Webdunia - Bharat's app for daily news and videos

Install App

ಜೀವನಾಡಿ ಕಾವೇರಿಗೆ ಬಾಗೀನ ಅರ್ಪಿಸಿದ ಮುಖ್ಯಮಂತ್ರಿ ಬೊಮ್ಮಾಯಿ

Webdunia
ಮಂಗಳವಾರ, 2 ನವೆಂಬರ್ 2021 (20:43 IST)
:- ಜೀವನಾಡಿ ಕಾವೇರಿ ಮಾತೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬಾಗೀನ ಅರ್ಪಿಸಿದರು.
ಕಬಿನಿ ಜಲಾಶಯಕ್ಕೆ ಬಾಗೀನ ಅರ್ಪಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೆಲಿಕ್ಯಾಪ್ಟರ್ ಮೂಲಕ ಕೆ.ಆರ್.ಸಾಗರಕ್ಕೆ ಆಗಮಿಸಿದರು. ಬಳಿಕ ಅಲ್ಲಿಂದ ಕಾರಿನಲ್ಲಿ ಕೃಷ್ಣರಾಜಸಾಗರ ಜಲಾಶಯಕ್ಕೆ ತೆರಳಿ ಸಂಪ್ರದಾಯಬದ್ಧವಾಗಿ ವಿಶೇಷ ಪೂಜೆ ಸಲ್ಲಿಸಿ ತುಂಬಿ ತುಳುಕುತ್ತಿದ್ದ ಕಾವೇರಿಗೆ ಬಾಗೀನ ಸಮರ್ಪಿಸಿದರು.
ಬೊಮ್ಮಾಯಿ ಅವರೊಟ್ಟಿಗೆ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ, ಜಿಲ್ಲಾ ಉಸ್ತುವಾರಿ ಸಚಿವ ಕೆ.ಸಿ. ನಾರಾಯಣಗೌಡ ಅವರೂ ಸಹ ಬಾಗೀನ ಅರ್ಪಿಸಿದರು.
ಬಳಿಕ ಕನ್ನಂಬಾಡಿ ಅಣೆಕಟ್ಟೆ ಸಮೀಪದಲ್ಲೇ ನಿರ್ಮಿಸಲಾಗಿದ್ದ ವೇದಿಕೆಗೆ ಆಗಮಿಸಿ ನೆರೆದಿದ್ದ ಸಾರ್ವಜನಿಕರು, ರೈತರನ್ನುದ್ದೇಶಿಸಿ ಮಾತನಾಡಿದರು.
ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್, ಸಚಿವ ಮುನಿರಾಜು, ಸಂಸದೆ ಸುಮಲತಾ ಅಂಬರೀಶ್, ಶಾಸಕರಾದ ರವೀಂದ್ರಶ್ರೀಕಂಠಯ್ಯಘಿ, ಸಿ.ಎಸ್. ಪುಟ್ಟರಾಜು, ಜಿ.ಟಿ. ದೇವೇಗೌಡ, ಕೆ. ಸುರೇಶ್‌ಗೌಡ, ಎಂ. ಶ್ರೀನಿವಾಸ್, ಡಾ. ಕೆ. ಅನ್ನದಾನಿ, ಡಿ.ಸಿ. ತಮ್ಮಣ್ಣಘಿ, ಕೆ.ಟಿ. ಶ್ರೀಕಂಠೇಗೌಡ, ಅಪ್ಪಾಜಿಗೌಡ, ಸಾ.ರಾ. ಮಹೇಶ್, ಎನ್. ಮಹೇಶ್, ಚಿಕ್ಕಮಾದು, ಜಿಲ್ಲಾಧಿಕಾರಿ ಎಸ್. ಅಶ್ವತಿ, ಜಿ.ಪಂ. ಸಿಇಓ ದಿವ್ಯಾ ಪ್ರಭು, ಜಿಲ್ಲಾ ಪೊಲೀಸ್ ಅಧೀಕ್ಷಕ ಯತೀಶ್, ಕಾವೇರಿ ನೀರಾವರಿ ನಿಗಮದ ಮುಖ್ಯ ಅಭಿಯಂತರ ಶಂಕರೇಗೌಡ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.
ಶ್ರೀರಂಗಪಟ್ಟಣದ ಶಾಶ್ವತಿ ಕ್ರಿಯಾ ಸಮಿತಿ ಮುಖ್ಯಸ್ಥ ಡಾ. ಬಾನುಪ್ರಕಾಶ್ ಶರ್ಮಾ ಮತ್ತು ತಂಡ ಬಾಗೀನ ಕಾರ‌್ಯಕ್ರಮದ ಪೂಜಾ ವಿಧಿ ವಿಧಾನವನ್ನು ನೆರವೇರಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಸ್ಮಾ ಜಾರಿ ಮಾಡಿದ್ರೂ ಹೆದರಲ್ಲ: ಆ.5ರಂದು ಸಾರಿಗೆ ಸೇವೆ ಸ್ಥಗಿತಗೊಳಿಸಿ ಅನಿರ್ಧಿಷ್ಟಾವಧಿ ಮುಷ್ಕರದ ಎಚ್ಚರಿಕೆ

ಜಗದೀಪ್ ಧನಕರ್ ರಾಜೀನಾಮೆ: ಉಪ ರಾಷ್ಟ್ರಪತಿ ಹುದ್ದೆಯ ಚುನಾವಣಾ ಪ್ರಕ್ರಿಯೆ ಆರಂಭಿಸಿದ ಆಯೋಗ

ಧರ್ಮಸ್ಥಳ ಪ್ರಕರಣ: ರಾಜ್ಯ ಸರ್ಕಾರದಿಂದ ಎಸ್‌ಐಟಿಗೆ 20 ಪೊಲೀಸ್ ಅಧಿಕಾರಿಗಳ ನಿಯೋಜನೆ

ಬಾ ನಲ್ಲ ಮಧುಚಂದ್ರಕೆ ಪ್ರಕರಣ: ಪತಿ ಕೊಂದು ಜೈಲು ಸೇರಿದ್ದ ಸೋನಂ ನಡವಳಿಕೆಗೆ ಶಾಕ್

ಸುಳ್ಳು, ವಂಚನೆ ಮಾಡೋದೇ ಕಾಂಗ್ರೆಸ್ ಸರ್ಕಾರದ ಕೆಲಸ: ಛಲವಾದಿ ನಾರಾಯಣಸ್ವಾಮಿ

ಮುಂದಿನ ಸುದ್ದಿ
Show comments