Webdunia - Bharat's app for daily news and videos

Install App

ಗ್ಯಾರಂಟಿ ಬಗ್ಗೆ ಅಪಪ್ರಚಾರ ಮಾಡುವ ಬಿಜೆಪಿಗೆ ಮತ್ತೊಮ್ಮೆ ಮುಖಭಂಗವಾಗಲಿದೆ: ಕಾಂಗ್ರೆಸ್

Sampriya
ಬುಧವಾರ, 14 ಆಗಸ್ಟ್ 2024 (19:21 IST)
ಬೆಂಗಳೂರು: ಕಾಂಗ್ರೆಸ್ ಸರ್ಕಾರ ಜಾರಿ ಮಾಡಿರುವ ಗ್ಯಾರಂಟಿ ಯೋಜನೆಗಳ ಬಗ್ಗೆ ಹಿಂದಿನಿಂದಲೂ ಸುಳ್ಳನ್ನು ಪೊಣಿಸುತ್ತಿರುವ ಬಿಜೆಪಿ ನಮ್ಮ ಕರ್ನಾಟಕ ಮಾದರಿಯ ಗ್ಯಾರಂಟಿ ಯೋಜನೆಗಳನ್ನು ನಕಲು ಮಾಡಿ, ಅನುಕರಣೆ ಮಾಡುತ್ತಿದೆ ಎಂದು ಕಾಂಗ್ರೆಸ್ ವ್ಯಂಗ್ಯ ಮಾಡಿದೆ.

ಸದ್ಯ ಅಭಿವೃದ್ಧಿ ಕಾರ್ಯಗಳಿಗೆ ಕಾಂಗ್ರೆಸ್ ಸರ್ಕಾರದಲ್ಲಿ ಹಣವಿಲ್ಲ. ಬೊಕ್ಕಸ ಖಾಲಿಯಾಗಿರವ ಕಾರಣ ಗ್ಯಾರಂಟಿ ಯೋಜನೆಗಳನ್ನು ಶೀಘ್ರದಲ್ಲೇ ನಿಲ್ಲಿಸಲಿದೆ ಎಂದು ಬಿಜೆಪಿ ಟೀಕೆ ಮಾಡುತ್ತಿದೆ. ಈ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ಅವರು ಸ್ಪಷ್ಟನೆ ನೀಡಿ ಯಾವುದೇ ಕಾರಣಕ್ಕೂ ಗ್ಯಾರಂಟಿ ನಿಲ್ಲಿಸಲ್ಲ ಎಂದು ಭರವಸೆಯನ್ನು ನೀಡಿದರು.

ಈ ಬಗ್ಗೆ ಎಕ್ಸ್‌ನಲ್ಲಿ ಬರೆದುಕೊಂಡಿರುವ ಕಾಂಗ್ರೆಸ್ , ಗ್ಯಾರಂಟಿ ಯೋಜನೆಗಳನ್ನು ಘೋಷಿಸಿದ ದಿನದಿಂದಲೂ ಬಿಜೆಪಿ ಒಂದಲ್ಲ ಒಂದು ಅಪಪ್ರಚಾರ ಮಾಡುತ್ತಿದ್ದಾರೆ.

ನಾವು ಗ್ಯಾರಂಟಿ ಯೋಜನೆಗಳನ್ನು ಘೋಷಿಸಿದಾಗ ಜಾರಿ ಮಾಡುವುದು ಅಸಾಧ್ಯ ಎಂದು ಅಪಹಾಸ್ಯ ಮಾಡಿದರು.

ಸರ್ಕಾರ ರಚಿಸಿದ ಮರುದಿನವೇ ಗ್ಯಾರಂಟಿ ಯೋಜನೆಗಳನ್ನು ಏಕೆ ಘೋಷಿಸಿಲ್ಲ ಎಂದು ಪ್ರಶ್ನಿಸಿದರು.

ನಾವು ಜಾರಿ ಮಾಡಿ ಯಶಸ್ವಿಯಾದ ನಂತರ ಈಗ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುತ್ತಾರೆ ಎಂಬ ಅಪಪ್ರಚಾರ ಮಾಡುತ್ತಿದೆ ಬಿಜೆಪಿ ಕರ್ನಾಟಕ

ಇದೇ ನಿರ್ಲಜ್ಜ ಬಿಜೆಪಿ ನಮ್ಮ ಗ್ಯಾರಂಟಿ ಯೋಜನೆ ಜಾರಿ ಆದ ನಂತರ ಈ ಯೋಜನೆಗಳನ್ನು ನಕಲು ಮಾಡಿದೆ.
ಅಲ್ಲದೆ 'ಕರ್ನಾಟಕ ಮಾದರಿ'ಯನ್ನು ಇತರೆ ರಾಜ್ಯಗಳು ಅನುಕರಣೆ ಮಾಡುತ್ತಿವೆ.

ಬಿಜೆಪಿಯ ಅಪಪ್ರಚಾರವನ್ನು ಸುಳ್ಳಾಗಿಸುತ್ತಾ ಬಂದಿದ್ದೇವೆ, ಈಗ ಮತ್ತೊಮ್ಮೆ ಸುಳ್ಳಿನ ಬಿಜೆಪಿ ಮುಖಭಂಗ ಅನುಭವಿಸಲಿದೆ.

ಅರ್ಹ ಫಲಾನುಭವಿಗಳಿಗೆ ಗ್ಯಾರಂಟಿ ಯೋಜನೆಗಳನ್ನು ನೀಡಲು ನಮ್ಮ ಸರ್ಕಾರ ಬದ್ಧವಾಗಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಟರ್ಕಿ ಮೇಲೆ ಒಂದೊಂದೆ ಪ್ರತೀಕಾರ ತೀರಿಸುತ್ತಿರುವ ಭಾರತ: ವಿಮಾನಯಾನ ಸಂಸ್ಥೆಯ ಲೈಸನ್ಸ್‌ ರದ್ದು ಮಾಡಿದ ಭಾರತ

ಸೋಫಿಯಾ ಖುರೇಷಿ ವಿರುದ್ಧ ವಿವಾದಾತ್ಮಕ ಹೇಳಿಕೆ: ಬೆಳಗಾವಿಯಲ್ಲಿ ವಿಜಯ್ ಶಾ ವಿರುದ್ಧ ದೂರು

ಸೇನಾಧಿಕಾರಿ ಖುರೇಷಿ ಅತ್ತೆ ಮಾವನ ಮನೆ ಮೇಲೆ ದಾಳಿ ಪೋಸ್ಟ್‌: ಮೂವರ ವಿರುದ್ಧ ಪ್ರಕರಣ ದಾಖಲು

ಬರ್ತಡೇ ಆಚರಿಸಲ್ಲ ಅಂತಾ ಹೇಳಿ ನೆನಪಿನಲ್ಲಿ ಉಳಿದುಕೊಳ್ಳುವ ಹಾಗೇ ದಿನ ಕಳೆದ ಡಿಸಿಎಂ ಡಿಕೆ ಶಿವಕುಮಾರ್‌: Video

ಪಾಕ್‌ಗೆ ಸಹಾಯ ಮಾಡಿದ ಟರ್ಕಿ: ಟರ್ಕಿ ಆ್ಯಪಲ್ ಬ್ಯಾನ್ ಮಾಡಲು ಭಾರತದಲ್ಲಿ ಹೆಚ್ಚಿದ ಒತ್ತಾಯ

ಮುಂದಿನ ಸುದ್ದಿ
Show comments