Webdunia - Bharat's app for daily news and videos

Install App

ಹೆಬ್ಬಾವಿನ ಜತೆಯಲ್ಲಿ ಸೆಣಸಾಡಿ ಗೆದ್ದ ಬಾಲಕ

Webdunia
ಗುರುವಾರ, 6 ಅಕ್ಟೋಬರ್ 2016 (10:57 IST)
ಪುಟ್ಟ ಬಾಲಕನೋರ್ವ ಹೆಬ್ಬಾವಿನೊಂದಿಗೆ ಸೆಣಸಾಡಿ ಗೆದ್ದ ಅಪರೂಪದ ಸಾಹಸಗಾಥೆ ಮಂಗಳೂರಿನಲ್ಲಿ ನಡೆದಿದೆ.

ಬಂಟ್ವಾಳ ತಾಲ್ಲೂಕಿನ ಸಜಿಪ ಗ್ರಾಮದಲ್ಲಿ ಈ ಘಟನೆ ನಡೆದಿದ್ದು ದೈತ್ಯ ಹಾವಿನ ಜತೆ ಕಾದಾಡಿದ ಬಾಲಕನನ್ನು 
11 ವರ್ಷದ ವೈಶಾಖ್ ಎಂದು ಗುರುತಿಸಲಾಗಿದೆ. ನಿನ್ನೆ ಸಂಜೆ ಕಾಲುದಾರಿಯಲ್ಲಿ ಅಜ್ಜಿಮನೆ ಕಡೆ ನಡೆದು ಹೋಗುತ್ತಿದ್ದ ಬಾಲಕನ ಮೇಲೆ ಪೊದೆಯಲ್ಲಿದ್ದ ಹೆಬ್ಬಾವೊಂದು ದಾಳಿ ಮಾಡಿದೆ.ಬಾಲಕನ ಕೈ ಹಿಡಿದು ನುಂಗಲು ಪ್ರಾರಂಭಿಸಿದೆ. ಪ್ರಾಣಾಪಾಯಕ್ಕೆ ಸಿಲುಕಿದ ಬಾಲಕ ಸಹಾಯಕ್ಕಾಗಿ ಕೂಗಿಕೊಂಡಿದ್ದಾನೆ. ಆದರೆ ಅದು ನಿರ್ಜನ ಪ್ರದೇಶವಾಗಿದ್ದರಿಂದ ಯಾರೂ ಆತನ ಸಹಾಯಕ್ಕೆ ಬಂದಿಲ್ಲ. ಸಮಯಪ್ರಜ್ಞೆ ಮೆರೆದ ಬಾಲಕ ತಕ್ಷಣ ಒಂದು ಚೂಪಾದ ಕಲ್ಲನ್ನೆತ್ತಿಕೊಂಡ ಬಾಲಕ ಹಾವಿನ ಕಣ್ಣಿಗೆ ಅನೇಕ ಬಾರಿ ಜಜ್ಜಿದ್ದಾನೆ. 
 
ಕಣ್ಣಿಗೆ ಬಲವಾದ ನೋವಾಗಿದ್ದರಿಂದ ಹಾವು ಬಾಲಕನನ್ನು ಬಿಟ್ಟು ಪೊದೆಯೊಳಕ್ಕೆ ಹೋಗಿದೆ. 
 
ಹೆಬ್ಬಾವಿಗೆ ವಿಷವಿಲ್ಲದಿದ್ದುದರಿಂದ ಬಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ.  ಕೈಯ್ಯಿಗೆ ಗಾಯಗೊಂಡಿರುವ ಬಾಲಕನ್ನು ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಗೆ ದಾಖಲಿಸಲಾಗಿದೆ.  

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ನಾಟಕ ಸೇರಿ 5 ಹೈಕೋರ್ಟ್‌ಗಳಿಗೆ ಮುಖ್ಯ ನ್ಯಾಯಮೂರ್ತಿಗಳ ನೇಮಕ, ಇಲ್ಲಿದೆ ಡೀಟೆಲ್ಸ್‌

ಮುಂಬೈ: ಆಕಾಸ ಏರ್‌ ಇಂಡಿಯಾ ವಿಮಾನಕ್ಕೆ ಡಿಕ್ಕಿ ಹೊಡೆದ ಕಾರ್ಗೋ ಟ್ರಕ್‌

ಕಾಫ್ ಸಿರಪ್ ವಿಷಯದಲ್ಲಿ ಕೆಮ್ಮುತ್ತಿರುವ ಬಿಜೆಪಿಯವರು ಪುತ್ತೂರು ಬಿಜೆಪಿ ನಾಯಕನ ಪುತ್ರನ ಪ್ರಕರಣದಲ್ಲಿ ಮೌನವೇಕೆ: ಪ್ರಿಯಾಂಕ್ ಖರ್ಗೆ

ತಮಿಳುನಾಡು, 30 ವರ್ಷಗಳಿಂದ ಬೇಕಾಗಿದ್ದ ಮೋಸ್ಟ್ ವಾಟೆಂಡ್‌ ಭಯೋತ್ಪಾದಕರ ಬಂಧನ

ಡ್ರಗ್ಸ್ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ಲಿಂಗರಾಜ್ ಬಂಧನವಾಗುತ್ತಿದ್ದ ಹಾಗೇ ಪಕ್ಷದಿಂದ ಉಚ್ಚಾಟನೆ

ಮುಂದಿನ ಸುದ್ದಿ
Show comments