Select Your Language

Notifications

webdunia
webdunia
webdunia
webdunia

ಕೊನೆಗೂ ಬೋನಿಗೆ ಬಿದ್ದ ಕರಡಿ

ಕೊನೆಗೂ ಬೋನಿಗೆ ಬಿದ್ದ ಕರಡಿ
vijayanagara , ಬುಧವಾರ, 11 ಮೇ 2022 (18:53 IST)
ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನಲ್ಲಿ ಎಲ್ಲರ ನಿದ್ದೆಗೆಡಿಸಿದ್ದ ಕರಡಿ ಕೊನೆಗೂ ಬೋನಿಗೆ ಬಿದ್ದಿದೆ..
ಚಿಕ್ಕಜೋಗಿಹಳ್ಳಿ, ಕಡಕೋಳ, ಮಡ್ಲಾನಾಯಕನಹಳ್ಳಿ, ಭೀಮಸಮುದ್ರ, ಕುರಿಹಟ್ಟಿ ಭಾಗಗಳಲ್ಲಿ ಕರಡಿ ದಿನನಿತ್ಯ ಕಾಣಿಸಿಕೊಂಡು ಗ್ರಾಮಸ್ಥರಲ್ಲಿ ಆತಂಕ ಮೂಡಿಸಿತ್ತು..ಅಲ್ಲದೇ, ಚಿಕ್ಕಜೋಗಿಹಳ್ಳಿಯ ಪೆಟ್ರೋಲ್ ಬಂಕ್, ಲಕ್ಷ್ಮಣ್ ನಾಯಕ್ ಎಂಬುವರ ತೋಟದ ಬಳಿ ರಾತ್ರಿ ವೇಳೆ ಕರಡಿ ಓಡಾಡಿರುವ ವಿಡಿಯೋ ವೈರಲ್ ಆಗಿತ್ತು..ಇದೀಗ ಕೂಡ್ಲಿಗಿ ತಾಲೂಕಿನ ಕಡಕೋಳ ಬಳಿ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಕರಡಿ ಸಿಕ್ಕಿ ಬಿದ್ದಿದೆ..ಇನ್ನು ಕರಡಿಯನ್ನ ಗುಡೇಕೋಟೆ ಕರಡಿಧಾಮಕ್ಕೆ ಸಾಗಿಸುವುದಾಗಿ ಅರಣ್ಯ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಮಂಡ್ಯದ ‘ಕೈ’ ಮುಖಂಡನ ಬಂಧನ