Webdunia - Bharat's app for daily news and videos

Install App

ಕನ್ನಡ ರಹಿತ ಬೋರ್ಡ್‌ಗಳಿಗೆ ಕಪ್ಪು ಮಸಿ

geetha
ಮಂಗಳವಾರ, 5 ಮಾರ್ಚ್ 2024 (20:10 IST)
Photo Courtesy: Twitter
ಚಿತ್ರದುರ್ಗ-ಚಿತ್ರದುರ್ಗದಲ್ಲಿ ಕರುನಾಡ ವಿಜಯ ಸೇನೆ ಕಾರ್ಯಕರ್ತರು ಇಂಗ್ಲಿಷ್‌ ಬೋರ್ಡ್‌ ಗಳನ್ನು ಕಿತ್ತೊಗೆದು ಮತ್ತು ಮಸಿ ಬಳಿದು ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಇಂದು ನಗರದ ಗಾಂಧಿ ಸರ್ಕಲ್‌ ನಲ್ಲಿ ಬೃಹತ್‌ ಪ್ರತಿಭಟನೆಯನ್ನೂ ಸಹ ಹಮ್ಮಿಕೊಳ್ಳಲಾಗಿತ್ತು. 
 
ವ್ಯಾಪಾರ ಮತ್ತು ವಾಣಿಜ್ಯ ಸ್ಥಳಗಳಲ್ಲಿ ಅಳವಡಿಸಿರುವ ಬೋರ್ಡ್‌ಗಳಲ್ಲಿ ಶೇ 60 ರಷ್ಟು ಕನ್ನಡ ಇರಬೇಕೆಂದು ಸರ್ಕಾರ ಆದೇಶಿಸಿದ್ದರೂ ಸೊಪ್ಪು ಹಾಕದವರಿಗೆ ಕನ್ನಡ ರಕ್ಷಣಾ ವೇದಿಕೆ ಹಾಗೂ ಇತರೆ ಕನ್ನಡಪರ ಸಂಘಟನೆಯ  ಕಾರ್ಯಕರ್ತರು ಬಿಸಿ ಮುಟ್ಟಿಸಿದ್ದಾರೆ.  ಮಂಗಳವಾರ ರಾಜ್ಯದ ಚಿತ್ರದುರ್ಗ, ಕಾರವಾರ, ಕೊಪ್ಪಳ, ದಾವಣಗೆರೆ ಮುಂತಾದೆಡೆ ಇಂಗ್ಲಿಷ್‌ ನಾಮಫಲಕಗಳಿಗೆ ಮಸಿ ಬಳಿಯುವ ಮೂಲಕ ಕನ್ನಡ ವಿರೋಧಿ ಮನಸ್ಥಿತಿಗೆ ಸೆಡ್ಡುಹೊಡೆಯಲಾಗಿದೆ. 

ಕಾರವಾರದಲ್ಲಿ ಕರವೇ ಕಾರ್ಯಕರ್ತರೂ ಸಹ ಜಿಲ್ಲಾಧ್ಯಕ್ಷ ಭಾಸ್ಕರ್‌ ಪಟಗಾರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು. ಕನ್ನಡ ನಾಮಫಲಕ ಅಳವಡಿಸಿಕೊಳ್ಳದವರಿಗೆ ಎಚ್ಚರಿಕೆ ನೀಡಲಾಯಿತು. ಕೊಪ್ಪಳದಲ್ಲಿ ಇಂಗ್ಲಿಷ್‌ ಬೋರ್ಡ್‌ ಗಳಿಗೆ ಮಸಿ ಬಳಿದು ಪ್ರತಿಭಟನೆ ನಡೆಸಿದ ಕರವೇ ಕಾರ್ಯಕರ್ತರು, ನಿಯಮ ಜಾರಿಗೊಳಿಸದ ಜಿಲ್ಲಾಡಳಿತದ ವಿರುದ್ದವೂ ಕಿಡಿಕಾರಿದರು.
 
ದಾವಣಗೆರೆಯಲ್ಲಿ ಮಹಾನಗರ ಪಾಲಿಕೆ ಕಚೇರಿಗೆ ಮುತ್ತಿಗೆ ಹಾಕಿದ ಕರವೇ ಕಾರ್ಯಕರ್ತರು  ಕನ್ನಡೇತರ ಬೋರ್ಡ್‌ ಗಳ ವಿರುದ್ದ ಕ್ರಮ ಜರುಗಿಸುವಂತೆ ಅಧಿಕಾರಿಗಳನ್ನು ಒತ್ತಾಯಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ದಾಖಲೆ ಬರೆದ ಪರಿಶುದ್ಧ ಚಿನ್ನದ ಬೆಲೆ

ಎಲ್ಲದಕ್ಕೂ ಕೇಂದ್ರದ ಮೇಲೆ ಗೂಬೆ ಕೂರಿಸುವುದೇ ಕಾಂಗ್ರೆಸ್ ಕೆಲಸ: ಬಿವೈ ವಿಜಯೇಂದ್ರ

ಇಸ್ರೇಲ್, ಇರಾನ್ ಯುದ್ಧ ಆದ್ರೆ ಟೆನ್ಷನ್ ಪಾಕಿಸ್ತಾನಕ್ಕೆ: ಯಾಕೆ ಗೊತ್ತಾ

ಅಹಮದಾಬಾದ್ ವಿಮಾನ ಪತನ: ಸಾವಿನ ಸಂಖ್ಯೆ 274 ಕ್ಕೆ ಏರಿಕೆ

ವಿಮಾನದಲ್ಲಿ ಯಾವಾಗಲೂ ಎಲ್ಲಿ ಕೂತರೆ ಸೇಫ್ ಇಲ್ಲಿದೆ ನೋಡಿ ವಿವರ

ಮುಂದಿನ ಸುದ್ದಿ
Show comments