Webdunia - Bharat's app for daily news and videos

Install App

ಬೊಮ್ಮಾಯಿ ಡೆಲ್ಲಿ ಟೂರ್ ರಹಸ್ಯ

Webdunia
ಬುಧವಾರ, 9 ಆಗಸ್ಟ್ 2023 (20:06 IST)
ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ತಿಂಗಳ ಹಿಂದೆ ದೆಹಲಿಗೆ ತೆರಳಿ ಹೈಕಮಾಂಡ್ ನಾಯಕರನ್ನು ಭೇಟಿಯಾಗಿ ಬಂದಿದ್ದರು. ಯಡಿಯೂರಪ್ಪ ದೆಹಲಿಯಿಂದ ಬರುವಾಗ ವಿಪಕ್ಷ ನಾಯಕನ ಹೆಸರನ್ನು ಫೈನಲ್ ಮಾಡಿಕೊಂಡೇ ಬರುತ್ತಾರೆ ಎಂದು ನಿರೀಕ್ಷಿಸಲಾಗಿತ್ತು. ಆದರೆ, ಯಡಿಯೂರಪ್ಪ ಖಾಲಿ ಕೈಯಲ್ಲಿ ವಾಪಸಾಗಿದ್ರು..ಇದೀಗ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ದೆಹಲಿ ಪ್ರವಾಸ ಕೈಗೊಂಡಿದ್ದು, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿರುವ ಬೊಮ್ಮಾಯಿ, ವಿಪಕ್ಷ ನಾಯಕನ ಆಯ್ಕೆ ಸಂಬಂಧ ಚರ್ಚೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

ವಿಪಕ್ಷ ನಾಯಕನ ಸ್ಥಾನ ನನಗೆ ಕೊಡಿ ಎಂದು ಕೇಳಲು ಬಂದಿಲ್ಲ. ಆದರೆ, ಶೀಘ್ರ ವಿಪಕ್ಷ ನಾಯಕನನ್ನು ಆಯ್ಕೆ ಮಾಡದಿದ್ದರೆ ನಕಾರಾತ್ಮಕ ಅಭಿಪ್ರಾಯ ಮೂಡುತ್ತದೆ ಎಂದು ಬೊಮ್ಮಾಯಿ ಅಮಿತ್ ಶಾ ಬಳಿ ಹೇಳಿದ್ದಾರೆ ಎಂದು ಹೇಳಲಾಗುತ್ತಿದೆ......ಯಾರನ್ನು ಬೇಕಾದರೂ ವಿಪಕ್ಷ ನಾಯಕ ಮಾಡಿ. ನಾವು ಕೆಲಸ ಮಾಡಿಕೊಂಡು ಹೋಗುತ್ತೇವೆ. ಒಬ್ಬರು ನಾಯಕರು ಅಂತ ಇದ್ದರೆ ಬೇರೆಯವರಿಗೂ ಹುರುಪು ಬರುತ್ತದೆ. ಲೋಕಸಭೆ ಚುನಾವಣೆ ಸಮೀಪಿಸುತ್ತಿರುವಾಗ ವಿಪಕ್ಷ ನಾಯಕನಿಲ್ಲದಿದ್ದರೆ ಪಕ್ಷದ ಬಗ್ಗೆ ಕೆಟ್ಟ ಅಭಿಪ್ರಾಯ ಮೂಡುತ್ತದೆ ಎಂದು ಬಸವರಾಜ ಬೊಮ್ಮಾಯಿ ಅಮಿತ್ ಶಾ ಬಳಿ ಹೇಳಿದ್ದಾರೆ ಎನ್ನಲಾಗಿದೆ.

ಇನ್ನು ಬೊಮ್ಮಾಯಿ ಭೇಟಿ ವೇಳೆ ಅಮಿತ್ ಶಾ ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳು ಯಾವ ರೀತಿ ಅನುಷ್ಠಾನ ಆಗುತ್ತಿದೆ. ಆರ್ಥಿಕ ಪರಿಸ್ಥಿತಿ ಹೇಗಿದೆ ಮತ್ತು ಗ್ಯಾರಂಟಿ ಯೋಜನೆಗಳಲ್ಲಿರುವ ಲೋಪಗಳ ಬಗ್ಗೆ ಮಾಹಿತಿ ಪಡೆದಿದ್ದಾರೆ ಎಂದು ತಿಳಿದು ಬಂದಿದೆ. ಅಲ್ಲದೆ, ಈಗ ಹೇಗೆ ಒಗ್ಗಟ್ಟಿನಿಂದ ಕಾರ್ಯ ನಿರ್ವಹಿಸುತ್ತಿದ್ದೀರೋ ಅದೇ ರೀತಿ ಮುಂದುವರಿಯಿರಿ. ಶೀಘ್ರದಲ್ಲಿ ಸಮಿತಿ ರಚಿಸಿ ವಿಪಕ್ಷ ನಾಯಕ ಮತ್ತು ರಾಜ್ಯಾಧ್ಯಕ್ಷರ ಆಯ್ಕೆ ಸಂಬಂಧ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಭರವಸೆ ಕೊಟ್ಟಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Tejasvi Surya: ಪಹಲ್ಗಾಮ್ ನಲ್ಲಿ ಬಲಿಯಾದ ಮಂಜುನಾಥ್ ಪುತ್ರನಿಗೆ ನೀಡಿದ್ದ ಭರವಸೆ ಈಡೇರಿಸಿದ ತೇಜಸ್ವಿ ಸೂರ್ಯ

Kerala Monsoon: ರೈತರಿಗೆ ಮುಂಗಾರಿನ ಸಿಹಿ ಸುದ್ದಿ, ಕೇರಳಕ್ಕೆ ಎಂಟ್ರಿ ಕೊಟ್ಟ ವರುಣ

KCET results live: ಜನಿವಾರ ತೆಗೆಸಿದ ವಿದ್ಯಾರ್ಥಿಯ ಫಲಿತಾಂಶ ಏನಾಗಿದೆ ಗೊತ್ತಾ

KCET Results live: ಕೆಸಿಇಟಿ ಪರೀಕ್ಷೆ ಫಲಿತಾಂಶ ಪ್ರಕಟ: ವಿವರ ಇಲ್ಲಿದೆ

Kodi Seer: ಕೊವಿಡ್ ಬಗ್ಗೆ ಅಪಾಯಕಾರಿಯಾಗುತ್ತಾ: ಕೋಡಿ ಶ್ರೀಗಳ ಸ್ಪೋಟಕ ಭವಿಷ್ಯ

ಮುಂದಿನ ಸುದ್ದಿ
Show comments