Publish Date: Tue, 23 Jan 2018 (21:05 IST)
Updated Date: Tue, 23 Jan 2018 (21:10 IST)
ಬಿಜೆಪಿ ಪರಿವರ್ತನಾ ಯಾತ್ರೆಯ ಸಮಾರೋಪ ಸಮಾರಂಭದ ಜವಾಬ್ದಾರಿಯನ್ನು ಬಿಜೆಪಿ ರಾಷ್ಟ್ರೀಯ ಸಹ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ ಅವರಿಗೆ ವಹಿಸಲಾಗಿದೆ
ಫೆಬ್ರುವರಿ 4ರಂದು ಬೆಂಗಳೂರಿನಲ್ಲಿ ನಡೆಯಲಿರುವ ಬಿಜೆಪಿ ಪರಿವರ್ತನಾ ಯಾತ್ರೆಯ ಸಮಾರೋಪ ಸಮಾರಂಭಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರೇ ಆಗಮಿಸಲಿರುವುದರಿಂದ ಉದ್ಘಾಟನೆ ಸಮಾರಂಭದಂತೆ ಈ ಕಾರ್ಯಕ್ರಮ ಆಗಬಾರದು ಎಂದು ಎಚ್ಚೆತ್ತುಕೊಂಡಿರುವ ಬಿಜೆಪಿ ಈ ಕಾರ್ಯಕ್ಕೆ ಮುಂದಾಗಿದೆ.
ಶೋಭಾ ಕರಂದ್ಲಾಜೆ ಹಾಗೂ ಆರ್.ಅಶೋಕ್ ಅವರಿಗೆ ಉದ್ಘಾಟನೆ ಕಾರ್ಯಕ್ರಮದ ಉಸ್ತುವಾರಿ ನೀಡಲಾಗಿತ್ತು, ಆದರೆ, ಜನರನ್ನು ಸೇರಿಸಲು ವಿಫಲರಾಗಿದ್ದರು. ಈಗ ಬಿ.ಎಲ್.ಸಂತೋಷ ಅವರ ನಿರ್ದೇಶನದಂತೆ ಸಮಾರೋಪ ಕಾರ್ಯಕ್ರಮದ ಸಿದ್ಧತೆ ನಡೆಸಲಾಗಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ
ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.