ರಾಮೇಶ್ವರಂ ಕೆಫೆಯಲ್ಲಿ ನಡೆದ ಬಾಂಬ್‌ ಬ್ಲಾಸ್ಟ್‌ ಪ್ರಕರಣ ಸಿಲ್ಲಿ ಘಟನೆಯಲ್ಲ - ಸಿಎಂ

geetha
ಭಾನುವಾರ, 3 ಮಾರ್ಚ್ 2024 (14:22 IST)
ಚಿಕ್ಕಮಗಳೂರು :ಪ್ರಕರಣವನ್ನು ಎನ್‌ಐಎ ತನಿಖೆಗೆ ಒಪ್ಪಿಸಬೇಕೆಂದು ಬಿಜೆಪಿ ಒತ್ತಾಯಿಸುತ್ತಿರುವ ಕುರಿತು ಪ್ರತಿಕ್ರಿಯಿಸಿದ ಸಿಎಂ, ಈಗಾಗಲೇ ಪ್ರಕರಣವನ್ನು ಸಿಸಿಬಿ ತನಿಖೆಗೆ ನೀಡಲಾಗಿದೆ. ಎನ್‌ಐಎ ತನಿಖೆಗ ಒಳಪಡಿಸುವ ಅಗತ್ಯ ಇನ್ನೂ ಕಂಡುಬಂದಿಲ್ಲ. ಅಗತ್ಯ ಬಿದ್ದರೆ ಎನ್‌ಐಎ ತನಿಖೆಗೆ ನೀಡಲಾಗುವುದು ಎಂದರು. 
 
ರಾಮೇಶ್ವರಂ ಕೆಫೆಯಲ್ಲಿ ನಡೆದ ಬಾಂಬ್‌ ಬ್ಲಾಸ್ಟ್‌ ಪ್ರಕರಣ ಸಿಲ್ಲಿ ಘಟನೆಯಲ್ಲ ಇದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಸಚಿವ ಶರಣ ಪ್ರಕಾಶ್‌ ಪಾಟೀಲ್‌ ಇದೊಂದು ಸಿಲ್ಲಿ ಘಟನೆ ಎಂದು ಹೇಳಿಕೆ ನೀಡಿರುವ ಕುರಿತು ಚಿಕ್ಕಮಗಳೂರಿನಲ್ಲಿ ಭಾನುವಾರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಪ್ರಕರಣವನ್ನು ಎಲ್ಲ ಆಯಾಮಗಳಿಂದ ತನಿಖೆಗೊಳಪಡಿಸಲಾಗಿದೆ ಎಂದರು. 

ಬ್ರಾಂಡ್‌ ಬೆಂಗಳೂರು ಬಾಂಬ್‌ ಬೆಂಗಳೂರು ಆಗಿದೆ ಎಂಬ ಬಿಜೆಪಿಯವರ ಆರೋಪ ನಿರಾಧಾರವಾಗಿದೆ. ಬಿಜೆಪಿ ಅವಧಿಯಲ್ಲಿ ಬಾಂಬ್‌ ಸ್ಫೋಟ ನಡೆದಾಗ ಏನಾಗಿತ್ತು ಎಂದು ಪ್ರಶ್ನಿಸಿದ ಸಿಎಂ 2008 ರಿಂದ ನಾಲ್ಕು ಬಾರಿ ಬಾಂಬ್‌ ದಾಳಿ ನಡೆದಿದೆ. ಎನ್‌ಐಎ , ರಾ, ಐಡಿ ಎಲ್ಲಾ ಯಾರ ಅಧೀನದಲ್ಲಿದೆ. ನಾನು ಬಾಂಬ್‌ ಸ್ಫೋಟವನ್ನು ಸಮರ್ಥಿಸಿಕೊಳ್ಳುವುದಿಲ್ಲ. ಅದನ್ನು ಖಂಡಿಸುತ್ತೇನೆ. ಆದರೆ ಈ ವಿಷಯದಲ್ಲಿ ಬಿಜೆಪಿಯವರು ರಾಜಕೀಯ ಮಾಡಬಾರದು ಎಂದು ಟೀಕಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಸ್ಲಿಂ ಭವನಗಳಿಗೆ 67 ಕೋಟಿ, ಹಿಂದೂಗಳಿಗೆ ದುಡ್ಡಿಲ್ಲ: ಹಿಂದೂಗಳು ವೋಟ್ ಹಾಕಿಲ್ವಾ ಎಂದ ಅಶೋಕ್

ಕಾಂಗ್ರೆಸ್ ಅವಧಿಯಲ್ಲಿ ಹೆಚ್ಚು ಬಾರಿ ನಡೆದಿತ್ತು ಮತಪಟ್ಟಿ ಪರಿಷ್ಕರಣೆ: ಹಾಗಿದ್ದರೂ ಈಗ ವಿರೋಧ ಯಾಕೆ

ನಿತೀಶ್ ಕುಮಾರ್ ಪದೇ ಪದೇ ಮೋದಿ ಕಾಲಿಗೆ ಬೀಳೋದ್ಯಾಕೆ: ವಿಡಿಯೋ ನೋಡಿ ಕೆಲವರಿಗೆ ಉರಿ

ಬೆಂಗಳೂರು ದರೋಡೆ ಪ್ರಕರಣ: ಪೊಲೀಸರ ಕಣ್ತಪ್ಪಿಸಲು ಕಳ್ಳರ ಖತರ್ನಾಕ್ ಪ್ಲ್ಯಾನ್ ಬಹಿರಂಗ

ಬಾಹ್ಯಾಕಾಶದಿಂದ ಬರೋದು ಸುಲಭ: ಪ್ರಿಯಾಂಕ್ ಖರ್ಗೆ ಎದುರದಲ್ಲೇ ಬೆಂಗಳೂರು ರಸ್ತೆ ಕಿಚಾಯಸಿದ ಶುಭಾಂಶು ಶುಕ್ಲ

ಮುಂದಿನ ಸುದ್ದಿ
Show comments