Webdunia - Bharat's app for daily news and videos

Install App

ದೇಗುಲ ಏರಿದ ಬಾಲಕ ಹೆಣವಾಗಿದ್ದು ಹೇಗೆ?

Webdunia
ಶುಕ್ರವಾರ, 1 ಫೆಬ್ರವರಿ 2019 (15:21 IST)
ಪಾರಿವಾಳಗಳ ಮೇಲಿನ ಆಸೆ ಆ ಬಾಲಕನ ಬದುಕನ್ನೇ ಬಲಿತೆಗೆದುಕೊಂಡಿದೆ.

ದೇಗುಲದ ಗೋಪುರದಲ್ಲಿ ಚಿಲಿಪಿಲಿಗುಡುತ್ತಿದ್ದ ಪಾರಿವಾಳಗಳನ್ನು ಹಿಡಿಯಲು ಹೋಗಿದ್ದ ಬಾಲಕನೋರ್ವ ಮೃತಪಟ್ಟ ಘಟನೆ ನಡೆದಿದೆ.

ಚಾಮರಾಜನಗರ ಜಿಲ್ಲೆಯ ಚನ್ನಪ್ಪನ್ನಪುರ ವೀರಭದ್ರಸ್ವಾಮಿ ದೇಗುಲದಲ್ಲಿ ಈ ಘಟನೆ ನಡೆದಿದೆ. ಶಿವು(16) ಮೃತಪಟ್ಟ ಬಾಲಕ. ಗುರುವಾರ ರಾತ್ರಿ ದೇವಾಲಯಕ್ಕೆ ತೆರಳಿದ್ದ ವೇಳೆ ಪಾರಿವಾಳಗಳನ್ನು ಹಿಡಿಯಲು ಶಿವು ದೇಗುಲದ ಗೋಪುರ ಏರಿದ್ದಾನೆ. ಆ ವೇಳೆ ಕಾಲು ಜಾರಿ ಕೆಳಕ್ಕೆ ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎನ್ನಲಾಗಿದೆ.

ಬೆಳಗ್ಗೆ ವಾಯು ವಿಹಾರಿಗಳಿಂದ ಬಾಲಕ ಮೃತಪಟ್ಟ ವಿಷಯ ತಿಳಿದು ಬಂದಿದೆ. ಮರಣೋತ್ತರ ಪರೀಕ್ಷೆಗಾಗಿ ಜಿಲ್ಲಾಸ್ಪತ್ರೆಗೆ ಶವವನ್ನು ರವಾನಿಸಲಾಗಿದೆ. ಚಾಮರಾಜನಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments