Select Your Language

Notifications

webdunia
webdunia
webdunia
webdunia

ನಿಗಮ, ಮಂಡಳಿ ನೇಮಕಾತಿ ಲಾಬಿ: ರಾಹುಲ್ ಗಾಂಧಿ ಭೇಟಿಗೆ ದೇಶಪಾಂಡೆ ಸಿದ್ದತೆ

ನಿಗಮ, ಮಂಡಳಿ ನೇಮಕಾತಿ ಲಾಬಿ: ರಾಹುಲ್ ಗಾಂಧಿ ಭೇಟಿಗೆ ದೇಶಪಾಂಡೆ ಸಿದ್ದತೆ
ನವದೆಹಲಿ , ಮಂಗಳವಾರ, 25 ಅಕ್ಟೋಬರ್ 2016 (17:57 IST)
ನಿಗಮ ಮಂಡಳಿ ನೇಮಕಾತಿಯಲ್ಲಿ ತಮ್ಮ ಬೆಂಬಲಿಗರಿಗೆ ಸೂಕ್ತ ಸ್ಥಾನಮಾನ ಸಿಗುತ್ತಿಲ್ಲ ಎಂದು ಸಚಿವ ಆರ್‌.ವಿ.ದೇಶಪಾಂಡೆ ಅವರು ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ದಿಗ್ವಿಜಯ್ ಸಿಂಗ್ ಅವರನ್ನು ಭೇಟಿಯಾಗಿ ಚರ್ಚಿಸಿದರು. 
 
ನಿಗಮ ಮಂಡಳಿಗಳ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ನೇಮಕಾತಿಗೆ ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಿದ್ದು, ನಿಗಮ ಮಂಡಳಿಯಲ್ಲಿ ತಮ್ಮ ಬೆಂಬಲಿಗರಿಗೆ ಸೂಕ್ತ ಸ್ಥಾನಮಾನ ನೀಡುವಂತೆ ಕೋರಿ ಸಚಿವ ಆರ್‌.ವಿ.ದೇಶಪಾಂಡೆ ಅವರು ಇಂದು ನವದೆಹಲಿಯಲ್ಲಿ ದಿಗ್ವಿಜಯ್ ಸಿಂಗ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.
 
ಈ ಕುರಿತು ಮಾತನಾಡಲು ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರ ಭೇಟಿಗೂ ಸಚಿವರು ಸಮಯ ಕೇಳಿದ್ದಾರೆ ಎಂದು ಹೇಳಲಾಗುತ್ತಿದೆ. 
 
ನಿಗಮ ಮಂಡಳಿಗೆ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರ ನೇಮಕಾತಿ ಪಟ್ಟಿಯಲ್ಲಿ ಹಾಲಿ ಶಾಸಕರ ಹೆಸರನ್ನು ಸೇರಿಸಿದ್ದು, 20 ಜನ ಶಾಸಕರಿಗೆ ಸ್ಥಾನ ನೀಡುವುದು ಖಚಿತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಹಿತಿ ನೀಡಿದ್ದರು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಉರಿ ದಾಳಿಗೆ ನಾವೇ ಹೊಣೆ: ಪಾಕಿಸ್ತಾನದಲ್ಲಿ ಪೋಸ್ಟರ್ ಲಗತ್ತಿಸಿದ ಲಷ್ಕರ್ ಸಂಘಟನೆ