Publish Date: Sat, 06 Aug 2022 (07:46 IST)
Updated Date: Sat, 06 Aug 2022 (12:07 IST)
ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು, ದೆಹಲಿ ಪ್ರವಾಸ ರದ್ದಾಗಿದೆ.
ಈ ಕುರಿತು ಟ್ವೀಟ್ ಮೂಲಕ ಪ್ರತಿಕ್ರಿಯಿಸಿರುವ ಅವರು, ನನಗೆ ಇಂದು ಕೋವಿಡ್-19 ಸೋಂಕು ದೃಢಪಟ್ಟಿದ್ದು, ಆರೋಗ್ಯವಾಗಿದ್ದೇನೆ. ನನ್ನ ಸಂಪರ್ಕಕ್ಕೆ ಬಂದವರು ದಯವಿಟ್ಟು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ. ನನ್ನ ದೆಹಲಿಯ ಪ್ರವಾಸ ರದ್ದಾಗಿರುತ್ತದೆ ಎಂದು ಹೇಳಿದ್ದಾರೆ.
ಆಜಾದಿ ಕಾ ಅಮೃತ ಮಹೋತ್ಸವ ಕುರಿತ ಸಭೆ ಮತ್ತು ನೀತಿ ಆಯೋಗದ ಸಭೆಗಳಲ್ಲಿ ಭಾಗವಹಿಸಬೇಕಿದ್ದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಎರಡು ದಿನಗಳ ಕಾಲ ದೆಹಲಿ ಪ್ರವಾಸ ಕೈಗೊಂಡಿದ್ದರು.
ಇಂದು ಬೆಳಗ್ಗೆ 11.30ಕ್ಕೆ ಬೆಂಗಳೂರಿನಿಂದ ಹೊರಡಬೇಕಿತ್ತು. ಆಗಸ್ಟ್ 7ರಂದು ದೆಹಲಿಯಿಂದ ಹಿಂದಿರುಗಲು ಕಾರ್ಯಸೂಚಿ ನಿಗದಿಯಾಗಿತ್ತು. ಅಷ್ಟರಲ್ಲೇ ಕೊರೊನಾ ಕಾಣಿಸಿಕೊಂಡಿದ್ದು, ದೆಹಲಿ ಪ್ರವಾಸ ರದ್ದಾಗಿದೆ.