Webdunia - Bharat's app for daily news and videos

Install App

ಬೊಮ್ಮಾಯಿ ಅಪಾಯಿಂಟೆಡ್ ಸಿಎಂ : ಸಿದ್ದರಾಮಯ್ಯ

Webdunia
ಶುಕ್ರವಾರ, 6 ಮೇ 2022 (12:15 IST)
ಗದಗ : ಬಿಜೆಪಿ ಸರ್ಕಾರ, ಹಗರಣಗಳ ಸರ್ಕಾರ. ಸಿ.ಎಂ.ಬೊಮ್ಮಾಯಿ ಅವರು ಎಲೆಕ್ಟೆಡ್ ಸಿಎಂ ಅಲ್ಲ, ಅಪಾಯಿಂಟೆಡ್ ಸಿಎಂ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕುಟುಕಿದರು.

ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದಲ್ಲಿ ಮೆಡ್ಲೇರಿ ಸಿದ್ದೇಶ್ವರ ದೇವಸ್ಥಾನ ಉದ್ಘಾಟನೆಗೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಿಎಸ್ಐ ಹುದ್ದೆ ಅಕ್ರಮದ ಕುರಿತು ಸರ್ಕಾರದ ವಿರುದ್ಧ ಹರಿಹಾಯ್ದರು.

ಬೊಮ್ಮಾಯಿ ಅವರೇ ಪೊಲೀಸ್ ಆಫೀಸರ್ಗಳನ್ನು ಯಾಕೆ ಟ್ರಾನ್ಸ್ಫರ್ ಮಾಡಿದ್ರಿ? ಅಕ್ರಮ ನಡೆದಿದೆಯೋ ಇಲ್ವೊ? ಅಕ್ರಮ ನಡೆದಿಲ್ಲ ಅನ್ನೋದಾದ್ರೆ ಲಿಸ್ಟ್ ಯಾಕೆ ರದ್ದು ಮಾಡಿದ್ರಿ? ಮರುಪರೀಕ್ಷೆಗೆ ಯಾಕೆ ಆದೇಶ ಮಾಡಿದ್ರಿ? ಸರ್ಕಾರ ಮಂತ್ರಿಗಳನ್ನು ರಕ್ಷಣೆ ಮಾಡ್ತಿದೆ. ಪ್ರಕರಣ ಮುಚ್ಚಿಹಾಕುವ ಪ್ರಯತ್ನವೂ ಮಾಡ್ತಿದೆ ಎಂದು ಆರೋಪಿಸಿದರು. 

ಸಚಿವ ಅಶ್ವಥ್ ನಾರಾಯಣ ಹಾಗೂ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಬಿಜೆಪಿಯವರಿಗೆ ಮಾನಮರ್ಯಾದೆ ಯಾವುದೂ ಇಲ್ಲ. ಅಶ್ವಥ್ ನಾರಾಯಣ ಅವರ ಇಬ್ಬರು ಸಂಬಂಧಿಕರು ಆಯ್ಕೆಯಾಗಿದ್ದಾರೆ.

ಪ್ರಕರಣದಲ್ಲಿ ಭಾಗಿಯಾದವರು ಮುಟ್ಟಿ ನೋಡಿಕೊಳ್ಳುವ ಹಾಗೆ ಮಾಡುತ್ತೇವೆ ಎಂದಿದ್ದ ಗೃಹ ಸಚಿವರಿಗೆ ಮಾತಿಗೆ ತಿರುಗೇಟು ನೀಡಿದ ಸಿದ್ದರಾಮಯ್ಯ, ಹೋಮ್ ಮಿನಿಸ್ಟರ್ ಮೊದಲು ರಾಜೀನಾಮೆ ಕೊಡಪ್ಪ. ಆಮೇಲೆ ಮುಟ್ಟಿ ನೋಡಿಕೊಳ್ಳುವಂತೆ ಮಾಡುವೆಯಂತೆ ಎಂದು ಚಾಟಿ ಬೀಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನೂತನ ಸಭಾಧ್ಯಕ್ಷ ಜಿಎಸ್ ಪಾಟೀಲ್ ಗೆ ಬಿಜೆಪಿ ಅಭಿನಂದನೆ

ಕಾಂಗ್ರೆಸ್ ನವರಿಗೆ ಮಹಿಳೆಯರ ವೋಟ್ ಬೇಕು, ಸಚಿವ ಸ್ಥಾನ ಬೇಡ: ಶಶಿಕಲಾ ಜೊಲ್ಲೆ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಪೊಲೀಸ್ ಅಧಿಕಾರಿ ಮೇಲೆ ಶಾಸಕ ಸುರೇಶ್ ಗೌಡ ಪುತ್ರಿ ಹಲ್ಲೆ: ಮಗಳ ಪರವಾಗಿ ಕ್ಷಮೆ ಕೇಳಿದ ಶಾಸಕರು

ಮೋದಿ ಅಪ್ಪುಗೆ ವ್ಯಂಗ್ಯ ಮಾಡಿದ್ದ ರಾಹುಲ್ ಗಾಂಧಿಗೆ ಇಂದಿರಾ ಗಾಂಧಿ ವಿಡಿಯೋ ಹಾಕಿ ಟಾಂಗ್ ಕೊಟ್ಟ ಬಿಜೆಪಿ ಬೆಂಬಲಿಗರು Video

ಮುಂದಿನ ಸುದ್ದಿ
Show comments