Webdunia - Bharat's app for daily news and videos

Install App

ಪಟಾಕಿ ಹಚ್ಚಿದ್ದು ಸಾಕು ಎಂದಿದ್ದಕ್ಕೆ ಆತ್ಮಹತ್ಯೆ

Webdunia
ಗುರುವಾರ, 3 ನವೆಂಬರ್ 2016 (10:47 IST)
ಇಂದಿನ ದಿನಗಳಲ್ಲಿ ಸಾವು ಎಂದರೇನು ಎಂದು ತಿಳಿಯದ ಮಕ್ಕಳು ಕೂಡ ಜೀವನಕ್ಕೆ ಅಂತ್ಯ ಹಾಡಿಕೊಳ್ಳುತ್ತಿದ್ದಾರೆ. ಕಾರಣವೇ ಅಲ್ಲದ ಕಾರಣಕ್ಕೆ ಆತ್ಮಹತ್ಯೆಯಂತಹ ಘೋರ ನಿರ್ಧಾರಕ್ಕೆ ಬರುತ್ತಿದ್ದಾರೆ. ಇಂತಹದೇ ಒಂದು ಘಟನೆ ಮೈಸೂರಿನಲ್ಲಿ ನಡೆದಿದೆ.

ಪಟಾಕಿ ಹಚ್ಚಿದ್ದು ಸಾಕು ಎಂದು ಹೇಳಿದ್ದಕ್ಕೆ ಬಾಲಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಮೈಸೂರಿನ ವಿವಿ ಪುರಂನಲ್ಲಿ ನಡೆದಿದೆ.
 
ಶ್ರೀರಾಂಪುರದ ಮದರ್ ತೆರೇಸಾ ಕಾಲೇಜಿನಲ್ಲಿ ಪ್ರಥಮ ಪಿಯುಸಿ ಓದುತ್ತಿದ್ದ ಗೌರವ್ ಮೃತ ಬಾಲಕ. 
 
ಮಂಗಳವಾರ ಸಂಜೆ ಬಾಲಕ ತಂದೆ ರಾಜೇಶ ಬಳಿ ಗೆಳೆಯರೊಂದಿಗೆ ಪಟಾಕಿ ಹಚ್ಚಲು ಹೋಗುತ್ತೇನೆ ಎಂದಿದ್ದಾನೆ. ಅದಕ್ಕೆ ತಂದೆ ಮೂರು ದಿನಗಳಿಂದ ಪಟಾಕಿ ಹಚ್ಚಿದ್ದು ಸಾಕು, ಇನ್ನು ಮನೆಯಲ್ಲಿದ್ದು ಗಂಭೀರವಾಗಿ ಓದಿಕೋ ಎಂದಿದ್ದಾರೆ. 
 
ಇದರಿಂದ ಬೇಸರಗೊಂಡ ಗೌರವ್ ತನ್ನ ಕೋಣೆಗೆ ಹೋಗಿ ಬಾಗಿಲು ಹಾಕಿಕೊಂಡಿದ್ದಾನೆ. ಕೋಪಗೊಂಡಾಗಲೆಲ್ಲ ಮಗ ಹೀಗೆ ಮಾಡುತ್ತಾನೆ ಎಂದು ತಂದೆ ಅದನ್ನು ಗಂಭೀರವಾಗಿ ತೆಗೆದುಕೊಂಡಿಲ್ಲ. 
 
ಬಹಳ ಹೊತ್ತಾದರೂ ಮಗ ಬಾಗಿಲು ತೆರೆಯದಿದ್ದಾಗ ಗಾಬರಿಗೊಂಡ ತಾಯಿ ಪತಿಯನ್ನು ಕರೆದು ಬಾಗಿಲು ಒಡೆಸಿದಾಗ ಮಗ ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದುಕೊಂಡಿರುವುದು ಪತ್ತೆಯಾಗಿದೆ. ತಕ್ಷಣ ಆತನನ್ನು ಆಸ್ಪತ್ರೆಗೆ ಸೇರಿಸಲಾಯಿತಾದರೂ ಅದಾಗಲೇ ಆತ ಮೃತ ಪಟ್ಟಿದ್ದ.
 
ಮಗನನ್ನು ಕಳೆದುಕೊಂಡಿರುವ ಪೋಷಕರ ಆಕ್ರಂದನವೀಗ ಮುಗಿಲು ಮುಟ್ಟಿದೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜಕೀಯ ನಿವೃತ್ತಿ ಬಳಿಕ ಅಮಿತ್ ಶಾ ಏನು ಮಾಡ್ತಾರೆ: ಪ್ಲ್ಯಾನ್ ರಿವೀಲ್

ರಕ್ಷಣಾ ಸಚಿವ ರಾಜನಾಥ್ ಸಿಂಗ್‌ರನ್ನು ಭೇಟಿಯಾದ ಸಿದ್ದರಾಮಯ್ಯ, ಮೈಸೂರು ದಸರಾದ ಬಗ್ಗೆ ಮುಖ್ಯ ಚರ್ಚೆ

70 ಗಂಟೆ ಕೆಲಸ ಮಾಡಲು ರೆಡಿಯಾ: ನಾರಾಯಣ ಮೂರ್ತಿ ಹೇಳಿಕೆಯಿಂದ ಟ್ರೋಲ್‌ಗೊಳಗಾದ ರಿಷಿ ಸುನಕ್‌

ನಾನು ಪಕ್ಷಾಂತರ ಮಾಡಲ್ಲ, ನನ್ನದು ತಟಸ್ಥ ನಿಲುವು: ಜಿಟಿ ದೇವೇಗೌಡ

ದೇಶಕ್ಕೆ ಮೋದಿ, ರಾಜ್ಯಕ್ಕೆ ಕುಮಾರಸ್ವಾಮಿ ಸಿಎಂ ಆಗ್ಬೇಕು: ನಿಖಿಲ್ ಕುಮಾರಸ್ವಾಮಿ

ಮುಂದಿನ ಸುದ್ದಿ
Show comments