Webdunia - Bharat's app for daily news and videos

Install App

ಮಾನಹಾನಿಕರ ಸುದ್ದಿ ಪ್ರಸಾರ ಮಾಡದಂತೆ ಕೋರ್ಟ್‌ ಮೆಟ್ಟಿಲೇರಿದ ಬೊಮ್ಮಾಯಿ

Sampriya
ಬುಧವಾರ, 28 ಆಗಸ್ಟ್ 2024 (14:07 IST)
ಬೆಂಗಳೂರು: ತಮ್ಮ ವಿರುದ್ಧದ ಯಾವುದೇ ಮಾನಹಾನಿಕರ ಸುದ್ದಿಗಳನ್ನು ಪ್ರಸಾರ ಮಾಡದಂತೆ ಪ್ರತಿಬಂಧಕಾದೇಶ ಕೋರಿ ಮಾಜಿ ಮುಖ್ಯಮಂತ್ರಿ, ಹಾವೇರಿ ಕ್ಷೇತ್ರದ ಸಂಸದ  ಬಸವರಾಜ ಬೊಮ್ಮಾಯಿ ಅವರು ಬೆಂಗಳೂರು ನ್ಯಾಯಾಲಯದ ಮೆಟ್ಟಿಲೇರಿದ್ದಾರೆ.

ಪ್ರತಿಬಂಧಕಾದೇಶ ಕೋರಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿರುವ ಬೆಂಗಳೂರಿನ ಸತ್ರ ನ್ಯಾಯಾಲಯವು ಆದೇಶ ಕಾಯ್ದಿರಿಸಿದೆ. ಬೊಮ್ಮಾಯಿ ಸಲ್ಲಿಸಿರುವ ಮೂಲ ದಾವೆಯ ಭಾಗವಾಗಿ ಮಧ್ಯಂತರ ಅರ್ಜಿಯ ವಿಚಾರಣೆಯನ್ನು 8ನೇ ಹೆಚ್ಚುವರಿ ಸಿಟಿ ಸಿವಿಲ್‌ ಮತ್ತು ಸತ್ರ ನ್ಯಾಯಾಧೀಶರಾದ ವಾಣಿ ಎ. ಶೆಟ್ಟಿ ನಡೆಸಿದರು.

ವಕೀಲ ಕೆ.ಎನ್. ಜಗದೀಶ್ ಮತ್ತು ಮಾಧ್ಯಮಗಳು ತಮ್ಮ ವಿರುದ್ಧದ ಆಕ್ಷೇಪಾರ್ಹ ಹೇಳಿಕೆ ಮತ್ತು ಸುದ್ದಿಗಳನ್ನು ಪ್ರಕಟಿಸದಂತೆ ಪ್ರತಿಬಂಧಕಾದೇಶ ನೀಡಲು ಅವರು ಕೋರಿ ಅರ್ಜಿ ಸಲ್ಲಿಸಿದ್ದಾರೆ.

ಮಂಗಳವಾರ ಅರ್ಜಿಯ ವಿಚಾರಣೆ ನಡೆಸಲಾಗಿದ್ದು, ಬುಧವಾರ ಆದೇಶ ನೀಡುವ ಸಾಧ್ಯತೆ ಇದೆ. ಸಂಸದ ಬಸವರಾಜ ಬೊಮ್ಮಾಯಿ ಪರವಾಗಿ ಹಿರಿಯ ವಕೀಲ ಪ್ರಭುಲಿಂಗ ನಾವದಗಿ ಅವರು ವಾದ ಮಾಡಿದ್ದಾರೆ. ಅವರು ನ್ಯಾಯಾಲಯಕ್ಕೆ ಸಂಬಂಧಿತ ದಾಖಲೆಗಳ ಮೆಮೊವನ್ನು ಸಲ್ಲಿಸಿದ್ದು, ಇಂದು ಆದೇಶ ಕೊಡುವುದಾಗಿ ನ್ಯಾಯಾಲಯ ಹೇಳಿದೆ.

ವಕೀಲ ಜಗದೀಶ್ ಸಾಮಾಜಿಕ ಮಾಧ್ಯಮಗಳಲ್ಲಿ ವಿಡಿಯೋ ಬಿಡುಗಡೆ ಮಾಡಿದ್ದು, ಅದರಲ್ಲಿ ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿದ್ದಾರೆ. ಬಸವರಾಜ ಬೊಮ್ಮಾಯಿ ಆಪ್ತ ಸಹಾಯಕ ಪೊಲೀಸರಿಗೆ ದೂರು ಕೊಟ್ಟಿದ್ದಾರೆ. ಅವರ ಬೆನ್ನಲ್ಲೇ ಕೋರ್ಟ್‌ ಮೆಟ್ಟಿಲೇರಿದ್ದಾರೆ.

ಇದೆಲ್ಲದರ ಮಧ್ಯ ಬಸವರಾಜ ಬೊಮ್ಮಾಯಿ ಕೋರ್ಟ್​ ಮೊರೆ ಹೋಗಿರುವುದು ಭಾರೀ ಚರ್ಚೆಗೆ ಗ್ರಾಸವಾಗಿದೆ. ಅಲ್ಲದೆ ಬೊಮ್ಮಾಯಿ ವಿರುದ್ಧ ಏನಾದರೂ ಆರೋಪಗಳು ಇದ್ದಾವೆಯೇ? ಯಾರಾದರೂ ಅವುಗಳನ್ನು ಬಹಿರಂಗಪಡಿಸಲು ಮುಂದಾಗಿದ್ದಾರಾ? ಹೀಗೆ ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಜಯೇಂದ್ರನಿಂದ ನಾನು ಪಾಠ ಕಲಿಯಬೇಕಾ: ಸಿದ್ದರಾಮಯ್ಯ ರೋಷಾವೇಷ

ಅಮಾನತು ಮಾಡೋದು, ಮತ್ತೆ ರದ್ದು ಮಾಡೋದು ಎಲ್ಲಾ ನಾಟಕ: ಬಿವೈ ವಿಜಯೇಂದ್ರ

ಕೇರಳ ನರ್ಸ್ ನಿಮಿಷಾ ಪ್ರಿಯಾ ಮರಣದಂಡನೆ ಸಂಪೂರ್ಣವಾಗಿ ರದ್ದು

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Video: ಆಪರೇಷನ್ ಸಿಂಧೂರ್ ಶೌರ್ಯದ ಬಗ್ಗೆ ಹೇಳಿದ್ರೆ ವಿಪಕ್ಷಗಳು ಮೇಜು ತಟ್ಟಲ್ಲ ಯಾಕೆ: ಅನುರಾಗ್ ಠಾಕೂರ್

ಮುಂದಿನ ಸುದ್ದಿ
Show comments