Webdunia - Bharat's app for daily news and videos

Install App

ಕರ್ನಾಟಕದಲ್ಲಿ ದೋಸ್ತಿ ಸರಕಾರವನ್ನು ಅಲುಗಾಡಿಸಲು ಬಿಜೆಪಿಯಿಂದಾಗದು- ರಾಹುಲ್ ಗಾಂಧಿ ಸ್ಪಷ್ಟನೆ

Webdunia
ಶನಿವಾರ, 13 ಜುಲೈ 2019 (06:14 IST)
ಅಹಮದಾಬಾದ್ : ರಾಜ್ಯ ರಾಜಕೀಯದಲ್ಲಿ ಕೋಲಾಹಲ ಸೃಷ್ಟಿಯಾಗಿದ್ದು, ಇದಕ್ಕೆ ಬಿಜೆಪಿಯೇ ನೇರ ಹೊಣೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ.




ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಣ ಬಲ, ಅಧಿಕಾರ ಬಲ, ಬೆದರಿಕೆ ತಂತ್ರವನ್ನು ಬಿಜೆಪಿ ಅನುಸರಿಸುತ್ತಿದೆ. ರಾಜ್ಯ ಸರಕಾರಗಳನ್ನು ಉರುಳಿಸಲು ಬಿಜೆಪಿ ನಾಯಕರು ಮುಂದಾಗಿದ್ದಾರೆ. ಕರ್ನಾಟಕದಲ್ಲಿ ಕಾಂಗ್ರೆಸ್‌-ಜೆಡಿಎಸ್‌ ಸಮ್ಮಿಶ್ರ ಸರಕಾರವನ್ನು ಬಿಕ್ಕಟ್ಟಿಗೆ ಸಿಲುಕಿಸಲಾಗಿದೆ. ಇದಕ್ಕೆ ಬಿಜೆಪಿ ವರಿಷ್ಠ ನಾಯಕರ ಕುಮ್ಮಕ್ಕಿದೆ ಎಂದು ಕಿಡಿಕಾರಿದ್ದಾರೆ.


ಇದೇ ರೀತಿ ಗೋವಾ ಮತ್ತು ಈಶಾನ್ಯ ರಾಜ್ಯಗಳಲ್ಲೂ ಬಿಜೆಪಿ ಸರಕಾರಗಳನ್ನು ಉರುಳಿಸಲು ಪ್ರಯತ್ನಿಸುತ್ತಿದೆ. ಎಲ್ಲ ಬೆಳವಣಿಗೆಗಳು ಸ್ಪಷ್ಟವಾಗಿದೆ. ಬಿಜೆಪಿಯು ಇದೇ ರೀತಿ ಎಲ್ಲಡೆ ಮಾಡುತ್ತಿರುವುದು ಅಧಿಕಾರದ ಸಂಪೂರ್ಣ ದುರುಪಯೋಗ ಆಗುತ್ತಿದ್ದಕ್ಕೆ ಸಾಕ್ಷಿಯಾಗಿದೆ. ಆದರೆ ಕರ್ನಾಟಕದಲ್ಲಿ ದೋಸ್ತಿ ಸರಕಾರವನ್ನು ಅಲುಗಾಡಿಸಲು ಆಗದು ಎಂದು ರಾಹುಲ್‌ ಗಾಂಧಿ ಸ್ಪಷ್ಟವಾಗಿ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments