Webdunia - Bharat's app for daily news and videos

Install App

ವಿಧಾನಸೌಧಕ್ಕೆ ಬಾಂಬ್ ಬೆದರಿಕೆ ಕರೆ: ಮೂವರ ಬಂಧನ

Webdunia
ಸೋಮವಾರ, 11 ಸೆಪ್ಟಂಬರ್ 2017 (16:39 IST)
ವಿಧಾನಸೌಧದಲ್ಲಿ ಬಾಂಬ್ ಇಡುವುದಾಗಿ ಬಾಂಬ್ ಬೆದರಿಕೆ ಕರೆ ಬಂದಿದೆ. ಮಧ್ಯಾಹ್ನ 12.30ರ ಸುಮಾರಿಗೆ ವಿಧಾನಸೌಧ ಪೊಲಿಸ್ ಠಾಣೆಗೆ ಕರೆ ಮಾಡಿರುವ ವ್ಯಕ್ತಿ ಬಾಂಬ್ ಇಡುವುದಾಗಿ ಬೆದರಿಕೆ ಒಡ್ಡಿದ್ದಾನೆ. ಬಾಂಬ್ ಇಡುವುದಾಗಿ ಬೆದರಿಕೆ ಹಾಕಿದ ಸುರೇಶ್, ನಾಗರಾಜು, ಶ್ರೀಧರ್ ಎಂಬ ಮೂವರನ್ನ ಪೊಲಿಸರು ಬಂಧಿಸಿದ್ದಾರೆ.

ನಾಗರಾಜ್ ಎಂಬ ವ್ಯಕ್ತಿ ವಿಧಾನಸೌಧ ಪೊಲೀಸ್ ಠಾಣೆಗೆ ಕೆಡ ಮಾಡಿದ್ದು, ಸೆ.25ರೊಳಗೆ ಬಾಂಬ್ ಇಟ್ಟು, ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ್ದಾನೆ. ಹೀಗಾಗಿ, ವಿಧಾನಸೌಧಕ್ಕೆ ದೌಡಾಯಿಸಿರುವ ಶ್ವಾನ ದಳ, ಬಾಂಬ್ ನಿಷ್ಕ್ರೀಯ ದಳ ಪರಿಶೀಲನೆ ನಡೆಸುತ್ತಿದೆ. ಕಳೆದ ಒಂದೂವರೆ ಗಂಟೆಯಿಂದ ಪರಿಶೀಲನೆ ನಡೆಸುತ್ತಿದೆ. 3ನೇ ಮಹಡಿಯಲ್ಲಿ ಪರಿಶೀಲನೆ ಮುಗಿದಿದ್ದು, 2ನೇ ಮಹಡಿಯಲ್ಲಿ ಪರಿಶೀಲನೆ ನಡೆಸುತ್ತಿದೆ.

ಬಾಂಬ್ ನಿಷ್ಕ್ರೀಯ ದಳದ ಜೊತೆ ಗುಪ್ತಚರ, ಪೊಲೀಸರ ತಂಡಗಳೂ ಪರಿಶೀಲನೆಯಲ್ಲಿ ತೊಡಗಿವೆ. ಈ ಹಿಂದೆ ಹಲವು ಬಾರಿ ಈ ರೀತಿಯ ಹುಸಿ ಕರೆಗಳು ಬಂದಿದ್ದರೂ ಯಾವುದೇ ಕಾರಣಕ್ಕೂ ನಿರ್ಲಕ್ಷ್ಯ ಬೇಡವೆಂಬುದು ಒಂದೆಡೆಯಾದರೆ, ಉಗ್ರರ ದಾಳಿ ಸಂಚು ಬಗ್ಗೆ ಕೇಂದ್ರ ಸರ್ಕಾರ ಇತ್ತೀಚಿಗೆ ಸೂಚನೆ ಸಹ ನೀಡಿರುವುದು ಪ್ರಕರಣವನ್ನ ಗಂಭೀರವಾಗಿ ಪರಿಗಣಿಸಲಾಗುತ್ತಿದೆ. ಇದರ ಜೊತೆಗೆ ಫೋನ್ ಮಾಡಿದ ವ್ಯಕ್ತಿ ಬಗ್ಗೆ ಸಹ ಮಾಹಿತಿ ಕಲೆ ಹಾಕಲಾಗುತ್ತಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments