Webdunia - Bharat's app for daily news and videos

Install App

ಶೋಭಾ ಕರಂದ್ಲಾಜೆ ಪ್ರಚಾರ ವೇಳೆ ಯಡವಟ್ಟು: ಓರ್ವನ ಸಾವು

Krishnaveni K
ಸೋಮವಾರ, 8 ಏಪ್ರಿಲ್ 2024 (16:30 IST)
ಬೆಂಗಳೂರು: ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಚುನಾವಣಾ ಪ್ರಚಾರದ ವೇಳೆ ನಿರ್ಲಕ್ಷದಿಂದಾಗಿ ಓರ್ವ ಕಾರ್ಯಕರ್ತನ ಸಾವಾಗಿದೆ.

ಕೆಆರ್ ಪುರಂನ ಟಿಸಿ ಪಾಳ್ಯದಲ್ಲಿ ಶೋಭಾ ಕರಂದ್ಲಾಜೆ ಚುನಾವಣಾ ಪ್ರಚಾರ ನಡೆಸುತ್ತಿದ್ದರು. ಈ ವೇಳೆ ಬೈಕ್ ನಲ್ಲಿ ಬರುತ್ತಿದ್ದ ಓರ್ವನಿಗೆ ಶೋಭಾ ಬೆಂಗಾವಲು ವಾಹನ ಬಾಗಿಲು ಬಡಿದು ಅಪಘಾತವಾಗಿದೆ. ಇದರಿಂದಾಗಿ ಆತ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತಪಟ್ಟವರನ್ನು 55 ವರ್ಷದ ಪ್ರಕಾಶ್ ಎಂದು ಗುರುತಿಸಲಾಗಿದೆ.

ರಸ್ತೆ ಬದಿ ಕಾರು ಪಾರ್ಕ್ ಮಾಡಿ ಕಾರಿನಲ್ಲಿದ್ದವರು ಹಿಂದೆ ಮುಂದೆ ನೋಡದೇ ಬಾಗಿಲು ತೆರೆದಿದ್ದಾರೆ. ಇದರಿಂದಾಗಿ ಹಿಂದೆಯಿಂದ ದ್ವಿಚಕ್ರ ವಾಹನದಲ್ಲಿ ಬರುತ್ತಿದ್ದ ಪ್ರಕಾಶ್ ನೆಲಕ್ಕೆ ಬಿದ್ದಿದ್ದಾರೆ. ನೆಲಕ್ಕೆ ಬಿದ್ದ ಅವರ ಮೇಲೆ ಹಿಂದಿನಿಂದ ಬಂದ ಖಾಸಗಿ ಬಸ್ ಹರಿದಿದೆ. ಪರಿಣಾಮ ತೀವ್ರ ಗಾಯಗೊಂಡ ಪ್ರಕಾಶ್ ಆಸ್ಪತ್ರೆ ಸಾಗಿಸುವ ಮಧ‍್ಯದಲ್ಲಿ ಸಾವನ್ನಪ್ಪಿದ್ದಾರೆ.

ಘಟನೆ ಬಗ್ಗೆ ಪ್ರತಿಕ್ರಿಯಿಸಿರುವ ಶೋಭಾ ಕರಂದ್ಲಾಜೆ ನಮ್ಮ ಪ್ರಚಾರದ ವೇಳೆ ಓರ್ವ ಕಾರ್ಯಕರ್ತನ ಸಾವಾಗಿದೆ. ಇದು ಅತ್ಯಂತ ದುರದೃಷ್ಟಕರ. ಪೋಸ್ಟ್ ಮಾರ್ಟಂ ಬಳಿಕ ಸಾವು ಹೇಗಾಗಿದೆ ಎಂದು ತಿಳಿಯಲಿದೆ. ಪ್ರಕಾಶ್ ನಿಷ್ಠಾವಂತ ಕಾರ್ಯಕರ್ತ. ಆತನ ಕುಟುಂಬಕ್ಕೆ ನೆರವು ನೀಡಲಾಗುವುದು ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments