Webdunia - Bharat's app for daily news and videos

Install App

ಬೊಮ್ಮಾಯಿಗೆ ಕೇವಲ ಮೂರೂವರೆ ವರ್ಷ ಮಾತ್ರ ಅವಕಾಶ ಸಿಕ್ಕಿದೆ : ನರೇಂದ್ರ ಮೋದಿ

Webdunia
ಶನಿವಾರ, 6 ಮೇ 2023 (12:36 IST)
ಬಳ್ಳಾರಿ : ಬಿ.ಎಸ್.ಯಡಿಯೂರಪ್ಪ ಹಾಗೂ ಬಸವರಾಜ ಬೊಮ್ಮಾಯಿ ಅವರ ನಾಯಕತ್ವದಲ್ಲಿ ಡಬಲ್ ಎಂಜಿನ್ ಸರ್ಕಾರಕ್ಕೆ ಕೇವಲ ಮೂರೂವರೆ ವರ್ಷ ಆಡಳಿತ ಮಾಡುವ ಅವಕಾಶ ಸಿಕ್ಕಿದೆ. ಆದರೆ ಕಾಂಗ್ರೆಸ್ ಸರ್ಕಾರ ಇದ್ದಾಗ ಅಭಿವೃದ್ಧಿ ಬದಲಾಗಿ ಭ್ರಷ್ಟಾಚಾರಕ್ಕೆ ಆದ್ಯತೆ ನೀಡಿತ್ತು ಎಂದು ಕಾಂಗ್ರೆಸ್ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದರು.
 
ಕರ್ನಾಟಕ ಚುನಾವಣೆ ಹಿನ್ನಲೆಯಲ್ಲಿ ಬಳ್ಳಾರಿಯಲ್ಲಿ ಬಿಜೆಪಿ ಆಯೋಜಿಸಿದ್ದ ಬಹಿರಂಗ ಸಮಾವೇಶದಲ್ಲಿ ಪಾಲ್ಗೊಂಡು ಮೋದಿ ಮಾತನಾಡಿದರು. ಕಾಂಗ್ರೆಸ್ ಸರ್ಕಾರ ಇದ್ದಾಗ ಕರ್ನಾಟಕದ ಅಭಿವೃದ್ಧಿಗೆ ಆದ್ಯತೆ ನೀಡದೆ ಭ್ರಷ್ಟಾಚಾರಕ್ಕೆ ಪ್ರಾಮುಖ್ಯತೆ ಕೊಟ್ಟಿತ್ತು. ಇದಕ್ಕೆ ಕಾರಣವೇನು? ಕಾಂಗ್ರೆಸ್ನ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರೇ ತಮ್ಮ ಸರ್ಕಾರ ದೆಹಲಿಯಿಂದ 100 ಪೈಸೆ ಕಳುಹಿಸಿದೆ, ಬಡವರಿಗೆ ತಲುಪಿದ್ದು ಕೇವಲ 15 ಪೈಸೆ ಎಂದು ಹೇಳಿದ್ದಾರೆ. ಒಂದು ರೀತಿಯಲ್ಲಿ ಕಾಂಗ್ರೆಸ್ 85% ಕಮಿಷನ್ ಪಡೆದ ಪಕ್ಷ ಎಂದು ಅವರೇ ಒಪ್ಪಿಕೊಂಡಿದ್ದರು ಎಂದು ಟೀಕಿಸಿದರು. 

ಸ್ವಾತಂತ್ರ್ಯ ಬಂದಾಗಿನಿಂದಲೂ ಕಾಂಗ್ರೆಸ್ ದೇಶದ ವ್ಯವಸ್ಥೆ ಹಾಗೂ ರಾಜಕೀಯವನ್ನು ಭ್ರಷ್ಟಗೊಳಿಸುವ ಕೆಲಸ ಮಾಡಿದೆ. ಕಳೆದ ಕೆಲವು ವರ್ಷಗಳಲ್ಲಿ, ಕಾಂಗ್ರೆಸ್ ಭಾರತದ ರಾಜಕೀಯದಲ್ಲಿ ಮತ್ತೊಂದು ರೋಗವನ್ನು ಸೃಷ್ಟಿಸಿದೆ. ಚುನಾವಣೆ ಗೆಲ್ಲಲು ಕಾಂಗ್ರೆಸ್ ಹಣದ ಹೊಳೆ ಹರಿಸಿದೆ. ಹಣ ಹಂಚಿ ಚುನಾವಣೆ ಗೆದ್ದಿದೆ. ಕಾಂಗ್ರೆಸ್ ಸುಳ್ಳು ಸರ್ವೇ ಮಾಡಿಸಿದೆ. ಈ ಮೂಲಕ ಕಾಂಗ್ರೆಸ್ ಜನರ ದಾರಿ ತಪ್ಪಿಸುವ ಪ್ರಯತ್ನ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ, ಡಿಸಿಎಂ, ರಾಹುಲ್ ಗಾಂಧಿ ಭೇಟಿ ಹಿಂದಿನ ಗುಟ್ಟು ಬಿಚ್ಚಿಟ್ಟ ವೇಣುಗೋಪಾಲ್‌

Kerala Rain: ಜೂ.15ರ ವರೆಗೆ ಭಾರೀ ಮಳೆಯ ಮುನ್ಸೂಚನೆ , ರಾಜ್ಯದಲ್ಲಿ ಹೇಗಿರಲಿದೆ ಹವಾಮಾನ

Meghalaya Murder Case: ಗಂಡನ ಜತೆಗಿನ ಬೆಡ್‌ ರೂಂ ಸಂಗತಿಯನ್ನು ಪ್ರಿಯಕರನಿಗೆ ಒಪ್ಪಿಸಿದ್ಳು ಸೋನಮ್

Bengaluru Stampede: ಆರ್‌ಸಿಬಿ ಮಾರ್ಕೆಂಟಿಗ್ ಮುಖ್ಯಸ್ಥ ನಿಖಿಲ್ ಸೋಸಲೆಗೆ ಕಾನೂನಿನಲ್ಲಿ ಹಿನ್ನಡೆ

Indore Raja Raguvamshi murder: ಅಬ್ಬಾ.. ಗಂಡನನ್ನು ಕೊಂದು ಸೋನಂ ಪ್ಲ್ಯಾನ್ ಏನಿತ್ತು ಗೊತ್ತಾ

ಮುಂದಿನ ಸುದ್ದಿ
Show comments