Webdunia - Bharat's app for daily news and videos

Install App

Booker Prize: ಪ್ರಶಸ್ತಿಯೊಂದಿಗೆ ಬರೋಬ್ಬರಿ ₹57.28 ಲಕ್ಷ ಬಹುಮಾನ ಬಾಚಿಕೊಂಡ ಸಾಹಿತಿ ಬಾನು ಮುಷ್ತಾಕ್‌

Sampriya
ಬುಧವಾರ, 21 ಮೇ 2025 (14:23 IST)
Photo Courtesy X
ಬೆಂಗಳೂರು:  ಅಂತರರಾಷ್ಟ್ರೀಯ ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಹೆಸರಾಂತ ಸಾಹಿತಿ ಬಾನು ಮುಷ್ತಾಕ್ ಅವರು ಅಂದಾಜು ₹ 57.28 ಲಕ್ಷ (50 ಸಾವಿರ ಪೌಂಡ್‌) ನಗದು ಪಡೆದಿದ್ದಾರೆ.

ಬಾನು ಮುಷ್ತಾಕ್ ಅವರ, ಸಣ್ಣ ಕತೆಗಳ ಅನುವಾದಿತ ಸಂಕಲನ 'ಹಾರ್ಟ್ ಲ್ಯಾಂಪ್'ಗೆ ಈ ಪ್ರಶಸ್ತಿ ಲಭಿಸಿದೆ. ಇದೇ ಮೊದಲ ಬಾರಿಗೆ ಕನ್ನಡದ ಕೃತಿಗೆ ಈ ಪ್ರತಿಷ್ಠಿತ ಪ್ರಶಸ್ತಿ ದೊರೆತಿದೆ. ಲಂಡನ್‌ನ ಟೇಟ್ ಮಾಡರ್ನ್‌ನಲ್ಲಿ ನಡೆದ ಸಮಾರಂಭದಲ್ಲಿ ಅವರು ಪ್ರಶಸ್ತಿ ಸ್ವೀಕರಿಸಿದ್ದಾರೆ.

ಫ್ರೆಂಚ್‌ನಿಂದ ಅನುವಾದವಾದ ಎರಡು ಕೃತಿಗಳು, ಜಪಾನ್‌, ಇಟಾಲಿಯನ್‌ ಹಾಗೂ ಡ್ಯಾನಿಷ್‌ ಭಾಷೆಯ ತಲಾ ಒಂದು ಕೃತಿ 'ಶಾರ್ಟ್‌ ಲಿಸ್ಟ್‌'ನಲ್ಲಿದ್ದವು. ಆದರೆ, ಅಂತಿಮವಾಗಿ ಕನ್ನಡದ ಸಾಹಿತಿಗೆ ಪ್ರತಿಷ್ಠಿತ ಪ್ರಶಸ್ತಿ ಒಲಿದಿದೆ.

1990 ಮತ್ತು 2023ರ ನಡುವೆ ಪ್ರಕಟಗೊಂಡ 12 ಕತೆಗಳನ್ನೊಳಗೊಂಡ ಈ ಸಂಕಲನವನ್ನು ದೀಪಾ ಭಸ್ತಿ ಅವರು ಕನ್ನಡದಿಂದ ಇಂಗ್ಲಿಷ್‌ಗೆ ಅನುವಾದಿಸಿದ್ದಾರೆ. ಮುಸ್ಲಿಂ ಸಮುದಾಯದ ಬಾಲಕಿಯರು ಹಾಗೂ ಹೆಣ್ಣುಮಕ್ಕಳ ದೈನಂದಿನ ಬದುಕು ಈ ಕತೆಗಳಲ್ಲಿ ಅನಾವರಣಗೊಂಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಳೆಯಿಂದಾಗಿ ಸಂಕ್ರಾಮಿಕ ರೋಗ ಹರಡುವ ಭೀತಿ: ಮುಂಜಾಗ್ರತಾ ಕ್ರಮಕ್ಕೆ ಪ್ರಿಯಾಂಕ್ ಖರ್ಗೆ ಸೂಚನೆ

ಎಸ್‌ಬಿಐ ಅಧಿಕಾರಿ ಮೇಲಿನ ಕ್ರಮಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ಸಿಎಂ ಸಿದ್ದರಾಮಯ್ಯ

ಸಿದ್ದರಾಮಯ್ಯ ಬರ್ತಾರೆಂದು ಮೆಟ್ರೋ ನಿಲ್ದಾಣ ಕ್ಲೀನಿಂಗ್: ದಿನಕ್ಕೊಂದು ಕಡೆ ಪಾದ ಬೆಳೆಸಿ ಸಾರ್ ಎಂದ ನೆಟ್ಟಿಗರು

ಕನ್ನಡ ಮಾತನಾಡಲ್ಲ ಎಂದಿದ್ದ ಎಸ್ ಬಿಐ ಮ್ಯಾನೇಜರ್ ಎತ್ತಂಗಡಿ: ಇದು ಕನ್ನಡಿಗರ ತಾಕತ್ತು

Chhattisgarh Encounter: ಛತ್ತೀಸ್‌ಗಢದಲ್ಲಿ ಗುಂಡಿನ ಸದ್ದು: 26 ನಕ್ಸಲನ್ನು ಬೇಟೆಯಾಡಿದ ಭದ್ರತಾ ಪಡೆ

ಮುಂದಿನ ಸುದ್ದಿ
Show comments