ರಾಮಮಂದಿರ ನಿರ್ಮಾಣಕ್ಕೆ ನೀಲ ನಕ್ಷೆ ಸಿದ್ಧ

Webdunia
ಬುಧವಾರ, 29 ಮಾರ್ಚ್ 2023 (08:39 IST)
ರಾಮನಗರ : ರಾಜ್ಯ ವಿಧಾನಸಭಾ ಚುನಾವಣೆಯ ನೀತಿಸಂಹಿತೆ ಘೋಷಣೆಗೆ ಕೆಲವೇ ದಿನಗಳು ಬಾಕಿ ಇದೆ. ಇದರ ನಡುವೆಯೇ ಜೆಡಿಎಸ್ ಭದ್ರಕೋಟೆಯಲ್ಲಿ ಕಮಲ ಅರಳಿಸಲು ಬಿಜೆಪಿ ಅಂತಿಮ ಕಸರತ್ತು ನಡೆಸಿದೆ.
 
ರಾಮಜಪ ಮಾಡುವ ಮೂಲಕ ಹಿಂದೂಮತಗಳ ಕ್ರೋಢೀಕರಿಸಲು ತಂತ್ರ ರೂಪಿಸಿರೋ ಬಿಜೆಪಿ ಶೀಘ್ರದಲ್ಲೇ ರಾಮಮಂದಿರ ನಿರ್ಮಾಣಕ್ಕೆ ಶಂಕುಸ್ಥಾಪನೆ ಮಾಡಲು ಮುಂದಾಗಿದೆ. ರಾಮದೇವರ ಬೆಟ್ಟ ಅಭಿವೃದ್ಧಿ ಸಂಬಂಧ ನೀಲ ನಕ್ಷೆ ಸಿದ್ದಪಡಿಸಿ 40 ಲಕ್ಷ ಅನುದಾನ ಘೋಷಣೆ ಮಾಡಿದೆ.

2023ರ ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದೆ. ಇನ್ನೆರಡು-ಮೂರು ದಿನಗಳಲ್ಲಿ ನೀತಿಸಂಹಿತೆ ಜಾರಿಯಾಗಲಿದ್ದು, ಇದಕ್ಕೂ ಮುನ್ನವೇ ರಾಮಮಂದಿರದ ಶಂಕುಸ್ಥಾಪನೆ ಮಾಡಲು ಬಿಜೆಪಿ ಸಿದ್ಧತೆ ನಡೆಸಿದೆ. ರಾಮನಗರದಲ್ಲಿ ರಾಮಮಂದಿರ ನಿರ್ಮಾಣ ಮಾಡಿ ದಕ್ಷಿಣ ಅಯೋಧ್ಯೆಯನ್ನಾಗಿ ರಾಮದೇವರ ಬೆಟ್ಟ ಅಭಿವೃದ್ಧಿಗೊಳಿಸುವುದಾಗಿ ಬಿಜೆಪಿ ಸರ್ಕಾರ ಬಜೆಟ್ನಲ್ಲಿ ಘೋಷಣೆ ಮಾಡಿತ್ತು.

ನಿನ್ನೆಯಷ್ಟೇ ರಾಮನಗರಕ್ಕೆ ಆಗಮಿಸಿದ ಸಿಎಂ ಬೊಮ್ಮಾಯಿ ರಾಮನ ಇತಿಹಾಸ ಮತ್ತು ಖ್ಯಾತಿಯನ್ನ ಮರುಸೃಷ್ಠಿ ಮಾಡುತ್ತೇವೆ. ರಾಮಮಂದಿರ ನಿರ್ಮಾಣಕ್ಕೆ ನಮ್ಮ ಸರ್ಕಾರ ಬದ್ಧ ಎಂದು ಹೇಳಿಕೆ ನೀಡಿದ್ದರು. ಇದರ ಬೆನ್ನಲ್ಲೇ ಇಂದು ದೇವಾಲಯ ಅಭಿವೃದ್ಧಿ ಸಂಬಂಧ ಬ್ಲೂ ಪ್ರಿಂಟ್ ಸಿದ್ಧಪಡಿಸಿರೋ ಸರ್ಕಾರ 40 ಲಕ್ಷ ಅನುದಾನ ಬಿಡುಗಡೆ ಮಾಡಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜವಂಶಸ್ಥ, ಸಂಸದ ಯದುವೀರ್ ಅವರ ಅಜ್ಜ ಮದನ್ ಗೋಪಾಲ್ ಇನ್ನಿಲ್ಲ

ಸಿಎಂ ಕುರ್ಚಿ ರೇಸ್‌ನಲ್ಲಿ ನೀವಿದ್ದೀರಾ ಎಂದಿದ್ದಕ್ಕೆ ಪರಮೇಶ್ವರ್ ಪ್ರತಿಕ್ರಿಯೆ ಹೀಗಿತ್ತು

ಇಟಲಿ ಟೆಂಪಲ್ ಸುತ್ತಿ ಕಪ್ಪ ಒಪ್ಪಿಸಿದರೆ ಡಿಕೆ ಶಿವಕುಮಾರ್ ಸಿಎಂ: ಆರ್ ಅಶೋಕ

ಲೋಕಾನುಭವವಿರುವ ಸಿದ್ದರಾಮಯ್ಯರಿಗೆ ಇದು ತಿಳಿದಿಲ್ವ: ತೇಜಸ್ವಿ ಸೂರ್ಯ ಪ್ರಶ್ನೆ

ಕರ್ನಾಟಕದ ಜನತೆಗೆ ಗುಡ್‌ನ್ಯೂಸ್‌, ಬೆಂಗಳೂರು ಮುಂಬೈ ಸೂಪರ್ ಫಾಸ್ಟ್ ರೈಲಿಗೆ ಗ್ರೀನ್ ಸಿಗ್ನಲ್

ಮುಂದಿನ ಸುದ್ದಿ
Show comments