Webdunia - Bharat's app for daily news and videos

Install App

ಭಾಸ್ಕರ್ ರಾವ್ ಮನವೊಲಿಸುವಂತೆ ಸಿಎಂಗೆ ಗಡಿ ಹೋರಾಟ ಸಮಿತಿ ಒತ್ತಾಯ

Webdunia
ಭಾನುವಾರ, 19 ಸೆಪ್ಟಂಬರ್ 2021 (11:14 IST)
ಬೆಂಗಳೂರು, ಸೆ.19 : ಅಪ್ಪಟ ಕನ್ನಡಿಗ, ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಅವರ ರಾಜೀನಾಮೆಯನ್ನು ಪಡೆಯುವ ಬದಲು ಅವರನ್ನು ಕರೆಸಿ ಅವರಿಗೆ ಆಗಿರುವ ತೊಂದರೆ ಸರಿಪಡಿಸಿ ಪುನಃ ಅವರನ್ನು ಇಲಾಖೆಗೆ ಗೌರವಯುತವಾಗಿ ಬರಮಾಡಿಕೊಳ್ಳಬೇಕು ಎಂದು ಕರ್ನಾಟಕ ಗಡಿ ಹೋರಾಟ ಸಮಿತಿ ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಿದೆ.
Photo Courtesy: Google

ನಾಡಿನ ಹಿರಿಯರು, ಸಂತರು, ಗುರುವರ್ಯರ ಬಗ್ಗೆ ಅಪಾರ ಗೌರವ ಹೊಂದಿರುವ ಕನ್ನಡದ ಸ್ವಾಭಿಮಾನಿ, ಐಪಿಎಸ್ ಅಧಿಕಾರಿ ಹಾಗೂ ರೈಲ್ವೆ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕರಾದ ಭಾಸ್ಕರ್ ರಾವ್ ಕನ್ನಡ ಜನರ ಹೆಗ್ಗಳಿಕೆಗೆ ಪಾತ್ರರಾದವರು.
ಪೊಲೀಸ್ ಇಲಾಖೆಯ ವಿವಿಧ ವಿಭಾಗಗಳಲ್ಲಿ ಭ್ರಷ್ಟಾಚಾರ, ಶಿಷ್ಟಾಚಾರ ಮತ್ತು ಶಿಸ್ತಿನ ಬದಲಾವಣೆ, ಸಿಬ್ಬಂದಿಯ ಸಮಯ ಪ್ರಜ್ಞೆ ಜಾರಿ ಮಾಡುವಲ್ಲಿ ಭಾಸ್ಕರ್ ರಾವ್ ಅವರು ಕನ್ನಡಿಗರ ಹಾಗೂ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾದವರು. ಇಂತಹ ವ್ಯಕ್ತಿತ್ವದ ಅಧಿಕಾರಿಯ ಮನಸ್ಸಿಗೆ ಘಾಸಿಯಾಗಿ ರಾಜೀನಾಮೆ ಸಲ್ಲಿಸುವ ಮಟ್ಟಕ್ಕೆ ಅವರ ಬಳಿ ಯಾರು ವರ್ತಿಸಿದರೋ ತಿಳಿಯದು. ಆದ್ದರಿಂದ ಮುಖ್ಯಮಂತ್ರಿಗಳು ತಾವೇ ಖುದ್ದು ಭಾಸ್ಕರ್ ರಾವ್ ಅವರನ್ನು ಕರೆದು ಅವರಿಗೆ ಆದ ಅನ್ಯಾಯ ಸರಿಪಡಿಸಿ ಇಲಾಖೆಯಲ್ಲಿಯೇ ಮುಂದುವರೆಯುವಂತೆ ನೋಡಿಕೊಳ್ಳಬೇಕೆಂದು ಕರ್ನಾಟಕ ಗಡಿ ಹೋರಾಟ ಸಮಿತಿ ರಾಜ್ಯಾಧ್ಯಕ್ಷರಾದ ಪ್ರೊ.ಬಿ.ಕೆ.ರಾ.ರಾವ್ಬೈಂದೂರ್ ಹಾಗೂ ಪದಾಧಿಕಾರಿಗಳು ಕೋರಿದ್ದಾರೆ.
ಕಾನೂನು ರೀತಿಯಲ್ಲಿ ಮುಂದಿನ ರಾಜ್ಯ ಪೊಲೀಸ್ ಮಹಾನಿರ್ದೇಶಕರಾಗಬೇಕಾಗಿರುವ ಭಾಸ್ಕರ್ ರಾವ್ ಅವರನ್ನು ಕಾನೂನಾತ್ಮಕವಾಗಿ ಮಹಾ ನಿರ್ದೇಶಕರನ್ನಾಗಿಯೇ ನೇಮಿಸಿಕೊಳ್ಳಬೇಕೆಂದು, ಪರಭಾಷೆ ಅಧಿಕಾರಿಗೆ, ಪ್ರಭಾವಕ್ಕೆ ಮಣೆ ಹಾಕುವ ಯಾವುದೇ ಪ್ರಕ್ರಿಯೆ ನಡೆದರೆ ಕರ್ನಾಟಕ ಗಡಿ ಹೋರಾಟ ಸಮಿತಿ ತಮ್ಮ ಮನೆ ಮುಂದೆ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ಅನಿವಾರ್ಯವಾಗಿ ಕೈಗೊಳ್ಳಬೇಕಾದೀತು ಎಂದು ಅವರು ಮುಖ್ಯಮಂತ್ರಿಗಳಿಗೆ ವಾಟ್ಸಾಪ್ ಮೂಲಕ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾರಿ ಶಕ್ತಿಯ ಚಿಹ್ನೆ ಸಿಂಧೂರ್‌: ಅಹಲ್ಯಾಬಾಯಿ ಹೋಳ್ಕರ್‌ಗೆ ಗೌರವ ಸಲ್ಲಿಸಿದ ಪ್ರಧಾನಿ ಮೋದಿ

London viral video: ಈಕೆ ಕೈಯಲ್ಲಿ ಊಟ ಮಾಡಿದ್ದೇ ತಪ್ಪಾಯ್ತು, ಏನಾಗಿದೆ ವಿಡಿಯೋ ನೋಡಿ

ಕಾಂಗ್ರೆಸ್ ಕಾರ್ಯಕರ್ತರನ್ನು ಸಾಕಲು ತೆರಿಗೆ ಹಣ ಬಳಕೆ: BY ವಿಜಯೇಂದ್ರ ಟೀಕೆ

Karkala: ಸಜೀವ ದಹನವಾದ ಕಂಬಳದ ಚಾಂಪಿಯನ್ ಕೋಣಗಳಿಗೆ ಒಡೆಯನ ಕಣ್ಣೀರ ವಿದಾಯ video

World No Tobbacco Day: ಆರೋಗ್ಯ ದೃಷ್ಟಿಯಲ್ಲಿ ದಿಟ್ಟ ನಿರ್ಧಾರ ಕೈಗೊಂಡ ಸರ್ಕಾರ

ಮುಂದಿನ ಸುದ್ದಿ
Show comments