Webdunia - Bharat's app for daily news and videos

Install App

ನಾಳೆ ಸುಪ್ರೀಂನಲ್ಲಿ ಗಡಿ ವಿವಾದದ ವಿಚಾರಣೆ

Webdunia
ಮಂಗಳವಾರ, 29 ನವೆಂಬರ್ 2022 (19:33 IST)
ಮಹಾರಾಷ್ಟ್ರ ಗಡಿಯಲ್ಲಿರುವ ಕರ್ನಾಟಕದ ಪ್ರಮುಖ ಪಟ್ಟಣ ನಿಪ್ಪಾಣಿಯಲ್ಲಿ ಕರ್ನಾಟಕ ಪೊಲೀಸ್ ಇಲಾಖೆಯ ಎಡಿಜಿಪಿ (ಕಾನೂನು ಮತ್ತು ಸುವ್ಯವಸ್ಥೆ) ಅಲೋಕ್​ ಕುಮಾರ್ ನೇತೃತ್ವದಲ್ಲಿ ಎರಡೂ ರಾಜ್ಯಗಳ ಉನ್ನತ ಪೊಲೀಸ್ ಅಧಿಕಾರಿಗಳ ಸಭೆ ನಡೆಯಿತು. ಪಟ್ಟಣದ ಸರ್ಕೀಟ್​ ಹೌಸ್​ನಲ್ಲಿ ನಡೆದ ಸಭೆಯ ನಂತರ ಮಾತನಾಡಿದ ಅಲೋಕ್ ಕುಮಾರ್, ಕಳೆದ ವಾರ ಕರ್ನಾಟಕ ಸಾರಿಗೆ ನಿಗಮದ ಬಸ್​ಗಳ ಮೇಲೆ ಮಹಾರಾಷ್ಟ್ರದಲ್ಲಿ ಕಲ್ಲು ತೂರಿ ಮಸಿ ಬಳಿಯಲಾಗಿತ್ತು. ಮುಂದಿನ ದಿನಗಳಲ್ಲಿ ಇಂಥ ಘಟನೆಗಳು ನಡೆಯಬಾರದು ಎಂದು ತಾಕೀತು ಮಾಡಿದರು. ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದದ ಬಗ್ಗೆ ನಾಳೆ ಸುಪ್ರೀಂಕೋರ್ಟ್​​ನಲ್ಲಿ ವಿಚಾರಣೆ ನಡೆಯಲಿದೆ. ಅಶಾಂತಿಗೆ ಇದು ಕಾರಣವಾಗಬಾರದು ಎನ್ನುವ ಕಾರಣಕ್ಕೆ ಮುನ್ನೆಚ್ಚರಿಕೆ ದೃಷ್ಟಿಯಿಂದ ಸಭೆ ನಡೆಸಲಾಯಿತು ಎಂದು ಹೇಳಿದರು. ಸುಪ್ರೀಂಕೋರ್ಟ್​ ಒಂದು ವೇಳೆ ನಾಳೆಯೇ ತೀರ್ಪು ಪ್ರಕಟಿಸಿದರೂ ಏನೂ ಗಲಾಟೆ ಆಗಬಾರದು. ಇದಕ್ಕಾಗಿ ಪೊಲೀಸ್ ಇಲಾಖೆ ಅಗತ್ಯ ಮುನ್ನೆಚ್ಚರಿಕೆ ತೆಗೆದುಕೊಂಡಿದೆ. ಮಹಾರಾಷ್ಟ್ರ ಮತ್ತು ಕರ್ನಾಟಕ ಪೊಲೀಸರು ಮೂರು ಕಡೆ ಜಂಟಿ ಚೆಕ್​ಪೋಸ್ಟ್ ಮಾಡಿದ್ದಾರೆ. ಪ್ರತಿದಿನ 400ಕ್ಕೂ ಹೆಚ್ಚು ಕರ್ನಾಟಕದ ಬಸ್​ಗಳು ಮಹಾರಾಷ್ಟ್ರಕ್ಕೆ ಹೋಗುತ್ತವೆ, ಅಲ್ಲಿಂದ 175ಕ್ಕೂ ಹೆಚ್ಚು ಬಸ್​ಗಳು ಕರ್ನಾಟಕಕ್ಕೆ ಬರುತ್ತವೆ. ಅಲ್ಲಿ ನಮ್ಮ ವಾಹನಗಳಿಗೆ ಮತ್ತು ಜನರಿಗೆ, ಇಲ್ಲಿ ಅವರ ವಾಹನಗಳಿಗೆ ಮತ್ತು ಜನರಿಗೆ ಯಾವುದೇ ತೊಂದರೆ ಆಗದಂತೆ ನೋಡಿಕೊಳ್ಳಲು ಕಾರ್ಯತಂತ್ರ ರೂಪಿಸುವ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯಿತು ಎಂದು ಅವರು ತಿಳಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ ಉತ್ಖನನ ವೇಳೆ ಕಂಡಿದ್ದೇನು: ಬಿಗ್ ಟ್ವಿಸ್ಟ್

ರಾಹುಲ್ ಗಾಂಧಿಯ ಚುನಾವಣಾ ಅಕ್ರಮ ಪ್ರತಿಭಟನೆ ಕಪಟ ನಾಟಕ: ಬಿವೈ ವಿಜಯೇಂದ್ರ

ನನ್ನನ್ನು ನಾನು ದ್ವೇಷಿಸುತ್ತೇನೆ, ನಾನು ಸೋತವನು: ಹೀಲಿಯಂ ಅನಿಲ ಸೇವಿಸಿ ಸಿಎ ಆತ್ಮಹತ್ಯೆ

ಧರ್ಮಸ್ಥಳದಲ್ಲಿ ಎರಡನೇ ದಿನ ಹುಡುಕಾಡುತ್ತಿರುವ ಎಸ್ಐಟಿ ತಂಡಕ್ಕೆ ಸಿಕ್ಕಿದ್ದೇನು

ಧರ್ಮಸ್ಥಳ: 6 ಅಡಿ ಅಗೆದರೂ ಸಿಗದ ಕಳೆಬರಹ, ಕಾರ್ಯಚರಣೆಯಲ್ಲಿ ಬಿಗ್‌ಟ್ವಿಸ್ಟ್‌

ಮುಂದಿನ ಸುದ್ದಿ
Show comments