Webdunia - Bharat's app for daily news and videos

Install App

ಪಕ್ಕದಲ್ಲೊಂದು ಬೋರ್ ವೆಲ್ ಕೊರೆದು ಕಾವೇರಿ ರಕ್ಷಣೆಗೆ ಕಾರ್ಯಾಚರಣೆ

Webdunia
ಭಾನುವಾರ, 23 ಏಪ್ರಿಲ್ 2017 (21:06 IST)
ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಝಂಜರವಾಡದಲ್ಲಿ ಕೊಳವೆ ಬಾವಿಗೆ ಬಿದ್ದಿರುವ 6 ವರ್ಷದ ಬಾಲಕಿ ಕಾವೇರಿ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ.  ಕಳೆದ 28 ಗಂಟೆಗಳಿಂದ ಸತತ ಕಾರ್ಯಾಚರಣೆ ನಡೆದಿದೆ.

ಬಂಡೆಗಲ್ಲು ಅಡ್ಡ ಬಂದಿರುವುದರಿಂದ ಬೋರ್ ವೆಲ್ ಪಕ್ಕದಲ್ಲಿ ಮತ್ತೊಂದು ಬೋರ್ ವೆಲ್ ಕೊರೆದು ಸುರಂಗ ನಿರ್ಮಿಸಿ ಬಾಲಕಿಯ ರಕ್ಷಣೆಗೆ ಕಾರ್ಯತಂತ್ರ ರೂಪಿಸಲಾಗಿದೆ. ಈಗ ಪಕ್ಕದಲ್ಲಿ ಬೋರ್ ವೆಲ್ ಕೊರೆಯುವ ಕಾರ್ಯ ಪ್ರಗತಿಯಲ್ಲಿದೆ. ಬಾಲಕಿ ಕೆಳಗೆ ಬೀಳದಂತೆ ಅಡ್ಡೆಗೋಡೆ ನಿರ್ಮಿಸಿ ಬಳಿಕ ಮಗುವನ್ನ ಮೇಲೆತ್ತುವ ಕಾರ್ಯ ನಡೆಯಲಿದೆ.

ಬೆಳಗ್ಗೆ ಮಗುವಿನ ಬಟ್ಟೆ ಮತ್ತು ಕೈ ಕಂಡುಬಂದರೂ ಹುಕ್ ಮೂಲಕ ಮೇಲೆತ್ತಲು ಐದಾರು ಬಾರಿ ನಡೆಸಿದ ಪ್ರಯತ್ನ ಫಲ ನೀಡಲಿಲ್ಲ. ಅಗ್ನಿಶಾಮಕ ದಳ, ಎನ್`ಡಿಆರ್`ಎಫ್ ಸೇರಿದಂತೆ 500ಕ್ಕೂ ಅಧಿಕ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ತೊಡಗಿದೆ. ಡಿಸಿ, ಎಸ್ಪಿ ಸೇರಿದಂತೆ  ಸ್ಥಳದಲ್ಲೇ ಬೀಡುಬಿಟ್ಟಿದ್ದು, ಕಾರ್ಯಾಚರಣೆಯ ಮೇಲ್ವಿಚಾರಣೆ ನಡೆಸುತ್ತಿದ್ದಾರೆ. ಬಾಲಕಿಯ ತಾಯಿ ಸವಿತಾ ಅಸ್ವಸ್ಥರಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments