ರೈತರ ಒಂದು ಅಡಿ ಜಾಗವನ್ನು ಕಿತ್ತುಕೊಳ್ಳಲು ಬಿಜೆಪಿ ಬಿಡುವುದಿಲ್ಲ: ಬಿವೈ ವಿಜಯೇಂದ್ರ

Sampriya
ಗುರುವಾರ, 7 ನವೆಂಬರ್ 2024 (20:01 IST)
ಬೆಂಗಳೂರು: ನಾಡಿನ ರೈತಬಂಧುಗಳು ಭಯ ಪಡುವ ಅಗತ್ಯವಿಲ್ಲ, ರೈತರ ಒಂದು ಅಡಿ ಜಾಗವನ್ನು ಕಿತ್ತುಕೊಳ್ಳಲು ಬಿಜೆಪಿ  ಬಿಡುವುದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿದರು.

ಹಾವೇರಿ ಜಿಲ್ಲೆಯ ಹರನಗಿ ಗ್ರಾಮದ ರೈತ ಚನ್ನಪ್ಪ ಎಂಬುವವರು ಜಮೀನಿನ ಪಹಣಿಯಲ್ಲಿ ವಕ್ಫ್‌ ಹೆಸರು ನಮೂದು ಆಗಿದ್ದಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಇದನ್ನು ಉಲ್ಲೇಖಿಸಿ ಸಾಮಾಜಿಕ ಜಾಲತತಾಣದ ಎಕ್ಸ್‌ನಲ್ಲಿ ಬರೆದುಕೊಂಡಿರುವ ಅವರು ಜಮೀನಿನ ಪಹಣಿಯಲ್ಲಿ ವಕ್ಫ್ ಹೆಸರು ಬಂದಿರುವುದಕ್ಕೆ ಮಾನಸಿಕವಾಗಿ ಆಘಾತಗೊಂಡು ಹಾವೇರಿ ಜಿಲ್ಲೆಯ ಹರನಗಿ ಗ್ರಾಮದ ರೈತ ರುದ್ರಪ್ಪ ಆತ್ಮಹತ್ಯೆಗೆ ಶರಣಾಗಿರುವುದು ತೀವ್ರ ಕಳವಳಕಾರಿ ಸುದ್ದಿಯಾಗಿದೆ. ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗಳು, ತುಷ್ಟೀಕರಣ ರಾಜಕೀಯದ ಪರಾಕಾಷ್ಠೆಯ ಎಲ್ಲೆ ಮೀರಿದಂತೆ ವರ್ತಿಸುತ್ತಿರುವ ಸಚಿವರುಗಳಿಂದ ಅನ್ನದಾತರು ಹೆದರಿ ನೇಣಿಗೆ ಕೊರಳೊಡ್ಡುವ ಪರಿಸ್ಥಿತಿ ಬಂದೊದಗಿದ್ದು ದುರಂತವೇ ಸರಿ.

ನಾಡಿನ ರೈತಬಂಧುಗಳು ಭಯ ಪಡುವ ಅಗತ್ಯವಿಲ್ಲ, ಬಿಜೆಪಿ ರೈತರ ಒಂದು ಅಡಿ ಜಾಗವನ್ನು ಕಿತ್ತಿಕೊಳ್ಳಲು ಬಿಡುವುದಿಲ್ಲ, ಅಲ್ಲದೇ ಈ ಬಹುದೊಡ್ಡ ಪ್ರಮಾದ ಸಂಭವಿಸಲು ಕಾರಣವಾಗಿರುವ ಕಾಂಗ್ರೆಸ್ ಸರ್ಕಾರ ರೈತನ ಸಾವಿನ ಹೊಣೆ ಹೊರಬೇಕು. ಈ ಕೂಡಲೇ ವಕ್ಫ್ ಕಾಯ್ದೆ ಹಿಂಪಡೆದು, ಮೃತ ರೈತ ಕುಟುಂಬಕ್ಕೆ ಸೂಕ್ತ ಪರಿಹಾರ ಕಲ್ಪಿಸಬೇಕೆಂದು ಆಗ್ರಹಿಸುತ್ತೇನೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಾಯಕ ಜುಬೀನ್ ಗಾರ್ಗ್‌ 13ನೇ ದಿನದ ಕಾರ್ಯದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಭಾಗಿ

RSSನ ಸಮಾನಾರ್ಥ ಪದವೇ ದೇಶಭಕ್ತಿ: ಪ್ರಧಾನಿ ನರೇಂದ್ರ ಮೋದಿ

ನವೆಂಬರ್ ಕ್ರಾಂತಿ ಬಗ್ಗೆ ಸ್ಫೋಟಕ ಹೇಳಿಕೆ ಕೊಟ್ಟ ಸಿಎಂ ಸಿದ್ದರಾಮಯ್ಯ

ಜೈಲಿನಲ್ಲಿ ಮಾಜಿ ಸಚಿವ ಗಾಯತ್ರಿ ಪ್ರಜಾಪತಿ ಮೇಲೆ ಸಹಕೈದಿ ಹಲ್ಲೆ, ಕಾರಣ ಏನ್ ಗೊತ್ತಾ

ರಾಹುಲ್‌ಗೆ ಗುಂಡು ಹೊಡೆಯುತ್ತೇವೆಂದ ಬಿಜೆಪಿ ವಕ್ತಾರನ ಬೆದರಿಕೆಗೆ ಪ್ರಧಾನಿ ಮೌನದ ಅರ್ಥವೇನು: ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments