Webdunia - Bharat's app for daily news and videos

Install App

ದಾವೋಸ್ ಗೆ ತೆರಳಿದ ಬೊಮ್ಮಾಯಿ

Webdunia
ಭಾನುವಾರ, 22 ಮೇ 2022 (18:20 IST)
ಬೆಂಗಳೂರು : ಸ್ವಿಟ್ಜರ್ಲೆಂಡಿನ ದಾವೋಸ್ನಲ್ಲಿ ಇಂದಿನಿಂದ ಆರಂಭವಾಗಿರುವ ವಿಶ್ವ ಆರ್ಥಿಕ ಶೃಂಗ ಸಭೆಯಲ್ಲಿ ಪಾಲ್ಗೊಳ್ಳಲು ಸಿಎಂ ಬೊಮ್ಮಾಯಿ ನೇತೃತ್ವದ ನಿಯೋಗ ಇಂದು ರಾಜ್ಯದಿಂದ ಹೊರಟಿದೆ.

ವಿಶ್ವ ಆರ್ಥಿಕ ಶೃಂಗ ಸಭೆಯಲ್ಲಿ ಭಾರತವನ್ನೂ ಪ್ರತಿನಿಧಿಸಲಿರುವ ಸಿಎಂ ಬೊಮ್ಮಾಯಿಗೆ ಐಟಿಬಿಟಿ ಸಚಿವ ಡಾ.ಅಶ್ವಥ್ ನಾರಾಯಣ ಮತ್ತು ಬೃಹತ್ ಮತ್ತು ಮಧ್ಯಮ ಕೈಗಾರಿಕೆಗಳ ಸಚಿವ ಮುರುಗೇಶ್ ನಿರಾಣಿ ಸಾತ್ ಕೊಟ್ಟಿದ್ದಾರೆ.

ಬೊಮ್ಮಾಯಿಯವರಿಗೆ ಸಿಎಂ ಆದ ಬಳಿಕ ಮೊದಲ ವಿದೇಶ ಪ್ರವಾಸ ಇದಾಗಿದೆ. ಇಂದು ಬೆಳಗ್ಗೆ 8:30ಕ್ಕೆ ತಮ್ಮ ಆರ್.ಟಿ.ನಗರದ ನಿವಾಸದಿಂದ ಪ್ಯಾಂಟ್, ಶರ್ಟ್ ಧರಿಸಿ ಸಾಮಾನ್ಯ ಉಡುಪಿನಲ್ಲೇ ದಾವೋಸ್ಗೆ ತೆರಳಿದರು. ಸಿಎಂ ಜೊತೆಗೆ ಅದ್ಧೂರಿ ಸೂಟ್ ಧರಿಸಿದ ಮುರುಗೇಶ್ ನಿರಾಣಿ ಹೊರಟರು.

ಇಂದು ಸಿಎಂ ಜೊತೆಗೆ ಒಟ್ಟು 8 ಜನರ ತಂಡ ದಾವೋಸ್ಗೆ ಪ್ರಯಾಣಿಸಿದೆ. ಸಿಎಂ ಅವರೊಂದಿಗೆ ಧರ್ಮಪತ್ನಿ ಚೆನ್ನಮ್ಮ, ಮುರುಗೇಶ್ ನಿರಾಣಿ ಮತ್ತು ನಿರಾಣಿಯವರ ಪತ್ನಿ, ನಿರಾಣಿ ಪಿಎ ಶರಣಬಸಪ್ಪ, ಸಿಎಂ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್ ಮತ್ತು ಅವರ ಪಿಎ, ಸಿಎಂ ಒಎಸ್ಡಿ ರೋಹನ್ ಬಿರಾದಾರ್ ದಾವೋಸ್ಗೆ ತೆರಳಿದರು. 

ದಾವೋಸ್ಗೆ ಹೋಗುವ ಮುನ್ನ ಆರ್ಟಿ ನಗರದ ನಿವಾಸದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ, ಕಳೆದ ನಾಲ್ಕು ತ್ರೈಮಾಸಿಕಕ್ಕೆ ಹೋಲಿಕೆ ಮಾಡಿದರೆ ದೇಶಕ್ಕೆ ವಿದೇಶಿ ನೇರ ಬಂಡವಾಳ ಅತಿ ಹೆಚ್ಚು ಬಂದಿದೆ. ಇದರಲ್ಲಿ ನಂಬರ್ ಒನ್ ಪಾಲು ಕರ್ನಾಟಕಕ್ಕೆ ಹರಿದು ಬಂದಿದೆ. ನಾಳೆ ಮತ್ತು ನಾಡಿದ್ದು ದಾವೋಸ್ ವಿಶ್ವ ಆರ್ಥಿಕ ಒಕ್ಕೂಟದ ಸಮ್ಮೇಳನದಲ್ಲಿ ಭಾಗವಹಿಸುತ್ತಿದ್ದೇವೆ.

ಸಮ್ಮೇಳನದಲ್ಲಿ ವಿಶ್ವದ ಹೆಸರಾಂತ ಪ್ರಮುಖರನ್ನು ಮತ್ತು ಕೈಗಾರಿಕೋದ್ಯಮಿಗಳನ್ನು ಭೇಟಿ ಮಾಡಲಾಗುವುದು. ಹಲವಾರು ಜನ ರಾಜ್ಯದಲ್ಲಿ ಬಂಡವಾಳ ಹೂಡಲು ಮುಂದೆ ಬಂದಿದ್ದಾರೆ. ವಿಶೇಷವಾಗಿ ನವೆಂಬರ್ನಲ್ಲಿ ರಾಜ್ಯದಲ್ಲಿ ನಡೆಯಲಿರುವ ಗ್ಲೋಬಲ್ ಇನ್ವೆಸ್ಟ್ ಮೀಟ್ಗೆ ಬಹುದೊಡ್ಡ ಪ್ರತಿಕ್ರಿಯೆ ಸಿಗುವ ವಿಶ್ವಾಸವಿದೆ ಎಂದು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka: ಪೋಷಕರ ಸಂದರ್ಶನ ಮಾಡುವಂತಿಲ್ಲ, ಹೆಚ್ಚು ಫೀಸ್ ಕೇಳೋ ಹಾಗಿಲ್ಲ: ಖಾಸಗಿ ಶಾಲೆಗಳಿಗೆ ಹೊಸ ರೂಲ್ಸ್ ಇಲ್ಲಿದೆ

Shocking video: ನೆಗಡಿ ಎಂದು ಬಂದ ಪುಟ್ಟ ಮಗುವಿಗೆ ಸಿಗರೇಟು ಸೇದಲು ಹೇಳಿಕೊಟ್ಟ ವೈದ್ಯ

Video: ನಾವು ಹಿಂದೂಗಳಂತಲ್ಲ, ಕಾಶ್ಮೀರ ಯಾವತ್ತಿದ್ರೂ ನಮ್ಮದೇ, ಶತ್ರುಗಳು ಏನೂ ಮಾಡಕ್ಕಾಗಲ್ಲ: ಪಾಕ್ ಸೇನಾ ಮುಖ್ಯಸ್ಥ

West Bengal: ಪಶ್ಚಿಮ ಬಂಗಾಲದಲ್ಲಿ ವಕ್ಫ್ ಗಲಾಟೆಯಲ್ಲಿ ಸುಟ್ಟು ಕರಕಲಾದ ಸೀರೆಅಂಗಡಿ ವಿಡಿಯೋ ನೋಡಿದ್ರೆ ಕರುಳು ಚುರಕ್ ಅನ್ನುತ್ತೆ

Arecanut price today: ಅಡಿಕೆ ಬೆಳೆಗಾರರಿಗೆ ನೆಮ್ಮದಿ ಕೊಡುವ ಸುದ್ದಿ, ಇಂದಿನ ಬೆಲೆ ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments