Webdunia - Bharat's app for daily news and videos

Install App

ಸೆ.15ರ ಒಳಗೆ ಎಲ್ಲ ಶಾಲೆಗಳಿಗೆ ಪಠ್ಯ ಪುಸ್ತಕಗಳ ಪೂರೈಕೆಗೆ ಕ್ರಮ: ಸಚಿವ ಬಿ.ಸಿ ನಾಗೇಶ್

Webdunia
ಬುಧವಾರ, 25 ಆಗಸ್ಟ್ 2021 (20:35 IST)
ಸೆಪ್ಟೆಂಬರ್ 15ರ ಒಳಗೆ ರಾಜ್ಯದ ಎಲ್ಲ ಸರ್ಕಾರಿ ಶಾಲೆಗಳಿಗೆ ಪಠ್ಯ ಪುಸ್ತಕಗಳನ್ನು ಪೂರೈಕೆ ಮಾಡುವ ಗುರಿ ಹೊಂದಲಾಗಿದೆ. ನಿಗದಿತ ಅವಧಿಯೊಳಗೆ ಪಠ್ಯ ಪುಸಕ್ತಗಳು ತಲುಪುವ ವಿಶ್ವಾಸವಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವ ಬಿ.ಸಿ ನಾಗೇಶ್ ತಿಳಿಸಿದರು.
ವಿಧಾನಸೌಧದಲ್ಲಿ ಬುಧವಾರ ತಮ್ಮನ್ನು ಭೇಟಿ ಮಾಡಿದ ಸುದ್ದಿಗಾರರ ಜೊತೆ ಮಾತನಾಡಿದ ಸಚಿವರು, ‘ಕೋವಿಡ್-19 ಕಾರಣದಿಂದ ಸರಕಾರಿ ಮುದ್ರಣಾಲಯಗಳು ಕೆಲ ಅವಧಿಗೆ ಮುದ್ರಣ ಸ್ಥಗಿತಗೊಳಿಸಿದ್ದವು. ಹೀಗಾಗಿ, ಮುದ್ರಣ ಪ್ರಕ್ರಿಯೆ ವಿಳಂಬವಾಗಿದೆ. ಆದರೂ, ಶಾಲೆ ಆರಂಭಕ್ಕೆ ಮೊದಲೇ ಶೇ.50ರಷ್ಟು ಪಠ್ಯ ಪುಸ್ತಕಗಳು ಶಾಲೆಗಳನ್ನು ತಲುಪಬೇಕು ಎಂಬ ಗುರಿ ಹೊಂದಲಾಗಿತ್ತು. ಅದರಂತೆ ರಾಜ್ಯದ ಶೇ.50ಕ್ಕಿಂತ ಹೆಚ್ಚು ಶಾಲೆಗಳಿಗೆ ಪುಸ್ತಕಗಳನ್ನು ಪೂರೈಸಲಾಗಿದೆ' ಎಂದು ತಿಳಿಸಿದರು.
‘ಇಂದಿನವರೆಗೆ ಶೇ.70ಕ್ಕಿಂತ ಹೆಚ್ಚು ಪಠ್ಯ ಪುಸ್ತಕಗಳು ಮುದ್ರಣಗೊಂಡಿವೆ. ಮುಂದಿನ ಒಂದು ವಾರದೊಳಗೆ ಮುದ್ರಣಗೊಂಡಿರುವ ಎಲ್ಲ ಪುಸ್ತಕಗಳು ಶಾಲೆಗಳಿಗೆ ತಲುಪುವಂತೆ ವ್ಯವಸ್ಥೆ ಮಾಡಲಾಗುತ್ತದೆ. ಆಯಾ ತರಗತಿಗಳಿಗೆ ಸಂಬಂಧಿಸಿದ ಎಲ್ಲ ವಿಷಯ, ಭಾಷೆ ಪುಸ್ತಕಗಳು ಮುದ್ರಣಗೊಂಡ ಕೂಡಲೇ ಶಾಲೆಗಳಿಗೆ ಪೂರೈಕೆ ಮಾಡಲಾಗುತ್ತದೆ. ಸೆಪ್ಟಂಬರ್ 15ರ ಒಳಗಾಗಿ ಎಲ್ಲ ಶಾಲೆಗಳಿಗೆ ಪುಸ್ತಕಗಳು ತಲುಪಿಸುವ ಗುರಿ ಹೊಂದಲಾಗಿದೆ’ ಎಂದು ಸಚಿವರು ತಿಳಿಸಿದರು.
 
‘ಆನ್‌ಲೈನ್ ಶಿಕ್ಷಣದ ಅಗತ್ಯಕ್ಕೆ ತಕ್ಕಂತೆ ಪಠ್ಯವನ್ನು ಸಿದ್ದಪಡಿಸಿ ಆನ್‌ಲೈನ್‌ಗೆ ಅಪ್‌ಲೋಡ್ ಮಾಡಲಾಗಿತ್ತು. ಅವುಗಳನ್ನು ಡೌನ್‌ಲೋಡ್ ಮಾಡಿಕೊಳ್ಳುವಂತೆ ಮಕ್ಕಳಿಗೆ, ಪಾಲಕರಿಗೆ ತಿಳಿಸಲಾಗಿತ್ತು. ಹೀಗಾಗಿ, ಬಹುತೇಕ ಮಕ್ಕಳು ಆನ್‌ಲೈನ್‌ನಲ್ಲೇ ಪುಸ್ತಕಗಳನ್ನು ಡೌನ್‌ಲೋಡ್ ಮಾಡಿಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ’ ಎಂದು ಸಚಿವರು ತಿಳಿಸಿದರು.
 
‘ಶಾಲೆಗಳ ಮುಖ್ಯ ಶಿಕ್ಷಕರಿಗೆ, ಆಡಳಿತ ಮಂಡಳಿಗಳಿಗೆ ಪಠ್ಯ ಪುಸ್ತಕಗಳನ್ನು ಡೌನ್‌ಲೋಡ್ ಮಾಡಿಕೊಂಡು ವಿದ್ಯಾರ್ಥಿಗಳಿಗೆ ಹಂಚಿಕೆ ಮಾಡುವಂತೆ ಸೂಚನೆ ನೀಡಲಾಗಿದೆ’ ಎಂದು ಸಚಿವರು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ರಾಜೀನಾಮೆ ಬದಲು ಜಾತಿಗಣತಿ, ಇದು ಹೈಕಮಾಂಡ್ ಪ್ಲ್ಯಾನ್: ಛಲವಾದಿ ನಾರಾಯಣಸ್ವಾಮಿ

Siddaramaiah: ರಾಜ್ಯಪಾಲರನ್ನು ಫೋನ್ ನಲ್ಲಿ ನಾನೇ ಕರೆದಿದ್ದೆ: ಗೊತ್ತಿಲ್ಲ ಎಂದಿದ್ದ ಸಿಎಂ ಸಿದ್ದರಾಮಯ್ಯ ಈಗ ಸ್ಪಷ್ಟನೆ

Meghalaya Honeymoon Case: ನೂರಕ್ಕೆ ನೂರು ಇದು ಆಕೆಯೇ ಮಾಡಿದ್ದು: ಸೋನಮ್‌ ವಿರುದ್ಧ ಕೆಂಡಕಾರಿದ ಸಹೋದರ

Kasargodu: ಬಾಲ್ಯದ ಘಟನೆಗೆ 50 ವರ್ಷಗಳ ಬಳಿಕ ಪ್ರತೀಕಾರ ತೀರಿಸಿಕೊಂಡ ವ್ಯಕ್ತಿ

ಸತ್ಯ ಹರಿಶ್ಚಂದ್ರರ ತುಂಡುಗಳ ಬಣ್ಣವೆಲ್ಲಾ ಬಯಲಾಗ್ತಿದೆ: ಬಿ ಶ್ರೀರಾಮುಲು

ಮುಂದಿನ ಸುದ್ದಿ
Show comments