ರಾಜ್ಯಕ್ಕೆ ಬರಬೇಕಾದರ 5500 ಕೋಟಿ ಬಿಡುಗಡೆಗೆ ಮನವಿ: ಬೊಮ್ಮಾಯಿ

Webdunia
ಭಾನುವಾರ, 4 ಜುಲೈ 2021 (14:38 IST)
15ನೇ ಹಣಕಾಸಿನ ಶಿಫಾರಸ್ಸಿನ ಪ್ರಕಾರ ರಾಜ್ಯಕ್ಕೆ ಬರಬೇಕಾದ 5500 ಕೋಟಿ ರೂ. ಬಿಡುಗಡೆ ಮಾಡುವಂತೆ ಕೇಂದ್ರ ಸರಕಾರಕ್ಕೆ ಮನವಿ ಮಾಡಲಾಗುವುದು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ರಾಜ್ಯಕ್ಕೆ ಬರಬೇಕಾದ 5500 ಕೋಟಿ ರೂ.ವನ್ನು ಕೇಂದ್ರ ಹಣಕಾಸು ಸಚಿವರು ತಡೆ ಹಿಡಿದಿದ್ದಾರೆ ಎಂಬ ಸಿದ್ದರಾಮಯ್ಯ ಆರೋಪಕ್ಕೆ ಬೆಂಗಳೂರಿನಲ್ಲಿ ಭಾನುವಾರ ಪ್ರತಿಕ್ರಿಯೆ ನೀಡಿದ ಅವರು, 15 ನೇ ಹಣಕಾಸಿನ ಶಿಫಾರಸ್ಸಿನ ಪ್ರಕಾರ ರಾಜ್ಯಕ್ಕೆ ಹಣ ಬರಬೇಕು ನಿಜ. ಈ ಬಗ್ಗೆ ಕೇಂದ್ರಕ್ಕೆ ಸಿಎಂ ಪತ್ರ ಬರೆದು ಒತ್ತಾಯ ಮಾಡಿದ್ದಾರೆ. ಮುಂದಿನ ದಿನಗಳಲ್ಲಿ ದೆಹಲಿಗೆ ಹೋಗಿ ರಾಜ್ಯದ ಹಕ್ಕನ್ನ ಪಡೆಯುವ ಕೆಲಸ ಮಾಡುತ್ತೇವೆ ಎಂದರು.
ಪೆಟ್ರೋಲ್, ಡಿಸೇಲ್ ಮೇಲಿನ ಸೆಸ್ ರಾಜ್ಯವೇ ಕಡಿತಗೊಳಿಸಲಿ ಎಂಬ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಸೆಸ್ ಎರಡು ಕಡೆ ಇದೆ. ಇದು ಇಡೀ ದೇಶದ ವಿಚಾರ, ಒಕ್ಕೂಟ ವ್ಯವಸ್ಥೆಯಲ್ಲಿ ಎರಡು ಕಡೆ ಕೂತು ಚರ್ಚೆ ಮಾಡಿ ತೀರ್ಮಾನ ಮಾಡಬೇಕಾಗತ್ತೆ. ಸಾಮಾನ್ಯ ಜನರ ಮೇಲಿನ ಹೊರೆ ಕಡಿಮೆ ಮಾಡುವುದಕ್ಕೆ ಎಲ್ಲರೂ ಒಗ್ಗಟ್ಟಿನಿಂದ ತೀರ್ಮಾನ ಮಾಡುವುದು ಒಳ್ಳೆಯದು ಎಂದು ಅವರು ಅಭಿಪ್ರಾಯಪಟ್ಟರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎನ್‌ಡಿಎ ಸರ್ಕಾರದ ಮಹತ್ವಾಕಾಂಕ್ಷೆಯ ಮಹಿಳಾ ಮೀಸಲಾತಿ ತಿದ್ದುಪಡಿ ಮಸೂದೆಗೆ ಸೋಲು

ಅಂಬಾನಿಯನ್ನು ಹಿಂದಿಕ್ಕಿ ಮತ್ತೇ ಶ್ರೀಮಂತ ವ್ಯಕ್ತಿಯಾದ ಅದಾನಿ

ವಿಶ್ವದ ಮೊದಲ ಏರ್‌ ಟ್ಯಾಕ್ಸಿ ನಿಲ್ದಾಣ ದುಬೈನಲ್ಲಿ

ಮುಸ್ಲಿಂರಿಗೆ ಕಾಂಗ್ರೆಸ್ ಸಹಾಯ ಮಾಡಿದ್ದಷ್ಟು ಬೇರೆ ಯಾರೂ ಮಾಡಿಲ್ಲ: ಡಿಕೆಶಿ

ಕಾನೂನಿನಲ್ಲಿ ಇನ್ನೂ ಅವಕಾಶವಿದೆ, ವಿನಯ್ ಕುಲಕರ್ಣಿ ಯಾವುದೇ ತಪ್ಪು ಮಾಡಿಲ್ಲ: ಡಿಕೆ ಶಿವಕುಮಾರ್‌ ವಿಶ್ವಾಸ

ಮುಂದಿನ ಸುದ್ದಿ
Show comments