Webdunia - Bharat's app for daily news and videos

Install App

ಪ್ರಧಾನಿ ಮೋದಿ ಕಾರ್ಯವೈಖರಿಯನ್ನು ಅಟಲ್‌ಜೀ ನೋಡುವ ಸ್ಥಿತಿಯಲ್ಲಿಲ್ಲ: ಬಿಜೆಪಿ

Webdunia
ಭಾನುವಾರ, 25 ಡಿಸೆಂಬರ್ 2016 (12:21 IST)
ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಜೀ ಅವರು ಯಾರನ್ನು ಗುರುತಿಸುವ ಸ್ಥಿತಿಯಲಿಲ್ಲ. ಆದರೆ, ಅವರು ನೆಟ್ಟ ಮರ ಹೆಮ್ಮರವಾಗಿ ಬೆಳೆದಿದೆ. ಪ್ರಧಾನಿ ಮೋದಿ ಅವರ ಕಾರ್ಯವೈಖರಿಯನ್ನು ನೋಡಬೇಕಿತ್ತು. ಆದರೆ, ಅಟಲ್‌ಜೀ ಅವರು ಆ ಸ್ಥಿತಿಯಲಿಲ್ಲ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ರವಿ ಕುಮಾರ್ ಅವರು ಭಾವುಕರಾದರು. 
 
ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಪಕ್ಷದ ಕಚೇರಿಯಲ್ಲಿ ಇಂದು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನವನ್ನು ಸುಶಾಸನ ದಿನವಾಗಿ ಆಚರಿಸಲಾಯಿತು. ಈ ವೇಳೆ ಕೇಂದ್ರ ಸಚಿವ ಸದಾನಂದಗೌಡ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ರವಿ ಕುಮಾರ್ ಸೇರಿದಂತೆ ಹಲವು ಗಣ್ಯ ನಾಯಕರು ಉಪಸ್ಥಿತರಿದ್ದರು.
 
ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ರವಿ ಕುಮಾರ್ ಅವರು, ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಜೀ ಅವರು 26 ಪಕ್ಷಗಳನ್ನು ಸೇರಿಸಿ 6 ವರ್ಷ ಉತ್ತಮ ಆಡಳಿತ ನೀಡಿದ್ದರು. ಇಂತಹ ಉತ್ತಮ ಆಡಳಿತಗಾರ ಮತ್ತೊಬ್ಬರು ಇರಲು ಸಾಧ್ಯವೇ ಇಲ್ಲ ಎಂದು ಅಭಿಪ್ರಾಯಪಟ್ಟರು. 
 
ನಮ್ಮ ದೇಶಕ್ಕೆ ಉತ್ತಮ ರಸ್ತೆಗಳನ್ನು ಕೊಡುಗೆಯಾಗಿ ನೀಡಿದ್ದ ಅಟಲ್ ಬಿಹಾರಿ ವಾಜಪೇಯಿ ಅವರು, ಕವಿ, ವಾಗ್ಮಿ ಹಾಗೂ ರಾಷ್ಟ್ರಧರ್ಮ ಪತ್ರಿಕೆಯ ಸಂಪಾದಕರು ಆಗಿದ್ದರು ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ರವಿ ಕುಮಾರ್ ಅವರು ಪ್ರಶಂಸೆ ವ್ಯಕ್ತಪಡಿಸಿದರು.  

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

India Pakistan war: S-400 ಭಾರತದ ಸುದರ್ಶನ ಚಕ್ರ, ನಮ್ಮನ್ನು ರಕ್ಷಿಸಿದ್ದು ಹೇಗೆ

Karnataka Weather: ರಾಜ್ಯದಲ್ಲಿ ಇಂದು ಮಳೆಯಿರುತ್ತಾ, ಹವಾಮಾನ ವರದಿ ನೋಡಿ

India Pakistan war: ಕರಾಚಿ ಬಂದರು ಪುಡಿಗಟ್ಟಿದ ಐಎನ್ಎಸ್ ವಿಕ್ರಾಂತ್ ವಿಡಿಯೋ

India Pakistan war: ಇಸ್ಲಾಮಾಬಾದ್ ಮೇಲೆ ಭಾರತ ದಾಳಿ

India Pakistan war: ರಜೌರಿಯ ಅಗಸದಲ್ಲಿ ಕ್ಷಿಪಣಿ ದಾಳಿಯ ಭಯಾನಕ ವಿಡಿಯೋ

ಮುಂದಿನ ಸುದ್ದಿ
Show comments