Select Your Language

Notifications

webdunia
webdunia
webdunia
webdunia

ರಾಜ್ಯದಲ್ಲಿ ಕಾಂಗ್ರೆಸ್‌ನ್ನು ಬಿಜೆಪಿ ಕಿತ್ತು ಬಿಸಾಡಲಿದೆ– ಅಮಿತ್ ಶಾ

ರಾಜ್ಯದಲ್ಲಿ ಕಾಂಗ್ರೆಸ್‌ನ್ನು ಬಿಜೆಪಿ ಕಿತ್ತು ಬಿಸಾಡಲಿದೆ– ಅಮಿತ್ ಶಾ
ಚಿತ್ರದುರ್ಗ , ಬುಧವಾರ, 10 ಜನವರಿ 2018 (13:54 IST)
ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ಬಿಜೆಪಿ ಕಿತ್ತಿ ಬಿಸಾಡಲಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹೇಳಿದ್ದಾರೆ.
 
ಚಿತ್ರದುರ್ಗದ ಹೊಳಲ್ಕೆರೆಯಲ್ಲಿ ಬಿಜೆಪಿ ಪರಿವರ್ತನಾ ಯಾತ್ರೆಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ಸಿಗರ ಅಭಿವೃದ್ಧಿ ಮಾತ್ರ ಆಗಿದೆ ಎಂದು ಆರೋಪಿಸಿದ್ದಾರೆ.
 
ರೈಲಿನ ಎಂಜಿನ್ ತೆಗೆದರೆ ರೈಲು ಮುಂದಕ್ಕೆ ಚಲಿಸಲಿದೆಯೇ, ಅದರಂತೆ ಕಾಂಗ್ರೆಸ್ ಅಭಿವೃದ್ಧಿಯನ್ನು ಬಿಟ್ಟು ಹೊರಟಿದೆ. ಸರ್ಕಾರದ ವಿರುದ್ಧ ಯುವಕರು ಹಾಗೂ ರೈತರು ಆಕ್ರೋಶಗೊಂಡಿದ್ದಾರೆ ಎಂದು ತಿಳಿಸಿದ್ದಾರೆ.

ಇಲ್ಲಿನ ಜನರ ಆಶೀರ್ವಾದದಿಂದ ನರೇಂದ್ರ ಮೋದಿ ಅವರು ಪ್ರಧಾನಮಂತ್ರಿ ಆಗಿದ್ದಾರೆ ಎಂದಿರುವ ಅವರು, ಕೇಂದ್ರ ಸರ್ಕಾರ ಮಲತಾಯಿ ಧೋರಣೆ ಅನುಸರಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಅವರಿಗೆ ಉತ್ತರಿಸಲು ಬಂದಿದ್ದೇನೆ. ಕೇಂದ್ರ ಸರ್ಕಾರ ರಾಜ್ಯ ಸರ್ಕಾರಕ್ಕೆ 3ಲಕ್ಷ ಕೋಟಿ ಅನುದಾನ ನೀಡಿದೆ. ಇದು ನಿಮಗೆ ತಲುಪಿದೆಯೇ ಎಂದು ಪ್ರಶ್ನಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಕಾಂಗ್ರೆಸ್ ಜೊತೆ ಮೈತ್ರಿ ಮಾತು, ವೇಸ್ಟ್ ಆಫ್ ಟೈಂ– ಅಖಿಲೇಶಯಾದವ್