Webdunia - Bharat's app for daily news and videos

Install App

ಬೆಂಗಳೂರಿನ ಪಂಚತಾರಾ ಹೊಟೇಲ್ ತಾಜ್ ವೆಸ್ಟ್ ಅಂಡ್‌ಗೆ ಬಾಂಬ್ ಬೆದರಿಕೆ: ತನಿಖೆ ತೀವ್ರ

Sampriya
ಶನಿವಾರ, 28 ಸೆಪ್ಟಂಬರ್ 2024 (14:03 IST)
Photo Courtesy X
ಬೆಂಗಳೂರು: ನಗರದ ಪ್ರಮುಖ ಹೋಟೆಲ್‌ ತಾಜ್ ವೆಸ್ಟ್ ಎಂಡ್‌ಗೆ ಇ ಮೇಲ್‌ ಮೂಲಕ ಇಂದು ಬಾಂಬ್‌ ಬೆದರಿಕೆ ಒಡ್ಡಲಾಗಿದೆ. ಅಪರಿಚಿತ ದುಷ್ಕರ್ಮಿಗಳು ಸಂದೇಶ ಕಳುಹಿಸಿದ್ದಾರೆ ಎಂದು ಎಎನ್‌ಐ ವರದಿ ಮಾಡಿದೆ.

ನಗರದ ಹಲವು ಖಾಸಗಿ ಶಾಲೆಗಳಿಗೆ ಈ ಹಿಂದೆ ಬಾಂಬ್ ಬೆದರಿಕೆ ಕರೆಗಳು ಬಂದಿದ್ದವು. ಇದೀಗ ನಗರದ ಪ್ರತಿಷ್ಠಿತ ತಾಜ್ ವೆಸ್ಟ್ ಎಂಡ್ ಹೊಟೇಲ್ ಗೆ ಬಾಂಬ್ ಬೆದರಿಕೆ ಇ-ಮೇಲ್ ಬಂದಿದೆ. ಹೊಟೇಲ್ ನಲ್ಲಿ ಬಾಂಬ್​ ಇಟ್ಟು ಸ್ಪೋಟಿಸುವುದಾಗಿ ಕಿಡಿಗೇಡಿಗಳು ಇ-ಮೇಲ್​ ಮಾಡಿದ್ದಾರೆ.

ಇದು ಗಮನಕ್ಕೆ ಬಂದ ಕೂಡಲೇ ಹೋಟೆಲ್​ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕೆ ಪೊಲೀಸರು, ಬಾಂಬ್ ಸ್ಕ್ವಾಡ್​​ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಂತರ ಅದೊಂದು ಹುಸಿ ಬಾಂಬ್​ ಬೆದರಿಕೆ ಎಂದು ದೃಢವಾಗಿದೆ. ಹೈಗ್ರೌಂಡ್ಸ್ ಪೊಲೀಸ್​ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ನಗರದ ಖ್ಯಾತ ಪಂಚತಾರಾ ಹೊಟೇಲ್ ಗಳಲ್ಲಿ ತಾಜ್​ ವೆಸ್ಟ್​ ಎಂಡ್​​ ಪ್ರಮುಖವಾಗಿದ್ದು, ಇಲ್ಲಿ ರಾಜಕಾರಣಿಗಳು, ಕ್ರಿಕೆಟರ್​ಗಳು, ಉದ್ಯಮಿಗಳು ಆಗಾಗ ವಾಸ್ತವ್ಯ ಹೂಡುತ್ತಾರೆ. ಘಟನೆ ಬಗ್ಗೆ ಮತ್ತಷ್ಟು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments