Webdunia - Bharat's app for daily news and videos

Install App

ಕನ್ನಡಿಗರ ಕಾವೇರಿ ಹೋರಾಟಕ್ಕೆ ಬಾಲಿವುಡ್ ನಟಿ ನಗ್ಮಾ ಬೆಂಬಲ

Webdunia
ಮಂಗಳವಾರ, 6 ಸೆಪ್ಟಂಬರ್ 2016 (15:56 IST)
ಕಾವೇರಿ ವಿವಾದ ಇಂದು ನಿನ್ನೆಯದಲ್ಲ. ದಶಕಗಳಿಂದಲೂ ನೆನೆಗುದಿಗೆ ಬಿದ್ದಿದೆ. ಕನ್ನಡಿಗರ ಕಾವೇರಿ ಹೋರಾಟಕ್ಕೆ ಸದಾ ನನ್ನ ಬೆಂಬಲವಿದೆ ಎಂದು ಬಾಲಿವುಡ್ ನಟಿ ನಗ್ಮಾ ಹೇಳಿದ್ದಾರೆ.
ಚೆನ್ನೈ ನಗರದಲ್ಲಿ ಮಳೆಯಿಂದಾಗಿ ಕಂಗಾಲಾಗಿದ್ದಾಗ ಕನ್ನಡಿಗರು ಸಹಾಯ ಮಾಡಿದ್ದಾರೆ. ಕನ್ನಡಿಗರ ಸಹಾಯವನ್ನು ತಮಿಳುನಾಡಿನ ಜನತೆ ಮತ್ತು ತಮಿಳುನಾಡು ಸರಕಾರ ಯಾವತ್ತೂ ಮರೆಯಬಾರದು ಎಂದು ಮನವಿ ಮಾಡಿದ್ದಾರೆ.
 
ಕನ್ನಡ ನಾಡು ನುಡಿಗಾಗಿ ನಡೆಯುವ ಪ್ರತಿಭಟನೆಗಳಿಗೆ ಯಾವತ್ತೂ ನನ್ನ ಬೆಂಬಲವಿದೆ. ಉಭಯ ರಾಜ್ಯಗಳ ಸರಕಾರಗಳು ಜನತೆಯ ಏಳಿಗೆಯನ್ನು ಗಮನದಲ್ಲಿಟ್ಟುಕೊಂಡು ನಿರ್ಧಾರ ತೆಗೆದುಕೊಳ್ಳುವುದು ಸೂಕ್ತ ಎಂದು ಸಲಹೆ ನೀಡಿದ್ದಾರೆ.
 
ಮುಂಬರುವ ದಿನಗಳಲ್ಲಿ ಅಗತ್ಯವಾದಲ್ಲಿ ನಾನು ನಿಮ್ಮೊಂದಿಗೆ ಹೋರಾಟಕ್ಕಿಳಿಯುತ್ತೇನೆ ಎಂದು ಬಾಲಿವುಡ್ ನಟಿ ನಗ್ಮಾ ಹೇಳಿಕೆ ನೀಡಿರುವುದು ಕಾವೇರಿ ಹೋರಾಟಗಾರರಿಗೆ ಮತ್ತಷ್ಟು ನೈತಿಕ ಬೆಂಬಲ ದೊರೆತಂತಾಗಿದೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments