Select Your Language

Notifications

webdunia
webdunia
webdunia
webdunia

ಹಾಸ್ಯನಟನಿಗೆ ಯುವತಿ ಹೆಸರಿನಲ್ಲಿ ಬ್ಲಾಕ್ ಮೇಲ್ ಮಾಡಿ ಹಣ ಸುಲಿಗೆ; ಇಬ್ಬರು ಬೆಂಗಳೂರು ಹುಡುಗರು ಅರೆಸ್ಟ್

ಹಾಸ್ಯನಟನಿಗೆ ಯುವತಿ ಹೆಸರಿನಲ್ಲಿ ಬ್ಲಾಕ್ ಮೇಲ್ ಮಾಡಿ ಹಣ ಸುಲಿಗೆ; ಇಬ್ಬರು ಬೆಂಗಳೂರು ಹುಡುಗರು ಅರೆಸ್ಟ್
ಮಂಗಳೂರು , ಶುಕ್ರವಾರ, 5 ಅಕ್ಟೋಬರ್ 2018 (06:54 IST)
ಮಂಗಳೂರು : ತುಳು ಚಲನಚಿತ್ರ ರಂಗದ ಹಾಸ್ಯನಟರೊಬ್ಬರಿಗೆ ಬೆಂಗಳೂರಿನ ಇಬ್ಬರು ಹುಡುಗರು ಯುವತಿ ಹೆಸರಿನಲ್ಲಿ ಬ್ಲಾಕ್ ಮೇಲ್ ಮಾಡಿ ಹಣ ಸುಲಿಗೆ ಮಾಡಿದ ಪ್ರಕರಣ ಬೆಳಕಿಗೆ ಬಂದಿದೆ.

ಆರೋಪಿಗಳು ಬೆಂಗಳೂರಿನ ಯಶವಂತಪುರ ನಿವಾಸಿ ಆದಿತ್ಯ ಮತ್ತು ರಾಮನಗರ ಜಿಲ್ಲೆಯ ಕನಕಪುರ ನಿವಾಸಿ ಅರುಣ್ ಎಚ್.ಎಸ್‍ ಎಂಬುದಾಗಿ ತಿಳಿದುಬಂದಿದೆ. ಇವರಲ್ಲಿ ಆದಿತ್ಯ ಎಂಬಾತ  ಮಂಗಳೂರಿನ 25 ವರ್ಷದ ಹಾಸ್ಯನಟನಿಗೆ ಫೇಸ್ ಬುಕ್ ನಲ್ಲಿ ಆರಾಧ್ಯ ಎಂಬ ಯುವತಿಯ ಹೆಸರು ಇಟ್ಟುಕೊಂಡು ವಂಚಿಸಿದ್ದಾನೆ.

 

ಸಲುಗೆಯ ಮಾತನಾಡಿದ ಯುವತಿ ಆದಿತ್ಯ  ಅಲಿಯಾಸ್ ಆರಾಧ್ಯಗೆ ಚಿತ್ರನಟ, ತನ್ನ ಅರೆನಗ್ನ ಫೋಟೋವನ್ನು ಕಳುಹಿಸಿದ್ದಾನೆ. ಈ ಫೋಟೋ ಪಡೆದ ಯುವಕ ಆರಾಧ್ಯ, ಚಿತ್ರನಟನನ್ನು ಬ್ಲಾಕ್ ಮೇಲ್ ಮಾಡಿದ್ದು ಬಳಿಕ ಪೊಲೀಸರಿಗೆ ದೂರು ನೀಡುವುದಾಗಿ ಹೇಳಿ ಬೆಂಗಳೂರಿಗೆ ಕರೆಸಿಕೊಂಡು 65 ಸಾವಿರ ರೂ. ವಸೂಲಿ ಮಾಡಿದ್ದಾನೆ.

 

ಆ ನಂತರ ಇನ್ನಷ್ಟು ಹಣಕ್ಕಾಗಿ ಬೇಡಿಕೆ ಇಟ್ಟಾಗ ನಟ ಮಂಗಳೂರಿನ ಪೊಲೀಸ್ ಠಾಣಿಯಲ್ಲಿ ದೂರು ದಾಖಲಿಸಿದ್ದಾರೆ. ತನಿಖಾ ಹಂತದಲ್ಲಿ ಕಮಿಷನರ್ ಹೆಸರಲ್ಲಿ ಮತ್ತು ಗೃಹಮಂತ್ರಿ ಪಿಎ ಹೆಸರಿನಲ್ಲೂ ಫೋನ್ ಕರೆ ಮಾಡಿ ಆರೋಪಿಗಳು ವ್ಯಕ್ತಿಯನ್ನು ಬೆದರಿಸಿದ್ದಾರೆ.

 

ಕಾರ್ಯಾಚರಣೆ ನಡೆಸಿದ ಮಂಗಳೂರಿನ ಪೊಲೀಸರು ಈ ಇಬ್ಬರು ಆರೋಪಿಗಳನ್ನು ಬೆಂಗಳೂರಿನಲ್ಲಿ  ಬಂಧಿಸಿದ್ದಾರೆ. ಆರೋಪಿಗಳ ಪೈಕಿ ಆದಿತ್ಯ 19ರ ಹರೆಯದ ಪಿಯುಸಿ ವಿದ್ಯಾರ್ಥಿ ಆಗಿದ್ದು ಹುಡುಗಿಯ ವೇಷದಲ್ಲಿ  ಹಲವರನ್ನು ಬ್ಲಾಕ್ ಮೇಲ್ ಮಾಡಿರುವ ವಿಚಾರ ಬೆಳಕಿಗೆ ಬಂದಿದೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

 


Share this Story:

Follow Webdunia kannada

ಮುಂದಿನ ಸುದ್ದಿ

ಮೆಟ್ರೋ: ಮೇಲ್ಸೇತುವೆಗೆ ಸಿಎಂ ಚಾಲನೆ