು ಎಂದರು.
 
ಆದರೆ ನನ್ನ ಗುರಿ ನನ್ನ ಜನರನ್ನು, ನನ್ನನ್ನು ನಂಬಿದವರಿಗೆ ನ್ಯಾಯ ಕೊಡುವುದು ನನ್ನ ಧರ್ಮ. ದನಿ ಇಲ್ಲದವರಿಗೆ ದನಿ ಕೊಡುವ ಕೆಲಸವನ್ನು ಮಾಡುವುದಾಗಿ ಅಭಯ ನೀಡಿದರು.
ನಮ್ಮದು ಜನರ ಭಾವನೆಗಳನ್ನು ಅರ್ಥಮಾಡಿಕೊಳ್ಳುವ, ಅವರ ಮಾತುಗಳನ್ನು ಕೇಳುವ ಸರ್ಕಾರ ಎಂದು ಮುಖ್ಯಮಂತ್ರಿಗಳು, ಜನರಿಗೆ ಅಧಿಕಾರ ಮತ್ತು ನ್ಯಾಯ ದೊರಕಿಸುವ ನಿಟ್ಟಿನಲ್ಲಿ ಕೆಲಸ ಮಾಡುವುದಾಗಿ ಭರವಸೆಯಿತ್ತರು. ಯುವಕರಿಗೆ ಉದ್ಯೋಗ, ಸ್ತ್ರೀ ಶಕ್ತಿಸಂಘಗಳಿಗೆ  ಆರ್ಥಿಕ ಬಲ ಕೊಡುವ ಕೆಲಸವನ್ನು ಸರ್ಕಾರ ಮಾಡಲು ಜಿಲ್ಲಾ ಮಟ್ಟದ ಅಧಿಕಾರಿಯೊಬ್ಬರುನ್ನು ಶೀಘ್ರದಲ್ಲಿಯೇ ನೇಮಿಸುವುದಾಗಿ ತಿಳಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

Bakrid: ಅಲ್ಲಾಹನಿಗಾಗಿ ಕತ್ತು ಸೀಳಿಕೊಂಡು ದೇಹತ್ಯಾಗ ಮಾಡಿದ ವ್ಯಕ್ತಿ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ, ಆರೋಪಿಗಳ ಬಾಯಿಂದ್ದ ಬೆಚ್ಚಿಬೀಳಿಸುವ ಮಾಹಿತಿ ಹೊರಕ್ಕೆ

Covid 19: ದೇಶದಲ್ಲಿ ಏರುತ್ತಲೇ ಇದೆ ಕೋವಿಡ್ 19 ಪ್ರಕರಣಗಳು, ಸಕ್ರಿಯ ಪ್ರಕರಣಗಳ ಸಂಖ್ಯೆ ಹೀಗಿದೆ

Chitradurga Renukaswamy: ಹತ್ಯೆಯಾಗಿ ಇಂದಿಗೆ ಒಂದು ವರ್ಷ, ಪೂಜೆ ಸಲ್ಲಿಸಿದ ಕುಟುಂಬಸ್ಥರು

ಮುಂದಿನ ಸುದ್ದಿ