ಬಿಎಂಟಿಸಿ ಚಾಲಕ ಅನುಮಾನಾಸ್ಪದ ಸಾವು

Webdunia
ಮಂಗಳವಾರ, 7 ಫೆಬ್ರವರಿ 2023 (18:36 IST)
ಲಾಡ್ಜ್ ನಲ್ಲಿ ಬಿಎಂಟಿಸಿ ಚಾಲಕನ ಅನುಮಾನಾಸ್ಪದ ಸಾವು ಪ್ರಕರಣ ಕೊಲೆಯೋ ಆತ್ಮಹತ್ಯೆಯೋ ಎಂಬ ಅನುಮಾನಕ್ಕೆ ತೆರೆ ಬಿದ್ದಿದ್ದು, ವಿವಾಹಿತಳ ಹಿಂದೆ ಬಿದ್ದ ಚಾಲಕ ಪುಟ್ಟೇಗೌಡ ಆಕೆ ನಿರಾಕರಿಸಿದಾಗ ಬೇಸತ್ತು ಆತ್ಮಹತ್ಯೆಗೆ ಶರಣಾಗಿರುವುದು ಕೆಂಗೇರಿ ಠಾಣಾ ಪೊಲೀಸರ ತನಿಖೆಯಲ್ಲಿ ಬಯಲಾಗಿದೆ.
 
ಚೆನ್ನಪಟ್ಟಣ ಮೂಲದ ಪುಟ್ಟೇಗೌಡನಿಗೆ ಕೇವಲ ಆರು ತಿಂಗಳ ಹಿಂದೆಯಷ್ಟೇ ವಿವಾಹಿತ ಮಹಿಳೆಯೊಬ್ಬಳ ಪರಿಚಯವಾಗಿತ್ತು. ತಮ್ಮ ಊರಿನ ಪಕ್ಕದ ಊರಿನವಳೇ ಆಗಿದ್ದ ಮಹಿಳೆಯೊಂದಿಗೆ ಸ್ನೇಹ ಬಳಿಕ ಸಂಬಂಧಕ್ಕೆ ತಿರುಗಿತ್ತು. ಇತ್ತೀಚೆಗೆ ಆಕೆಯನ್ನ ತನ್ನ ಜೊತೆಯಲ್ಲೇ ಇರುವಂತೆ ಪುಟ್ಟೇಗೌಡ ಒತ್ತಾಯಿಸುತ್ತಿದ್ದ.'ಇಬ್ಬರು ಮಕ್ಕಳಿರುವ ತಾನು ನಿನ್ನ ಜೊತೆಯಲ್ಲಿದ್ದು ಮುಂದುವರೆಯಲು ಸಾಧ್ಯವಿಲ್ಲ' ಎಂದು ಪುಟ್ಟೇಗೌಡನಿಗೆ ಆ ಮಹಿಳೆ ಹೇಳಿದ್ದಳು.
 
ಜನವರಿ 30 ರಂದು ಕೆಲಸಕ್ಕೆಂದು ಬಂದಿದ್ದ ಪುಟ್ಟೇಗೌಡ ನೇರವಾಗಿ ಲಾಡ್ಜ್ ಗೆ ಬಂದು ಅದೇ ಮಹಿಳೆಯನ್ನ ಕರೆಸಿಕೊಂಡು ಲೈಂಗಿಕ ಸಂಪರ್ಕ ಹೊಂದಿದ್ದ. ಒಂದು ಗಂಟೆಗಳ ಕಾಲ ಜೊತೆಯಲ್ಲೇ ಕಳೆದ ಬಳಿಕ ಮತ್ತೆ ಜೊತೆಯಲ್ಲೇ ಇರುವಂತೆ ಆಕೆಯೊಂದಿಗೆ ಕ್ಯಾತೆ ತೆಗೆದಿದ್ದ. ಇತ್ತ ಆಕೆ ನಿದ್ರೆಗೆ ಜಾರಿದಾಗ ಬಾತ್ ರೂಮಿಗೆ ತೆರಳಿ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದ. ಎಚ್ಚರವಾದ ಬಳಿಕ ಗಮನಿಸಿದ ಮಹಿಳೆ ಭಯದಿಂದ ಹೆದರಿ ರೂಮ್ ಲಾಕ್ ಮಾಡಿಕೊಂಡು ತೆರಳಿದ್ದಳು. ಲಾಡ್ಜ್ ಸಿಸಿಟಿವಿ ದೃಶ್ಯಗಳನ್ನ ಆಧರಿಸಿ ಆ ಮಹಿಳೆಯನ್ನ ಪತ್ತೆಹಚ್ಚಿದ ಪೊಲೀಸರು ಆಕೆಯ ಹೇಳಿಕೆ ದಾಖಲಿಸಿದ್ದಾರೆ. ಇತ್ತ ಮರಣೋತ್ತರ ಪರೀಕ್ಷಾ ವರದಿಯಲ್ಲಿ ಪುಟ್ಟೇಗೌಡ ಆತ್ಮಹತ್ಯೆಗೆ ಶರಣಾಗಿರುವುದು ಬಯಲಾಗಿದೆ ಎಂದು ಕೆಂಗೇರಿ ಪೊಲೀಸರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಂಗ್ರೆಸ್ ಉತ್ತರಾಧಿಕಾರಿ ಚರ್ಚೆ ಆಮೇಲೆ ಇಟ್ಕೊಳ್ಳಿ, ಮೊದಲು ಅಭಿವೃದ್ಧಿ ಮಾಡಿ: ಎನ್ ರವಿಕುಮಾರ್

ಕೊನೆಗೂ ಯತೀಂದ್ರ ಸಿದ್ದರಾಮಯ್ಯಗೆ ಗುಮ್ಮಿದ ಡಿಕೆ ಶಿವಕುಮಾರ್ ಹೇಳಿದ್ದೇನು

ಪ್ರದೀಪ್ ಈಶ್ವರ್ ಎಚ್ಚರಿಕೆಯಿಂದ ಇರು ಮಗನೇ..: ಪ್ರತಾಪ್ ಸಿಂಹ ವಾರ್ನಿಂಗ್

ಆರ್ ಎಸ್ಎಸ್ ಚಡ್ಡಿ ಲೇವಡಿ ಮಾಡಿದ್ದ ಕಾಂಗ್ರೆಸ್: ಜವಹರಲಾಲ್ ನೆಹರೂ ಫೋಟೋ ರಿಲೀಸ್ ಮಾಡಿದ ಬಿಜೆಪಿ

ಕರ್ನೂಲ್ ಬಸ್ ದುರಂತದಲ್ಲಿ ಸಾವನ್ನಪ್ಪಿದವರಿಗೆ ಪರಿಹಾರ ಘೋಷಿಸಿದ ಮೋದಿ: ಸಂತಾಪ ಸೂಚಿಸಿದ ಸಿದ್ದರಾಮಯ್ಯ

ಮುಂದಿನ ಸುದ್ದಿ