Webdunia - Bharat's app for daily news and videos

Install App

ಕಾವೇರಿ ನೀರಿಗಾಗಿ ವಾಟಾಳ್ ನಾಗರಾಜ್ ರಿಂದ ಕರಾಳ ದಿನಾಚರಣೆ

Webdunia
ಸೋಮವಾರ, 16 ಅಕ್ಟೋಬರ್ 2023 (15:23 IST)
ಇಂದು ವಾಟಾಳ್ ನಾಗರಾಜ್ ನೇತೃತ್ವದಲ್ಲಿ  ನಗರದ ಮೈಸೂರು ಬ್ಯಾಂಕ್ ವೃತ್ತದಲ್ಲಿ ಕಪ್ಪು ಬಟ್ಟೆ ಪ್ರದರ್ಶಿಷಿ ಕರಾಳದಿನ ಆಚರಣೆ ಮಾಡಲಾಗಿದೆ‌.ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸುವಂತೆ ಕಾವೇರಿ ನದಿ ನೀರು ಪ್ರಾಧಿಕಾರ ಆದೇಶಿಸಿತ್ತು
.ಆದೇಶ ಖಂಡಿಸಿ ಇಂದು ಕನ್ನಡ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಹೋರಾಟ ನಡೆಸಿದ್ದು,ಪ್ರತಿಭಟನೆಯಲ್ಲಿ ವಿವಿಧ ಕನ್ನಡಪರ ಸಂಘಟನೆಗಳ ಮುಖಂಡರು ಭಾಗಿಯಾಗಿದ್ರು.
 
ಈ ವೇಳೆ ಮಾತನಾಡಿದ ವಾಟಾಳ್ ನಾಗರಾಜ್ ನೀರನ್ನ ಬಿಡ್ತಾನೆ ಇದಾರೆ.ನಮಗೆ ನೀರಿಲ್ಲ, ಕರೆಂಟ್ ಇಲ್ಲ.ತುರ್ತು ಶಾಸನ ಸಭೆ ಕರೆದು ನೀರು ಬಿಡದಿರುವ ತೀರ್ಮಾನ ತೆಗೆದು ಕೊಳ್ಳಬೇಕು.ತಮಿಳುನಾಡಿನವರು ಶಾಸನ ಸಭೆ ಕರೆದು ನಿರ್ಣಯ ಮಾಡಿದ್ದಾರೆ.ನಮ್ಮವರು ಶಾಸನ ಸಭೆ ಕರೆದು‌ ತಿರ್ಮಾನ ತೆಗೆದು ಕೊಂಡಿಲ್ಲ.ಪಾರ್ಲಿಮೆಂಟ್ ಸದಸ್ಯರು ಎಲ್ಲಿದ್ದಾರೋ ಗೊತ್ತಿಲ್ಲ.ಕಾವೇರಿಗಾಗಿ ಎಂಪಿಗಳು ಮಾತನಾಡ್ತಿಲ್ಲ.ಕೂಡಲೇ ಅವರು ರಾಜೀನಾಮೆ ಕೊಡಬೇಕು.ನಾಳೆ ವಿಧಾನ ಸೌಧಕ್ಕೆ ಮುತ್ತಿಗೆ ಹಾಕ್ತೇವೆ ಎಂದು ವಾಟಾಳ್ ನಾಗರಾಜ್ ಎಚ್ಚರಿಕೆ ನೀಡಿದ್ದಾರೆ.
 
ಅಲ್ಲದೇ ಶಾಸನ ಸಭೆ ಕರೆಯುವಂತೆ ಒತ್ತಾಯ ಮಾಡ್ತೇವೆ.ಅಕ್ಟೋಬರ್ 18ಕ್ಕೆ ಅತ್ತಿಬೆಲೆಯಿಂದ  ಹೊಸೂರಿನವರೆಗೆ ಪ್ರತಿಭಟನೆ ಮಾಡ್ತೇವೆ.ಹೊಸೂರಿನ ತಹಶಿಲ್ದಾರರ ಕಚೇರಿ ಮುಂಭಾಗ ಪ್ರತಿಭಟನೆ ಮಾಡ್ತೇವೆ.ಸಿದ್ದರಾಮಯ್ಯ ಮೊದಲು ಹುಲಿ ಆಗಿದ್ರು ಈಗ ಡಬ್ಬದ ಗಿಣಿಯಾಗಿದ್ದಾರೆ.ಬರೀ ಶಾಸ್ತ್ರ ಹೇಳಿ ಡಬ್ಬಿಗೆ ಸೇರಿಕೊಳ್ತಿದ್ದಾರೆ.ಸಿಎಂ ಸಿದ್ದರಾಮಯ್ಯ ನೀರು ಬಿಡದ ತಿರ್ಮಾನ ತೆಗೆದು ಕೊಳ್ಳಬೇಕು ಎಂದು ವಾಟಾಳ್ ಕಿಡಿಕಾರಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ, ಡಿಸಿಎಂ, ರಾಹುಲ್ ಗಾಂಧಿ ಭೇಟಿ ಹಿಂದಿನ ಗುಟ್ಟು ಬಿಚ್ಚಿಟ್ಟ ವೇಣುಗೋಪಾಲ್‌

Kerala Rain: ಜೂ.15ರ ವರೆಗೆ ಭಾರೀ ಮಳೆಯ ಮುನ್ಸೂಚನೆ , ರಾಜ್ಯದಲ್ಲಿ ಹೇಗಿರಲಿದೆ ಹವಾಮಾನ

Meghalaya Murder Case: ಗಂಡನ ಜತೆಗಿನ ಬೆಡ್‌ ರೂಂ ಸಂಗತಿಯನ್ನು ಪ್ರಿಯಕರನಿಗೆ ಒಪ್ಪಿಸಿದ್ಳು ಸೋನಮ್

Bengaluru Stampede: ಆರ್‌ಸಿಬಿ ಮಾರ್ಕೆಂಟಿಗ್ ಮುಖ್ಯಸ್ಥ ನಿಖಿಲ್ ಸೋಸಲೆಗೆ ಕಾನೂನಿನಲ್ಲಿ ಹಿನ್ನಡೆ

Indore Raja Raguvamshi murder: ಅಬ್ಬಾ.. ಗಂಡನನ್ನು ಕೊಂದು ಸೋನಂ ಪ್ಲ್ಯಾನ್ ಏನಿತ್ತು ಗೊತ್ತಾ

ಮುಂದಿನ ಸುದ್ದಿ
Show comments