Webdunia - Bharat's app for daily news and videos

Install App

ಉಪಚುನಾವಣೆಯಲ್ಲಿ ಅಭ್ಯರ್ಥಿಗಳ ಗೆಲುವು ಖಚಿತ: ಬಿಜೆಪಿ

Webdunia
ಶುಕ್ರವಾರ, 31 ಮಾರ್ಚ್ 2017 (19:56 IST)
ಕಾಂಗ್ರೆಸ್ ಪಕ್ಷದವರು ವಲಸಿಗರಂತೆ ಪಕ್ಷದ ಅಭ್ಯರ್ಥಿಯ ಗೆಲುವಿಗಾಗಿ ಬೆಂಗಳೂರು ತೊರೆದು ಉಪಚುನಾವಣೆಗಾಗಿ ಬಂದಿದ್ದಾರೆ ಎಂದು ಬಿಜೆಪಿ ಮುಖಂಡ ಸುರೇಶ್ ಕುಮಾರ್ ಲೇವಡಿ ಮಾಡಿದ್ದಾರೆ. 
 
ಬಿಜೆಪಿ ಅಭ್ಯರ್ಥಿ ವಿ.ಶ್ರೀನಿವಾಸ್ ಪ್ರಸಾದ್ ಪರ ಪ್ರಚಾರ ಕೈಗೊಂಡ ಅವರು, ಪ್ರಧಾನಿ ಮೋದಿಯವರ ಪಾರದರ್ಶಕ ಅಡಳಿತಕ್ಕೆ ಮೆಚ್ಚಿ ಜನತೆ ಬಿಜೆಪಿಯತ್ತ ಆಕರ್ಷಿತರಾಗುತ್ತಿದ್ದಾರೆ. ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯ ಗೆಲುವು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು. 
 
ಕಳೆದ ನಲವತ್ತು ವರ್ಷಗಳಿಂದ ರಾಜಕೀಯದಲ್ಲಿರುವ ಶ್ರೀನಿವಾಸ್ ಪ್ರಸಾದ್, ಯಾವತ್ತೂ ತಮ್ಮ ಇಮೇಜ್‌ಗೆ ಧಕ್ಕೆ ಬರುವಂತಹ ಕಾರ್ಯ ಮಾಡಿಲ್ಲ. ಬಾಯಿ, ಕೈ ಶುದ್ಧವಾಗಿರಿಸಿಕೊಂಡಿದ್ದಾರೆ. ಆದರೆ, ಕಾಂಗ್ರೆಸ್ ಪಕ್ಷದವರ ಮೈತುಂಬಾ ಭ್ರಷ್ಟಾಚಾರ ತುಂಬಿ ತುಳುಕುತ್ತಿದೆ ಎಂದು ಆರೋಪಿಸಿದರು.  
 
ಉಪಚುನಾವಣೆಯಲ್ಲಿ ಬಿಜೆಪಿ ಪಕ್ಷ ಜಯಗಳಿಸಲಿದೆ ಎನ್ನುವ ವರದಿಗಳಿಂದ ಆತಂಕಗೊಂಡ ಸಿಎಂ ಸಿದ್ದರಾಮಯ್ಯ, ಪ್ರತಿಯೊಂದು ಜಿಲ್ಲಾ ಪಂಚಾಯಿತಿಗೊಂದರಂತೆ ಉಸ್ತುವಾರಿ ಸಚಿವರನ್ನು ನೇಮಕ ಮಾಡಿದ್ದಾರೆ ಎಂದು ಬಿಜೆಪಿ ಮುಖಂಡ ಸುರೇಶ್ ಕುಮಾರ್ ವ್ಯಂಗ್ಯವಾಡಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Operation Sindoor: ಪಾಕ್‌ಗೆ ಸಹಾಯ ಮಾಡಿದ್ದಕ್ಕೆ ಟರ್ಕಿಗೆ ತಕ್ಕ ಉತ್ತರ ಕೊಟ್ಟ ಭಾರತ

ಭಯೋತ್ಪಾದಕರಿಗೆ ಪಾಠ ಕಲಿಸಲು ಅವರ ಸಹೋದರಿಯನ್ನು ಕಳುಹಿಸಿದೆವು: ಸೋಫಿಯಾ ಖುರೇಷಿ ವಿರುದ್ಧದ ವಿಜಯ್ ಶಾ ಹೇಳಿಕೆಗೆ ಆಕ್ರೋಶ

ಮೂಕ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ ಅರೋಪ, ನ್ಯಾಯಕ್ಕಾಗಿ ಶವವಿಟ್ಟು ಪ್ರತಿಭಟನೆ

ಅರುಣಾಚಲ ಪ್ರದೇಶದ ಮೇಲೆ ಹಕ್ಕು ಚಲಾಯಿಸಲು ಬಂದ ಚೀನಾಗೆ ಖಡಕ್‌ ಉತ್ತರ ಕೊಟ್ಟ ಭಾರತ

ಭಾರತದ ಮೇಲಿನ ದಾಳಿಗೆ ಪಾಕ್‌ಗೆ ಸಹಾಯ ಮಾಡಿದ ಟರ್ಕಿ, ಕಳುಹಿಸಿದ ಡ್ರೋನ್‌ಗಳ ಲೆಕ್ಕಾ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments